ವಿವಿಧ ಬೇಡಿಕೆ ಈಡೇರಿಕೆಗೆ ಬಿಸಿಯೂಟ ಕಾರ್ಮಿಕರ ಆಗ್ರಹ


Team Udayavani, May 27, 2022, 3:16 PM IST

18demand

ವಿಜಯಪುರ: ನಿವೃತ್ತಿ ಅಂಚಿನಲ್ಲಿರುವ ಬಿಸಿಯೂಟ ಕಾರ್ಮಿಕರಿಗೆ ಸೂಕ್ತ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ತಮ್ಮ ಬೇಡಿಕೆಗಳ ಫಲಕಗಳನ್ನು ಪ್ರದರ್ಶಿಸಿ, ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಐಯುಟಿಯುಸಿ ಜಿಲ್ಲಾಧ್ಯಕ್ಷ ಎಚ್‌.ಟಿ.ಮಲ್ಲಿಕಾರ್ಜುನ, ಕಳೆದ 20 ವರ್ಷಗಳಿಂದ ಪುಡಿಗಾಸಿನ ವೇತನ ನೀಡಿ ದಿನವಿಡಿ ಸೇವೆ ತೆಗೆದುಕೊಂಡು ದಿಢೀರನೇ ಯಾವುದೇ ಪರಿಹಾರ ಇಲ್ಲದೆ ಬಿಸಿಯೂಟ ಕಾರ್ಯಕರ್ತೆಯರನ್ನು ಮನೆಗೆ ಕಳುಹಿಸಿರುವ ರಾಜ್ಯ ಸರ್ಕಾರದ ಕ್ರಮ ಅಮಾನವೀಯ ಎಂದು ಹರಿಹಾಯ್ದರು.

ರಾಜ್ಯಾದ್ಯಂತ ಮಕ್ಕಳಿಗೆ ಜ್ಞಾನದ ಹಸಿವನ್ನು ನೀಗಿಸುವ ಶಾಲೆಗಳಲ್ಲಿ ಹೊಟ್ಟೆ ಹಸಿವನ್ನು ನೀಗಿಸುವ ಬಿಸಿಯೂಟ ಕಾರ್ಮಿಕರು ತಮ್ಮ ಇಡಿ ಯವ್ವನವನೇ° ಈ ಕೆಲಸದಲ್ಲಿ ಸವೆಸಿದ್ದಾರೆ. ಇಂದಿನ ಬೆಲೆಯೇರಿಕೆ ದಿನಗಳಿಗೆ ಹೋಲಿಸಿದ್ದಲ್ಲಿ ಅತ್ಯಂತ ಕಡಿಮೆ ಗೌರವಧನದಲ್ಲಿ ದುಡಿಯುವಂತಹ ಪರಿಸ್ಥಿತಿ ಇದೆ ಎಂದು ವಿವರಿಸಿದರು.

ಸಂಘಟನೆ ಜಿಲ್ಲಾ ಸಂಚಾಲಕಿ ಶಶಿಕಲಾ ಮ್ಯಾಗೇರಿ ಮಾತನಾಡಿ, ಇದೀಗ ನಮ್ಮನ್ನು ರಾಜ್ಯ ಸರ್ಕಾರವು 60 ವರ್ಷವಾಗಿದೆ ಎಂಬ ನೆಪವೊಡ್ಡಿ ಯಾವುದೇ ಪರಿಹಾರ ನೀಡದೇ ನಿವೃತ್ತಿ ಹೆಸರಿನಲ್ಲಿ ಸುಮಾರು 12 ಸಾವಿರ ಬಿಸಿಯೂಟ ಕಾರ್ಮಿಕರನ್ನು ಮನೆಗೆ ಕಳಿಸಲು ಆದೇಶ ನೀಡಿದೆ. ಈ ಸರಕಾರದ ನೀತಿಯನ್ನು ಇಡಿ ಬಿಸಿಯೂಟ ಕಾರ್ಯಕರ್ತೆಯರು ಇದನ್ನು ಪ್ರತಿಭಟಿಸಬೇಕೆಂದು ಕರೆ ನೀಡಿದರು.

ಸುಮಾರು ಇಪ್ಪತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಬಿಸಿಯೂಟ ಕಾರ್ಯಕರ್ತೆಯರಿಗೆ ನಿವೃತ್ತಿ ವೇತನ ಅಥವಾ ಇಡಿಗಂಟು ಎರಡರಲ್ಲಿ ಯಾವುದಾದರೂ ಒಂದನ್ನೂ ಕೊಡದೇ ಕೆಲಸದಿಂದ ಹೊರ ಹಾಕುತ್ತಿರುವುದು ಅತ್ಯಂತ ಅಮಾನವೀಯ ಎಂದು ಅಳಲು ತೋಡಿಕೊಂಡರು.

ಸಹ ಸಂಚಾಲಕಿ ಬಸಮ್ಮ ಬೋಳಿ ಮಾತನಾಡಿ, ಸರ್ಕಾರ ಕೂಡಲೇ ಕ್ರಮವಹಿಸಿ ಈ ಕಾರ್ಯಕರ್ತೆಯರ ನಿವೃತ್ತಿ ಜೀವನ ಭದ್ರತೆಗಾಗಿ, ನಿವೃತ್ತಿ ವೇತನ ಅಥವಾ ಇಡಿಗಂಟು ನಿಗದಿ ಮಾಡಿ ಘೋಷಣೆ ಮಾಡಬೇಕು. ನಿವೃತ್ತಿ ವೇತನ ಅಥವಾ ಇಡಿಗಂಟು ಎರಡರಲ್ಲಿ ಯಾವುದಾದರೂ ಒಂದು ನೀಡುವವರೆಗೆ ಈ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆದು ಹಾಕದೆ ಇವರನ್ನು ಸೇವೆಯಲ್ಲಿ ಮುಂದುವರಿಸಬೇಕು ಎಂದು ಒತ್ತಾಯಿಸಿದರು.

ಯಾವುದೇ ಪರಿಹಾರ ನೀಡದೇ 12 ಸಾವಿರ ಅಕ್ಷರ ದಾಸೋಹ ಕಾರ್ಮಿಕರನ್ನು ನಿವೃತ್ತಿಗೊಳಿಸಿ ಹೊರಡಿಸಿರುವ ಸರ್ಕಾರದ ಆದೇಶನ್ನು ಈ ಕೂಡಲೇ ಹಿಂಪಡೆಯುವುದು, ನಿವೃತ್ತಿಯಾಗುವ ಅಕ್ಷರ ದಾಸೋಹ ಕಾರ್ಮಿಕರಿಗೆ ಜೀವನ ಯೋಗ್ಯ ನಿವೃತ್ತಿ ವೇತನ ಅಥವಾ ಕನಿಷ್ಟ ರೂ. 5 ಲಕ್ಷ ಇಡಿಗಂಟು ಘೋಷಿಸಬೇಕು. ನಿವೃತ್ತಿಯಾಗುವ ಅಕ್ಷರ ದಾಸೋಹ ಕಾರ್ಮಿಕರು ಇಚ್ಚಿಸಿದಲ್ಲಿ ಅವರನ್ನೇ ಕೆಲಸದಲ್ಲಿ ಮುಂದುವರಿಸಿ. ಅಂಗನವಾಡಿ ಮಾದರಿಯಂತೆ ಅವರ ಹುದ್ದೆಯಲ್ಲಿ ಅವರ ಕುಟುಂಬದ ಸದಸ್ಯರನ್ನು ನೇಮಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

ಬಾನು ಕಲಾದಗಿ, ಕಮಲಾಬಾಯಿ ಪಾಟೀಲ, ಹಣಮವ್ವ ಛತ್ರಿ, ಸುನಂದಾ ಪರಡಿಮಠ, ಸಾವಿತ್ರಿ ನಾಟೀಕರ, ಸಾವಿತ್ರಿ ಕಾಮನಕೇರಿ, ರಾಜಬಿ ಚಪ್ಪರಬಂದ ಇದ್ದರು.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.