ನದಿಯಲ್ಲಿ ಬಿಎಂಡಬ್ಲ್ಯೂ ಕಾರು ಮುಳುಗಿಸಿದ ಮಾಲೀಕ: ವಿಚಾರಣೆಯಲ್ಲಿ ಅಚ್ಚರಿ ಮಾಹಿತಿ ಬಯಲು
ಕಾವೇರಿ ನದಿಯಲ್ಲಿ ಬಿಎಂಡಬ್ಲ್ಯೂ ಕಾರು ಪತ್ತೆ
Team Udayavani, May 27, 2022, 3:40 PM IST
ಶ್ರೀರಂಗಪಟ್ಟಣ: ನಿಮಿಷಾಂಭ ದೇಗುಲದ ಬಳಿ ಕಾವೇರಿ ನದಿಯಲ್ಲಿ ದುಬಾರಿ ಬೆಲೆಯ ಬಿಎಂಡಬ್ಲ್ಯೂ ಕಾರು ಶುಕ್ರವಾರ ಪತ್ತೆಯಾಗಿದೆ.
ಕಾರು ನದಿಯಲ್ಲಿ ತೇಲುತ್ತಿರುವುದನ್ನು ಕಂಡ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅಗಮಿಸಿದ ಪೊಲೀಸರು, ಪರಿಶೀಲನೆ ನಡೆಸಿ ಕಾರನ್ನು ನದಿಯಿಂದ ಹೊರ ತೆಗೆಸಿ ವಿಚಾರಣೆ ಕೈಗೊಂಡರು. ಈ ವೇಳೆ ಅಚ್ಚರಿ ವಿಚಾರ ಹೊರ ಬಂದಿದ್ದು, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ನದಿಗೆ ಕಾರು ಮುಳುಗಿಸಿದ್ದಾನೆ ಎಂದು ಬೆಳಕಿಗೆ ಬಂದಿದೆ.
ಬೆಂಗಳೂರಿನ ಮಹಾಲಕ್ಷ್ಮಿ ಲೇ ಔಟ್ ನಿವಾಸಿ ರೂಪೇಶ್ ಎಂಬಾತ, ತನ್ನ ತಾಯಿಯ ನಿಧನದ ಬಳಿಕ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಶ್ರೀರಂಗಪಟ್ಟಣಕ್ಕೆ ಬಂದು ನದಿಯಲ್ಲಿ ಕಾರು ಮುಳುಗಿಸಿ ವಾಪಸ್ ತೆರಳಿದ್ದಾರೆ.
ಇದನ್ನೂ ಓದಿ:ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು
ಕಾರು ಪತ್ತೆ ಬಳಿಕ ಪೊಲೀಸರು ಪರಿಶೀಲನೆ ನಡೆಸಿ ಕಾರು ಮಾಲೀಕನನ್ನು ಪಟ್ಟಣದ ಠಾಣೆಗೆ ಕರೆದು ತಂದು ವಿಚಾರಿಸಿದ್ದಾರೆ. ಈ ವೇಳೆ ಮಾನಸಿಕ ವ್ಯಕ್ತಿ ಅಸಂಬದ್ದ ಹೇಳಿಕೆ ನೀಡುತ್ತಿದ್ದರಿಂದ ಪೊಲೀಸರು ಕಂಗಾಲಾಗಿದ್ದಾರೆ. ಬಳಿಕ ಸಂಬಂಧಿಕರು ಠಾಣೆಗೆ ಬಂದು ಆತ ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಸಂಬಂಧಿಕರ ಹೇಳಿಕೆ ಆಧರಿಸಿ ಪೊಲೀಸರು ಪ್ರಕರಣ ಖುಲಾಸೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ
Gundlupete; ಸತತ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ
Election; ಲೋಕಸಭೆ ಮುಗಿಯಿತು, ಪರಿಷತ್ ಹಣಾಹಣಿ ಆರಂಭ
Prajwal Revanna Case 25 ಸಾವಿರ ಪೆನ್ಡ್ರೈವ್, ಡಿಕೆಶಿ ರೂವಾರಿ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ
Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ
Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ
Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ
ʼಸಲಾರ್ʼನ ʼಶಿವ್ ಮನ್ನಾರ್ʼಗೂ ʼಕೆಜಿಎಫ್ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್