ಹಿಜಾಬ್ ಧರಿಸಿ ಬಂದ 11 ಮಂದಿ ವಾಪಸ್
Team Udayavani, May 29, 2022, 1:36 AM IST
ಸಾಂದರ್ಭಿಕ ಚಿತ್ರ.
ಮಂಗಳೂರು: ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ 11 ಮಂದಿ ವಿದ್ಯಾರ್ಥಿನಿಯರು ಶನಿವಾರ ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದು ಅವರನ್ನು ವಾಪಸ್ ಕಳುಹಿಸಲಾಗಿದೆ.
ಹಿಜಾಬ್ ಧರಿಸಿಯೇ ತರಗತಿ ಪ್ರವೇಶಿಸಲು ಮುಂದಾದಾಗ ಪ್ರಾಂಶುಪಾಲರು ಅವಕಾಶ ನೀಡಲಿಲ್ಲ. ವಿದ್ಯಾರ್ಥಿನಿಯರು ಗ್ರಂಥಾಲಯದತ್ತ ತೆರಳಿದರು. ಆಗ ಪ್ರಾಂಶುಪಾಲರು ವಿದ್ಯಾರ್ಥಿ ನಿಯರಿಗೆ ನ್ಯಾಯಾಲಯದ ಆದೇಶದ ಕುರಿತು ಮನವರಿಕೆ ಮಾಡಿದರು. ಬಳಿಕ ಅವರನ್ನು ಕಾಲೇಜಿನ ಕ್ಯಾಂಪಸ್ನಿಂದ ಹೊರಗೆ ಕಳುಹಿಸಲಾಯಿತು.
ಶಾಸಕರ ಅಸಮಾಧಾನ
ಹಿಜಾಬ್ ವಿವಾದ ಮರುಕಳಿಸಿರುವುದಕ್ಕೆ ಶಾಸಕ ವೇದವ್ಯಾಸ ಕಾಮತ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನ್ಯಾಯಾಲಯದ ಆದೇಶ ಪಾಲನೆ ಅಗತ್ಯ. ಆದೇಶ ಉಲ್ಲಂಘನೆಯಾದರೆ ಸಂಬಂಧ ಪಟ್ಟವರು ಹೊಣೆಗಾರರಾಗುತ್ತಾರೆ. ಶಿಕ್ಷಣದಿಂದ ವಿದ್ಯಾರ್ಥಿನಿಯರು ವಂಚಿತರಾಗಬಾರದು ಎಂಬ ಕಾರಣಕ್ಕೆ ಪ್ರಾಂಶುಪಾಲರು ವಿದ್ಯಾರ್ಥಿನಿಯರಿಗೆ ಮನವರಿಕೆ ಮಾಡುವ ಪ್ರಯತ್ನ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’
Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು
Mangaluru ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ
Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು
Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು