ವೇಶ್ಯಾವಾಟಿಕೆಯೂ ಒಂದು ಕಾನೂನು ಬದ್ಧ ವೃತ್ತಿ  


Team Udayavani, May 27, 2022, 8:30 AM IST

thumb 3

ಹೊಸದಿಲ್ಲಿ: ವೇಶ್ಯಾವಾಟಿಕೆ ಒಂದು  ವೃತ್ತಿ. ಕಾನೂನಿನ ಅಡಿ ಲೈಂಗಿಕ ಕಾರ್ಯಕರ್ತೆ ಯರಿಗೂ ಗೌರವಯುತವಾಗಿ ಜೀವಿಸಲು ಮತ್ತು ರಕ್ಷಣೆ ಪಡೆಯಲು ಹಕ್ಕು ಇದೆ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ನ್ಯಾ| ಎಲ್‌. ನಾಗೇಶ್ವರ ರಾವ್‌, ನ್ಯಾ| ಬಿ.ಆರ್‌. ಗವಾಯಿ ಮತ್ತು ನ್ಯಾ| ಎ.ಎಸ್‌. ಬೋಪಣ್ಣ ಅವರನ್ನು ಒಳಗೊಂಡ ತ್ರಿಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿದೆ.

ಸಮ್ಮತಿ ಸಹಿತ ವೇಶ್ಯಾ ವಾಟಿಕೆಯಲ್ಲಿ ತೊಡಗಿ ರುವವರ ವಿರುದ್ಧ ಪೊಲೀಸರು ಕ್ರಿಮಿನಲ್‌ ಕ್ರಮ ಕೈಗೊಳ್ಳುವಂತಿಲ್ಲ ಎಂದು ನ್ಯಾಯಪೀಠ ಸೂಚಿಸಿದೆ. ನ್ಯಾಯಪೀಠವು ಲೈಂಗಿಕ ಕಾರ್ಯಕರ್ತೆಯರ ರಕ್ಷಣೆಯ ನಿಮಿತ್ತ ಆರು ನಿರ್ದೇಶನಗಳನ್ನು ನೀಡಿದೆ. ಲೈಂಗಿಕ ಕಾರ್ಯ ಕರ್ತರನ್ನು ಪೊಲೀಸರು ಹಿಂಸಿಸುವುದು ಮತ್ತು ತುತ್ಛವಾಗಿ ನೋಡುವಂತಿಲ್ಲ ಎಂದಿದೆ.

ಒಂದು ವೇಳೆ ದಾಳಿ ನಡೆದಲ್ಲಿ ಅವರನ್ನು ಬಂಧಿಸಬಾ ರದು, ದಂಡ ವಿಧಿಸಬಾ ರದು ಎಂದು ಹೇಳಿದೆ. ವೇಶ್ಯಾಗೃಹ ಗಳನ್ನು ನಡೆಸುವುದು ಕಾನೂನಿನ ಮಿತಿಯಲ್ಲಿ ಅಪರಾಧ. ಆದರೆ ಸ್ವಯಂಪ್ರೇರಿತವಾಗಿ ಲೈಂಗಿಕ ಕಾರ್ಯಕರ್ತೆಯಾಗುವುದು ಅಪರಾಧವಲ್ಲ. ಪ್ರಾಪ್ತ ವಯಸ್ಕರೇ ಲೈಂಗಿಕ ಕಾರ್ಯಕರ್ತ ರಾಗಿರುವುದರಿಂದ ಅವರು ಸ್ವಯಂ ನಿರ್ಧಾರದಿಂದಲೇ ಈ ವೃತ್ತಿಯನ್ನು ಪ್ರವೇಶಿಸುತ್ತಾರೆ. ಹೀಗಾಗಿ ಪೊಲೀಸರ ಮಧ್ಯಪ್ರದೇಶ ಪ್ರಶ್ನಾರ್ಹ. ಆದ್ದರಿಂದ ಕಾನೂನು ಜಾರಿ ಸಂಸ್ಥೆಗಳು ತಾಳ್ಮೆ ವಹಿಸುವುದು ಅಗತ್ಯ.

ಮಾಧ್ಯಮಗಳು ಕೂಡ ವೇಶ್ಯಾಗೃಹಗಳಿಗೆ ದಾಳಿ ನಡೆದಾಗ ಲೈಂಗಿಕ ಕಾರ್ಯಕರ್ತೆಯರ ಬಗ್ಗೆ ವರದಿ ಮಾಡುವ ಸಂದರ್ಭದಲ್ಲಿ ಅವರ ವಿವರಗಳನ್ನು ಪ್ರಕಟಿಸುವಲ್ಲಿ ವಿವೇಚನೆ ಪ್ರದರ್ಶಿಸಬೇಕು ಎಂದು ಅಭಿಪ್ರಾಯಪಟ್ಟಿದೆ. ತಾಯಿ ವೇಶ್ಯಾವಾಟಿಕೆ ನಡೆಸುತ್ತಿದ್ದಾಳೆ ಎಂಬ ಕಾರಣಕ್ಕೆ ಆಕೆಯ ಮಗುವನ್ನು ಬೇರ್ಪಡಿಸುವಂತಿಲ್ಲ ಎಂದು ಕೋರ್ಟ್‌ ಹೇಳಿದೆ.

ಕಾನೂನಿನಲ್ಲಿ ಏನಿದೆ? :

ಐಪಿಸಿ ಅನ್ವಯ ವೇಶ್ಯಾವಾಟಿಕೆ ಯನ್ನು ಪೂರ್ಣವಾಗಿ ಅಪರಾಧ ಎನ್ನಲಾಗದು. ಈ ಕೆಳಗಿನ ಅಂಶಗಳು ಕಾನೂನಿನ ಅನ್ವಯ ಅಪರಾಧ:

  • ಸಾರ್ವಜನಿಕ ಸ್ಥಳಗಳಲ್ಲಿ ವೇಶ್ಯಾವಾಟಿಕೆಗೆ ಆಹ್ವಾನ
  • ಹೊಟೇಲ್‌ಗ‌ಳಲ್ಲಿ ವೇಶ್ಯಾವಾಟಿಕೆ ನಡೆಸುವುದು
  • ಲೈಂಗಿಕ ಕಾರ್ಯಕರ್ತರನ್ನು ಬಳಕೆ ಮಾಡಿಕೊಂಡು ವೇಶ್ಯಾ ವಾಟಿಕೆ ನಡೆಸುವುದು
  • ಗ್ರಾಹಕನಿಗೆ ಲೈಂಗಿಕ ಕಾರ್ಯ ಕರ್ತೆಯನ್ನು ಪೂರೈಸಿ ಲೈಂಗಿಕ ಕ್ರಿಯೆಗೆ ಪ್ರೋತ್ಸಾಹ
  • ಅನೈತಿಕ ಚಟುವಟಿಕೆಗಳ ತಡೆ ಕಾಯ್ದೆಯ ಅಡಿಯೂ ಲೈಂಗಿಕ ಕಾರ್ಯಕರ್ತೆಯರನ್ನು ಬಂಧಿ ಸಲು ಅವಕಾಶ ಇದೆ.

ಟಾಪ್ ನ್ಯೂಸ್

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

14-panaji

Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

1-qweqwe

Kushtagi: ಸಿಡಿಲಿಗೆ ಬಿತ್ತನೆ ಕಾರ್ಯ ನಿರತ ರೈತ ಬಲಿ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.