ಸಂಸ್ಕೃತ ವಿಶ್ವಭಾಷೆ: ಪುತ್ತಿಗೆ ಶ್ರೀ ಸುಗುಣೇಂದ್ರ ಶ್ರೀ
ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಯವರ 80ನೇ ಜನ್ಮದಿನೋತ್ಸವ
Team Udayavani, May 28, 2022, 10:48 PM IST
ಮೈಸೂರು: ಅತ್ಯಂತ ಸರಳ, ಸುಂದರ ಭಾಷೆಯಾದ ಸಂಸ್ಕೃತವು ವಿಶ್ವ ಭಾಷೆಯಾಗಿದೆ ಎಂದು ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ನುಡಿದರು.
ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಯವರ 80ನೇ ಜನ್ಮದಿನೋತ್ಸವದ ಏಳನೇ ದಿನದ ಕಾರ್ಯಕ್ರಮದಲ್ಲಿ ಶನಿವಾರ ಪಾಲ್ಗೊಂಡು ಅವರು ಮಾತನಾಡಿದರು.
ಸಂಸ್ಕೃತವು ಎಲ್ಲ ಭಾಷೆಗಳಿಗೂ ಮೂಲ. ಇದು ತಾಯಿ ಭಾಷೆ. ಅತ್ಯಂತ ಸರಳವಾಗಿದ್ದು, ಕಲಿಯುವುದು ಸುಲಭ ಎಂದರು.
ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ವಿಶ್ವ ಸ್ವಾಮೀಜಿಯಾಗಿದ್ದಾರೆ. ಶ್ರೀಗಳು ಆಧ್ಯಾತ್ಮಿಕ ಜೀವನವನ್ನು ಅಳವಡಿಸಿಕೊಂಡಿದ್ದಾರೆ. ಅದನ್ನೇ ಉಸಿರಾಗಿಸಿಕೊಂಡು ಸಾರ್ಥಕತೆ ಪಡೆದಿದ್ದಾರೆ. ಆಧ್ಯಾತ್ಮ ಒಂದು ಶ್ರೇಷ್ಠ ವಿದ್ಯೆಯಾಗಿದೆ. ಹಾಗೆಯೇ ಶ್ರೀಗಳ ಜೀವನವೂ ಶ್ರೇಷ್ಠ ವಾದುದು. ಅವರು ಗೀತೆಯನ್ನು ಪ್ರಚಾರ ಮಾಡುತ್ತಿದ್ದಾರೆ. ಇದು ಅತ್ಯಂತ ಶ್ರೇಷ್ಠ ಎಂದು ಶ್ರೀ ಸುಗುಣೇಂದ್ರ ತೀರ್ಥರು ನುಡಿದರು.
ತಮ್ಮ ನಾಲ್ಕನೆಯ ಪರ್ಯಾಯ ಹಾಗೂ ಕೋಟಿ ಗೀತಾ ಯಜ್ಞ ಕಾರ್ಯಕ್ರಮಕ್ಕೆ ಗಣಪತಿ ಶ್ರೀ ಗಳನ್ನು ಪುತ್ತಿಗೆ ಶ್ರೀಗಳು ಆಹ್ವಾನಿಸಿದರು. ಅವಧೂತ ದತ್ತ ಪೀಠದ ಕಿರಿಯ ಶ್ರೀ ಗಳಾದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ