ಇಂದಿರಾ ಕ್ಯಾಂಟೀನ್‌ಗೆ ಇಸ್ಕಾನ್‌ ಊಟ; ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆ

ಶೆಫ್‌ಟಾಕ್‌, ರಿವಾರ್ಡ್ಸ್‌ ಮತ್ತು ಅದಮ್ಯ ಚೇತನ ಸಂಸ್ಥೆಗಳು ಊಟ ಸರಬರಾಜು ಮಾಡುತ್ತಿವೆ.

Team Udayavani, May 27, 2022, 1:15 PM IST

ಇಂದಿರಾ ಕ್ಯಾಂಟೀನ್‌ಗೆ ಇಸ್ಕಾನ್‌ ಊಟ; ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆ ಗುತ್ತಿಗೆಯನ್ನು ಇಸ್ಕಾನ್‌ ಸಂಸ್ಥೆಗೆ ವಹಿಸುವಂತೆ ಇನ್ನೆರಡು ದಿನಗಳಲ್ಲಿ ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತೆ ತುಳಸಿ ಮದ್ದಿನೇನಿ ತಿಳಿಸಿದರು.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಗುರುವಾರಸುದ್ದಿಗಾರರೊಂದಿಗೆ ಮಾತನಾಡಿ, ಇಂದಿರಾ ಕ್ಯಾಂಟೀನ್‌ ಸಾಮಾಜಿಕ ಕಳಕಳಿಯ ಯೋಜನೆ.ಹೀಗಾಗಿ ಜನರಿಗೆ ಗುಣಮಟ್ಟದ ಆಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಇಸ್ಕಾನ್‌ ಸಂಸ್ಥೆಯು ಅಕ್ಷಯಪಾತ್ರೆ, ಅಕ್ಷಯ ನಿಧಿ ಸೇರಿ 3 ಸಂಸ್ಥೆಗಳಿಂದ ವಿವಿಧೆಡೆ ಆಹಾರ ಪೂರೈಸುತ್ತಿದೆ. ಹೀಗಾಗಿ ಇಂದಿರಾ ಕ್ಯಾಂಟೀನ್‌ಗಳಿಗೂ ಆಹಾರ ಪೂರೈಸಲು ಗುತ್ತಿಗೆ ನೀಡುವಂತೆ ಪ್ರಸ್ತಾವನೆ ಸಿದ್ಧಪಡಿಸಿ ನಗರಾಭಿವೃದ್ಧಿ ಇಲಾಖೆಗೆ
ಕಳುಹಿಸಲಾಗುವುದು ಎಂದು ಹೇಳಿದರು.

ಇಸ್ಕಾನ್‌ ಊಟದಲ್ಲಿ ಬೆಳ್ಳುಳ್ಳಿ ಹಾಕುವುದಿಲ್ಲ ಎಂಬ ಮಾತಿದೆ. ಆದರೆ, ಅದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯಿಂದ ಇಸ್ಕಾನ್‌ಗೆ ಯಾವುದೇ ಸೂಚನೆ ನೀಡುವುದಿಲ್ಲ. ಆದರೆ ಆಹಾರದ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡದಂತೆ ಪೂರೈಸಲು ಸೂಚಿಸಲಾಗುವುದು ಎಂದರು.

ಅದಮ್ಯ ಚೇತನದಿಂದಲೂ ಮನವಿ: ಪಾಲಿಕೆ ವ್ಯಾಪ್ತಿಯಲ್ಲಿ 178 ಇಂದಿರಾ ಕ್ಯಾಂಟೀನ್‌ ಹಾಗೂ ಉಳಿದವು ಮೊಬೈಲ್‌ ಕ್ಯಾಂಟೀನ್‌ಗಳು ಕಾರ್ಯ ನಿರ್ವಹಿಸುತ್ತಿವೆ. ಇದರಲ್ಲಿ ಶೆಫ್‌ಟಾಕ್‌, ರಿವಾರ್ಡ್ಸ್‌ ಮತ್ತು ಅದಮ್ಯ ಚೇತನ ಸಂಸ್ಥೆಗಳು ಊಟ ಸರಬರಾಜು ಮಾಡುತ್ತಿವೆ. ಇದೀಗ ಸಾಮಾಜಿಕ ಹೊಣೆಗಾರಿಗೆ ಆಧಾರದಲ್ಲಿ ಆಹಾರ ಪೂರೈಕೆ ಅವಧಿಯನ್ನು ವಿಸ್ತರಿಸುವಂತೆ ಅದಮ್ಯ ಚೇತನ ಸಂಸ್ಥೆ ಕೋರಿದೆ. ಈ ಬಗ್ಗೆ ಸರ್ಕಾರ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು.

ಹಿಂದಿನ ಸಂಸ್ಥೆಗಳ ಬಿಲ್‌ ಪಾವತಿ: ಇಂದಿರಾ ಕ್ಯಾಂಟೀನ್‌ಗೆ ಆಹಾರ ಸರಬರಾಜು ಮಾಡುತ್ತಿದ್ದ ಶೆಫ್‌ಟಾಕ್‌ ಮತ್ತು ರಿವಾರ್ಡ್ಸ್‌ ಸಂಸ್ಥೆಗೆ ಹಲವು ವರ್ಷಗಳಿಂದ ಬಿಲ್‌ ಬಾಕಿ ಉಳಿಸಿಕೊಳ್ಳಲಾಗಿತ್ತು. ಕಳೆದ ಮೇ 20ರ ಒಳಗಿನ ಎಲ್ಲ ಬಾಕಿ ಬಿಲ್‌ ಗಳನ್ನು ಪಾವತಿಸಲಾಗಿದೆ. ನಿತ್ಯ ಊಟ ಸರಬರಾಜು ಮಾಡುತ್ತಿದ್ದ ಮಾಹಿತಿಯನ್ನು ಪಾಲಿಕೆಯ ಮಾರ್ಷಲ್‌ಗ‌ಳು ವರದಿ ನೀಡಿದ್ದಾರೆ. ಈ ಆಧಾರದಲ್ಲಿ ಗುತ್ತಿಗೆ ಸಂಸ್ಥೆಗಳಿಗೆ ಬಿಲ್‌ ಪಾವತಿಸಲಾಗಿದೆ. ಕೆಲವೆಡೆ ಗುತ್ತಿಗೆ ಸಂಸ್ಥೆಗಳು ನೀಡಿದ ಊಟ ಸರಬರಾಜು ಲೆಕ್ಕ ಮತ್ತು ಮಾರ್ಷಲ್‌ಗ‌ಳು ನೀಡಿದ ಲೆಕ್ಕದಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಅದನ್ನು ಪರಿಶೀಲಿಸಿ ಬಿಲ್‌ ಪಾವತಿ ಮಾಡುವುದಾಗಿ ಆದೇಶಿಸಲಾಗಿದೆ ಎಂದು ತುಳಸಿ ಮದ್ದಿನೇನಿ ತಿಳಿಸಿದರು.

ದಿನಕ್ಕೆ 78 ರೂ. ಬೇಡಿಕೆ
ಪ್ರಸ್ತುತ 2017ರಲ್ಲಿ ನಿಗದಿಯಾದ ದರದಂತೆ ಇಂದಿರಾ ಕ್ಯಾಂಟೀನ್‌ಗೆ ಆಹಾರ ಸರಬರಾಜು ಮಾಡಲಾಗುತ್ತಿದೆ. ಅದರಂತೆ ಒಂದು ದಿನದ ಊಟಕ್ಕೆ (2 ಊಟ, 1 ಉಪಹಾರ) 55.30 ರೂ. ದರವಿದ್ದು, ಅದರಲ್ಲಿ ಫಲಾನುಭವಿಗಳು 25 ರೂ. (ಬೆಳಗ್ಗೆ ತಿಂಡಿಗೆ 5 ರೂ., ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ ತಲಾ 10 ರೂ.) ಪಾವತಿಸುತ್ತಿದ್ದಾರೆ. ಇದೀಗ ಇಸ್ಕಾನ್‌ ಸಂಸ್ಥೆ 78 ರೂ.ಗೆ ಬೇಡಿಕೆ ಇಟ್ಟಿದೆ. ಆ ಕುರಿತು ಮಾತುಕತೆ ನಡೆಸಿ ದರ ನಿಗದಿ ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.