ಬ್ಯಾರಿಕೇಡ್‌ ಏಕಾಏಕಿ ತೆರವು: ಅಪಘಾತ ಸಂಭವ ಭೀತಿ?

ರಾಷ್ಟ್ರೀಯ ಹೆದ್ದಾರಿಯಲ್ಲಿ ಮೂಲ್ಕಿ - ಮುಕ್ಕದವರೆಗೆ

Team Udayavani, May 27, 2022, 9:58 AM IST

haleyangadi

ಹಳೆಯಂಗಡಿ/ ಮೂಲ್ಕಿ: ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸುವ ಮೂಲ್ಕಿ ಬಪ್ಪನಾಡು ಪ್ರದೇಶದಿಂದ ಮುಕ್ಕದವರೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಳವಡಿಸಲಾಗಿದ್ದ ಎಲ್ಲ ಬ್ಯಾರಿಕೇಡ್‌ ಗಳನ್ನು ಏಕಾಏಕಿ ತೆರವು ಮಾಡಲಾಗಿದೆ. ಇದರಿಂದ ವಾಹನಗಳು ವೇಗದಮಿತಿ ಇಲ್ಲದೇ ಸಂಚರಿಸಲಾರಂಭಿಸಿದ್ದು, ಪಾದಚಾರಿಗಳಿಗೆ ಅಪಘಾತದ ಆತಂಕ ಎದುರಾಗಿದೆ.

ಬಪ್ಪನಾಡು ದೇವಸ್ಥಾನದ ದ್ವಾರದ ಬಳಿ, ಮೂಲ್ಕಿ ಬಸ್‌ ನಿಲ್ದಾಣದ ಹತ್ತಿರ, ಕಾರ್ನಾಡು ಬೈಪಾಸ್‌, ಹಳೆಯಂಗಡಿ ಮುಖ್ಯ ಜಂಕ್ಷನ್‌, ಪಾವಂಜೆ ದೇವಸ್ಥಾನದ ಪ್ರದೇಶ, ಮುಕ್ಕದ ಮುಖ್ಯ ಜಂಕ್ಷನ್‌ನಲ್ಲಿ ವಿವಿಧ ಸಂಘ – ಸಂಸ್ಥೆಗಳು, ವ್ಯಾಪಾರಿಗಳು ಸಂಚಾರಿ ಪೊಲೀಸರ ವಿನಂತಿಯಂತೆ ನೀಡಿದ್ದ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು. ಈ ಪ್ರದೇಶದಲ್ಲಿ ಅಪಘಾತಗಳು ಸಹ ಸಾಕಷ್ಟು ನಿಯಂತ್ರಣದಲ್ಲಿತ್ತು. ಇದನ್ನು ಸ್ಥಳೀಯ ರಿಕ್ಷಾ ಚಾಲಕರು, ವ್ಯಾಪಾರಿಗಳು, ಸೇವಾ ಸಂಸ್ಥೆಗಳ ಪ್ರಮುಖರು ಬೆಳಗ್ಗೆ ಅಳವಡಿಸಿ, ರಾತ್ರಿ ಸಮಯದಲ್ಲಿ ತೆರವು ಮಾಡುತ್ತಿದ್ದರು.

ಒಂದು ಮೂಲದ ಪ್ರಕಾರ ಹಿರಿಯ ಅಧಿಕಾರಿಗಳು ಜಿಲ್ಲೆಗೆ ಭೇಟಿ ನೀಡುವುದರಿಂದ ಈ ವ್ಯವಸ್ಥೆ ಆಗಿದೆ ಎಂದು ಹೇಳಿಕೊಂಡರೂ ಅದನ್ನು ಅಧಿಕಾರಿಗಳೇ ಅಲ್ಲಗಳೆಯುತ್ತಾರೆ. ಉನ್ನತ ಅಧಿಕಾರಿಗಳ ಸೂಚನೆಯನ್ನು ಸಂಚಾರಿ ಪೊಲೀಸರು ಪಾಲಿಸಿದ್ದಾರೆ ಎಂದು ಹೇಳಲಾಗಿದೆ. ಎರಡು ದಿನಗಳಲ್ಲಿ ಬಪ್ಪನಾಡು ಹಾಗೂ ಮೂಲ್ಕಿ ಬಸ್‌ ನಿಲ್ದಾಣದ ಮುಖ್ಯ ಜಂಕ್ಷನ್‌ನಲ್ಲಿ ಟಿಪ್ಪರ್‌ ಹಾಗೂ ಇನೋವಾ ಕಾರು ಮಗುಚಿ ಬಿದ್ದ ಘಟನೆಯೂ ಸಂಭವಿಸಿವೆ. ಹಳೆಯಂಗಡಿ ಜಂಕ್ಷನ್‌ನಲ್ಲಿಯೂ ಸಣ್ಣ ಪುಟ್ಟ ಅಪಘಾತದ ಘಟನೆಗಳೂ ನಡೆದಿದ್ದು ಇದಕ್ಕೆ ವೇಗ ನಿಯಂತ್ರಕ ಇಲ್ಲದೇ ಇರುವುದು ಕಾರಣ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಹೊರಗಿನ ಪ್ರಯಾಣಿಕರಿಗೆ ತೊಂದರೆ

ಮಳೆಗಾಲದ ಸಮಯದಲ್ಲಿ ಆಗಮಿಸುವ ಹೊರಗಿನ ವಾಹನ ಪ್ರಯಾ ಣಿಕರಿಗೆ ಬ್ಯಾರಿಕೇಡ್‌ಗಳಿಂದ ತೊಂದರೆಯಾಗುತ್ತಿದೆ. ಸಂಚಾರದ ನಿಯಂತ್ರಣ ಇಲ್ಲದೇ ಬ್ಯಾರಿಕೇಡ್‌ಗಳಿಗೆ ಢಿಕ್ಕಿ ಹೊಡೆದು ಸಾಕಷ್ಟು ಸಾವು ನೋವು ಸಂಭವಿಸುತ್ತವೆ. ಸರಿಯಾದ ರಿಫ್ಲೆಕ್ಟರ್‌ ಸಹ ಇರುವುದಿಲ್ಲ, ಮುರಿದಿರುವ ಬ್ಯಾರಿಕೇಡ್‌ ಗಳು ಸಹ ಹೆದ್ದಾರಿ ಸಂಚಾರಕ್ಕೆ ಅಡಚಣೆಯಾಗಿದೆ. ಖಾಸಗಿ ಜಾಹೀರಾತುಗಳನ್ನು ಅಳವಡಿಸಿರುವುದೂ ಕಂಡು ಬಂದಿದೆ. ಕೆಲವರು ಅಂಗಡಿಗಳ ಮುಂದೆ ಅಕ್ರಮವಾಗಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಪಾರ್ಕಿಂಗ್‌ಗೆ ತೊಂದರೆ ಕೊಡುವುದು ಕಂಡು ಬಂದಿದೆ. ಮುಖ್ಯ ಜಂಕ್ಷನ್‌ಗಳಲ್ಲಿ ಅಗತ್ಯವಿದ್ದಲ್ಲಿ ಚರ್ಚಿಸಿ ಅಳವಡಿಸುವ ಚಿಂತನೆ ಮಾಡುತ್ತೇವೆ. -ಹರಿರಾಮ್‌ ಶಂಕರ್‌, ಡಿಸಿಪಿ ಕಾನೂನು ಮತ್ತು ಸುವ್ಯವಸ್ಥೆ ಕಮಿಷನರೆಟ್‌, ಮಂಗಳೂರು

ನಾಗರಿಕರ ಬೇಡಿಕೆಗೆ ಸ್ಪಂದನೆ  

ಹಳೆಯಂಗಡಿಯ ಮುಖ್ಯ ಜಂಕ್ಷನ್‌ನಲ್ಲಿ ಏಕಾಏಕಿ ಬ್ಯಾರಿಕೇಡ್‌ ತೆರವು ಮಾಡಿರುವುದರಿಂದ ಸಾಕಷ್ಟು ದೂರುಗಳು ಸ್ಥಳೀಯ ರಿಕ್ಷಾ ಚಾಲಕರ ಸಹಿತ ನಿತ್ಯ ಪ್ರಯಾಣಿಕರಿಂದ ಬಂದಿವೆ. ದೂರವಾಣಿ ಮೂಲಕ ಪೊಲೀಸ್‌ ಅಧಿಕಾರಿಗಳಲ್ಲಿ ಮಾತನಾಡಿದ್ದೇನೆ, ಅಧಿಕೃತವಾಗಿ ಪಂಚಾಯತ್‌ನಿಂದ ಪತ್ರವನ್ನು ನೀಡುವಂತೆ ಕ್ರಮ ಕೈಗೊಳ್ಳಲಾಗಿದೆ. ಅಪಾಯಕಾರಿ ಜಂಕ್ಷನ್‌ನಲ್ಲಿ ವೇಗ ನಿಯಂತ್ರಣ ಅತೀ ಅಗತ್ಯವಾಗಿ ಬೇಕಾಗಿದೆ. -ಪೂರ್ಣಿಮಾ, ಅಧ್ಯಕ್ಷರು, ಗ್ರಾ.ಪಂ., ಹಳೆಯಂಗಡಿ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.