ಬೆಳ್ತಂಗಡಿಯಲ್ಲಿ ಉತ್ತಮ ಮಳೆ
Team Udayavani, May 29, 2022, 12:36 AM IST
ಬೆಳ್ತಂಗಡಿ/ಮಂಗಳೂರು : ಬೆಳ್ತಂಗಡಿ ತಾಲೂಕಿನಲ್ಲಿ ಒಂದು ವಾರದಿಂದ ಆಗಾಗ ಮಳೆಯಾಗುತ್ತಿದ್ದು, ಶನಿವಾರ ಬೆಳಗ್ಗೆ ಉತ್ತಮ ಮಳೆಯಾಗಿದೆ.
ಬಿಸಿಲು ಮೋಡ ಕವಿದ ವಾತಾವರಣದೊಂದಿಗೆ ಆಗಾಗ ಮಳೆಯಾಗಿದ್ದು, ಮಧ್ಯಾಹ್ನ ಬಳಿಕ ಬಿಸಿಲಿನ ವಾತಾವರಣ ಕಂಡುಬಂತು. ಕಿಂಡಿ ಆಣೆಕಟ್ಟುಗಳಲ್ಲಿ ನೀರು ತುಂಬಿದ್ದು, ಹಲಗೆ ತೆರವು ಕಾರ್ಯ ನಡೆಯುತ್ತಿದೆ. ಮುಂಗಾರು ಸಮೀಪಿಸುತ್ತಿರುವಂತೆ ಮಳೆ ಆಗಮನವಾಗಿದ್ದರಿಂದ ಕೃಷಿ ಚಟುವಟಿಕೆಗಳು ಗರಿಗೆದರಿವೆ.
ಸುಳ್ಯ ತಾಲೂಕಿನ ಅಲ್ಲಲ್ಲಿ ಪಂಬೆತ್ತಾಡಿ, ಗುತ್ತಿಗಾರು, ವಳಲಂಬೆ, ಕಲ್ಮಡ್ಕ, ಐವರ್ನಾಡು, ಅರಂತೋಡು, ಕಲ್ಲುಗುಂಡಿ, ವೇಣೂರು, ಬಂಟ್ವಾಳ ತಾಲೂಕಿನ ವಿವಿಧೆಡೆ ಸಾಧಾರಣ ಮಳೆಯಾಗಿದೆ.
ಗರಿಷ್ಠ ಉಷ್ಣಾಂಶ ಏರಿಕೆ
ಕಳೆದ ಕೆಲವು ದಿನಗಳಿಗೆ ಹೋಲಿಕೆ ಮಾಡಿದರೆ ರಾಜ್ಯ ಕರಾವಳಿ ಭಾಗದಲ್ಲಿ ಗರಿಷ್ಠ ಉಷ್ಣಾಂಶ ಮತ್ತೆ ಏರಿಕೆ ಕಾಣುತ್ತಿದ್ದು, ಸೆಕೆ ಹೆಚ್ಚುತ್ತಿದೆ. ಮಂಗಳೂರಿನಲ್ಲಿ ಶನಿವಾರ 33 ಡಿ.ಸೆ. ಸರಾಸರಿ ಗರಿಷ್ಠ ಉಷ್ಣಾಂಶ ಮತ್ತು 24.5 ಡಿ.ಸೆ. ಕನಿಷ್ಠ ಉಷ್ಣಾಂಶ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ