ರೈಲಿನಲ್ಲಿ ವೃದ್ಧೆಯ 105 ಗ್ರಾಂ ಚಿನ್ನಾಭರಣ ಕಳವು
Team Udayavani, May 29, 2022, 11:53 AM IST
ಹುಬ್ಬಳ್ಳಿ: ವೃದ್ಧೆಯೊಬ್ಬರು ಮೈಸೂರು-ಧಾರವಾಡ ಎಕ್ಸ್ಪ್ರೆಸ್ ರೈಲಿನಲ್ಲಿ ಸಂಚರಿಸುತ್ತಿದ್ದಾಗ ರಾತ್ರಿ ವೇಳೆ ಕಳ್ಳರು ಅವರ ಲಗೇಜ್ ಬ್ಯಾಗ್ನಲ್ಲಿದ್ದ ಅಂದಾಜು 4.72 ಲಕ್ಷ ರೂ. ಮೌಲ್ಯದ 105 ಗ್ರಾಂ ಚಿನ್ನಾಭರಣವಿದ್ದ ವ್ಯಾನಿಟಿ ಬ್ಯಾಗ್ ಕಳವು ಮಾಡಿದ್ದಾರೆ.
ಮೈಸೂರು ಬನ್ನಿಮಂಟಪದ ಪ್ರೇಮಾ ಎಂಬುವರು ತಮ್ಮ ಮಗಳು, ಮೊಮ್ಮಕ್ಕಳೊಂದಿಗೆ ಮೈಸೂರಿನಿಂದ ಹುಬ್ಬಳ್ಳಿಗೆ ಮೇ 17ರಂದು ಆಗಮಿಸುತ್ತಿದ್ದಾಗ ತಡರಾತ್ರಿ ಮಲಗಿದ್ದಾರೆ.
18ರಂದು ಬೆಳಗ್ಗೆ ನಗರಕ್ಕೆ ಆಗಮಿಸಿ ವಿದ್ಯಾನಗರದಲ್ಲಿರುವ ಮೈದುನನ ಮನೆಗೆ ಹೋಗಿ ಬ್ಯಾಗ್ ಪರಿಶೀಲಿಸಿದಾಗಲೇ ತಲಾ 30 ಗ್ರಾಂನ ಎರಡೆಲೆ ಅವಲಕ್ಕಿ ಸರ ಮತ್ತು ಎರಡು ಬಳೆಗಳು ಹಾಗೂ 45ಗ್ರಾಂನ ಮಾಂಗಲ್ಯ ಸರವಿದ್ದ ವ್ಯಾನಿಟಿ ಬ್ಯಾಗ್ ಕಳವು ಆಗಿರುವುದು ಗೊತ್ತಾಗಿದೆ. ಪ್ರೇಮಾ ಅವರ ದೂರಿನ ಮೇರೆಗೆ ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ರಿಕೆಟ್ ಬೆಟ್ಟಿಂಗ್-ಐವರ ಬಂಧನ: ಗೋಕುಲ ರಸ್ತೆಯ ಮಂಜುನಾಥ ನಗರ ಕ್ರಾಸ್, ಕೈಗಾರಿಕಾ ವಸಾಹತು 2ನೇ ಗೇಟ್ ಹಾಗೂ ದುರ್ಗದ ಬಯಲಿನಲ್ಲಿ ಶುಕ್ರವಾರ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಐವರನ್ನು ಪೊಲೀಸರು ಬಂಧಿಸಿ, 13,280 ನಗದು, ಐದು ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ಗೋಕುಲ ರಸ್ತೆ ಪೊಲೀಸರು ಕೈಗಾರಿಕಾ ವಸಾಹತು ಬಳಿ ಬೆಟ್ಟಿಂಗ್ ಆಡುತ್ತಿದ್ದ ಇಬ್ಬರನ್ನು ಬಂಧಿಸಿ, 1,800 ನಗದು, ಎರಡು ಮೊಬೈಲ್ ಹಾಗೂ ಮಂಜುನಾಥ ನಗರ ಕ್ರಾಸ್ ಬಳಿ ಆಡುತ್ತಿದ್ದ ಇಬ್ಬರನ್ನು ಪ್ರತ್ಯೇಕವಾಗಿ ಬಂಧಿಸಿ, ಅವರಿಂದ ಎರಡು ಮೊಬೈಲ್, 1,480 ನಗದು ವಶಪಡಿಸಿಕೊಂಡಿದ್ದಾರೆ.
ಶಹರ ಪೊಲೀಸರು ದುರ್ಗದ ಬಯಲಿನಲ್ಲಿ ಬೆಟ್ಟಿಂಗ್ ಆಡುತ್ತಿದ್ದ ಒಬ್ಬನನ್ನು ಬಂಧಿಸಿ, 10 ಸಾವಿರ ನಗದು, ಒಂದು ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಪ್ರತ್ಯೇಕವಾಗಿ ಗೋಕುಲ ರಸ್ತೆ ಠಾಣೆಯಲ್ಲಿ ಮೂರು ಹಾಗೂ ಶಹರ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ