ಮಕ್ಕಳ ಸೃಜನಶೀಲತೆ ಪೋಷಣೆ ಅಗತ್ಯ
ಉಚಿತ ಬೇಸಿಗೆ ಶಿಬಿರಕ್ಕೆ ಚಿತ್ತಾರ ಬಿಡಿಸುವ ಮೂಲಕ ಚಾಲನೆ
Team Udayavani, May 27, 2022, 2:33 PM IST
ಮುಂಡರಗಿ: ರಾಜ್ಯ ಸರಕಾರ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಎಸ್.ಎಂ. ಭೂಮರಡ್ಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗಾಗಿ ಹಮ್ಮಿಕೊಂಡ ಉಚಿತ ಬೇಸಿಗೆ ಶಿಬಿರವನ್ನು ಸಿಡಿಪಿಒ ಮಹದೇವ ಇಸರನಾಳ ಮಕ್ಕಳೊಂದಿಗೆ ಚಿತ್ತಾರ ಬಿಡಿಸುವ ಮೂಲಕ ಉದ್ಘಾಟಿಸಿದರು.
ನಂತರ ಮಾತನಾಡಿದ ಸಿಡಿಪಿಒ ಮಹದೇವ ಇಸರನಾಳ ಅವರು, ಬಾಲಭವನವು ಪ್ರತಿವರ್ಷ ಮಕ್ಕಳಿಗಾಗಿ ಉಚಿತ ಬೇಸಿಗೆ ಶಿಬಿರಗಳನ್ನು ಸಂಘಟಿಸುತ್ತಿದ್ದು, ಮಕ್ಕಳು ಇದರ ಲಾಭ ಪಡೆಯಲಿದ್ದಾರೆ. ಇಲಾಖೆ ಸಹಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆ ಉಸ್ತುವಾರಿಯಲ್ಲಿ ಈ ಶಿಬಿರ ನಡೆಯಲಿದ್ದು ಮಕ್ಕಳಲ್ಲಿ ಕಲೆ ಸಾಹಿತ್ಯ ಸಂಸ್ಕೃತಿಯ ಬಗ್ಗೆ ಆಸಕ್ತಿ ಮೂಡುವಂತೆ ಮಾಡಲು ನೃತ್ಯ, ಸಂಗೀತ, ಸಾಹಿತ್ಯ, ಚಿತ್ರಕಲೆ, ಕಾಗದ ಕುಸರಿಕಲೆ, ಯೋಗ, ನಾಟಕ ಮೊದಲಾದ ಚಟುವಟಿಕೆಗಳಲ್ಲಿ ತೊಡಗಿಸಲಾಗುತ್ತಿದೆ. ಆಯಾ ಕ್ಷೇತ್ರದಲ್ಲಿ ನುರಿತ ಸಂಪನ್ಮೂಲವ್ಯಕ್ತಿಗಳು ಮಕ್ಕಳಿಗೆ ತರಬೇತಿ ನೀಡಲಿದ್ದಾರೆ. ಒಂದು ದಿನ ಹೊರಸಂಚಾರ ಕೂಡ ಶಿಬಿರದಲ್ಲಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಡಾ| ನಿಂಗು ಸೊಲಗಿ ಮಾತನಾಡಿ, ಮಕ್ಕಳ ಸೃಜನಶೀಲತೆ ಪೋಷಿಸಲು ಇಂಥ ಶಿಬಿರಗಳ ಅಗತ್ಯತೆ ಇದ್ದು, ಬೇಸಿಗೆ ಅವಧಿಯಲ್ಲಿ ಹಲವೆಡೆ ಶಿಬಿರಗಳು ನಡೆಯುತ್ತವೆಯಾದರೂ ಉಚಿತವಾಗಿ ಇರುವುದಿಲ್ಲ. ಈ ಹಿನ್ನೆಲೆಯಲ್ಲಿ ಬಾಲಭವನ ಸೊಸೈಟಿ ಉಚಿತ ಶಿಬಿರಗಳನ್ನು ಹಮ್ಮಿಕೊಂಡಿದ್ದು, ಬಡ ಮಕ್ಕಳಿಗೂ ಇದರ ಲಾಭ ತಟ್ಟುವಂತೆ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಇದರ ಔಚಿತ್ಯವನ್ನರಿತೇ ಸಾರ್ವಜನಿಕ ಶಿಕ್ಷಣ ಇಲಾಖೆ ಬೇಸಿಗೆ ರಜಾ ಅವಧಿಯ ನಂತರ ಹದಿನೈದು ದಿನ ಬೇಗನೇ ಶಾಲೆ ಆರಂಭಿಸಿ ಮಳೆಗಾಲದ ಮುನ್ನ ಮಕ್ಕಳಿಗೆ ಮಳೆಬಿಲ್ಲು ಹೆಸರಿನಲ್ಲಿ ಸೃಜನಶೀಲ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಹೊಸ ಹೆಜ್ಜೆ ಇರಿಸಿದೆ ಎಂದರು.
ಬಿಆರ್ಸಿ ಸಂಪನ್ಮೂಲವ್ಯಕ್ತಿ ಬಿ.ಎಚ್. ಸೂಡಿ, ಸಿಆರ್ಪಿ ಎಸ್.ಡಿ. ಬಸೆಗೌಡರ ಮಾತನಾಡಿದರು. ಶಿಬಿರ ಸಂಚಾಲಕ ಸತ್ಯಪ್ಪ ಸತ್ಯಮ್ಮನಗುಡಿ, ಆರ್. ಎಸ್. ಚವಡಿ, ಎಂ.ಪಿ. ಶೀರನಹಳ್ಳಿ, ಎಸ್.ಎನ್. ಪಾಟೀಲ, ಕೆ.ಎಂ. ರತ್ನಕಟ್ಟಿ, ಡಿ.ಎಚ್. ಭಜಂತ್ರಿ ಉಪಸ್ಥಿತರಿದ್ದರು.
ಸುಜಾತಾ ಬೆಟಗೇರಿ ಸ್ವಾಗತಿಸಿದರು. ಎಸ್.ಎಚ್. ಪೂಜಾರ ನಿರೂಪಿಸಿದರು. ಬಿ.ಕೆ. ಮಾದರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ