ಬೊಮ್ಮಯ್ಯ ದೇವಸ್ಥಾನ ಆಡಳಿತ ಹಸ್ತಾಂತರ
Team Udayavani, May 29, 2022, 12:18 PM IST
ಅಂಕೋಲಾ: ತಾಲೂಕಿನ ತೆಂಕಣಕೇರಿ ಬೊಮ್ಮಯ್ಯ ದೇವರ ದೇವಸ್ಥಾನದ ಆಡಳಿತ ಹಸ್ತಾಂತರ ವಿಚಾರವಾಗಿ ಎದ್ದಿದ್ದ ವಿವಾದ ಸುಖಾಂತ್ಯ ಕಂಡಿದೆ.
ಜಿಲ್ಲಾಧಿಕಾರಿಗಳ ಆದೇಶದಂತೆ ತಹಶೀಲ್ದಾರ್ ಪರವಾಗಿ ಶಿರಸ್ತೇದಾರ ಗಿರೀಶ ಜಾಂಬಾವಳಿಕರ ಮಧ್ಯಸ್ಥಿಕೆಯಲ್ಲಿ ದೇವಸ್ಥಾನದ ಮೊಕ್ತೇಸರಾಗಿದ್ದ ಜಿ.ಸಿ. ನಾಯ್ಕ ದೇವಸ್ಥಾನದ ಆಡಳಿತವನ್ನು ನೂತನ ಆಡಳಿತ ಮಂಡಳಿಗೆ ಹಸ್ತಾಂತರಿಸಿದರು.
ತೆಂಕಣಕೇರಿ ಬೊಮ್ಮಯ್ಯ ದೇವರ ದೇವಸ್ಥಾನ ನೂರಾರು ವರ್ಷದ ಇತಿಹಾಸ ಹೊಂದಿದ್ದು, ಆವಾರದಲ್ಲಿ ಮಾಸ್ತಿ, ಹಿರೇಹೊನ್ನಪ್ಪ, ಬಂಡೀನಾಸ ಮುಂತಾದ ಪರಿವಾರ ದೇವರುಗಳೂ ಇವೆ. ದಿನಂಪ್ರತಿ ಪೂಜೆ ಪುರಸ್ಕಾರಗಳೊಂದಿಗೆ ಪ್ರತೀವರ್ಷ ಇಲ್ಲಿ ಬಂಡೀಹಬ್ಬವೂ ವಿಜೃಂಭಣೆಯಿಂದ ನಡೆಯುತ್ತದೆ.
ಹಲವು ವರ್ಷ ಬೀರಪ್ಪ ನಾಯ್ಕ ದೇವಸ್ಥಾನ ಮೊಕ್ತೇಸರರಾಗಿ ಕಾರ್ಯನಿರ್ವಹಿಸಿದ್ದರು. ನಂತರ ಪಟೇಲ ನಾಗಪ್ಪ ಎನ್ನುವವರು ಮೊಕ್ತೇಸರರಾಗಿ ಕಾರ್ಯ ನಿರ್ವಹಿಸಿದರು. ಅವರ ನಂತರ ಕಳೆದ 12 ವರ್ಷಗಳಿಂದ ಇಲ್ಲಿನ ಜಿ.ಸಿ. ನಾಯ್ಕ ದೇವಸ್ಥಾನದ ಆಡಳಿತ ಜವಾಬ್ದಾರಿ ನಿರ್ವಹಿಸುತ್ತ ಬಂದಿದ್ದರು. ಎಲ್ಲ ದೇವಸ್ಥಾನಗಳಿಗೆ ಸ್ಥಳೀಯ ಆಡಳಿತ ಮಂಡಳಿ ರಚನೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಇಲ್ಲಿನ ಬೊಮ್ಮಯ್ಯ ದೇವಸ್ಥಾನಕ್ಕೂ ಆಡಳಿತ ಮಂಡಳಿ ರಚಿಸಲಾಗಿತ್ತು.
ನಿಯಮದ ಪ್ರಕಾರ ನೂತನ ಆಡಳಿತ ಮಂಡಳಿಗೆ ದೇವಸ್ಥಾನದ ಆಡಳಿತವನ್ನು ಹಸ್ತಾಂತರಿಸಬೇಕಿತ್ತು. ಈ ಕುರಿತು ನೂತನ ಆಡಳಿತ ಮಂಡಳಿ ಅಧ್ಯಕ್ಷ ಗಣೇಶ ನಾರಾಯಣ ನಾಯ್ಕ ಇವರು ಜಿ.ಸಿ. ನಾಯ್ಕರಿಗೆ ಹಲವು ಬಾರಿ ವಿನಂತಿಸಿದರೂ ಇದುವರೆಗೂ ಹಸ್ತಾಂತರಿಸಿರಲಿಲ್ಲ. ಏನಾದರೊಂದು ಕಾರಣ ನೀಡಿ ದಿನ ದೂಡುತ್ತಲೇ ಬಂದಿದ್ದರು. ಇದರಿಂದ ಆಕ್ರೋಶಗೊಂಡ ಆಡಳಿತ ಮಂಡಳಿ ಹಾಗೂ ಸಾರ್ವಜನಿಕರು ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.
ಜಿಲ್ಲಾಧಿಕಾರಿಗಳು ಆದೇಶ ನೀಡಿ ತಹಶೀಲ್ದಾರ್ ಸಮ್ಮುಖದಲ್ಲಿ ಆಡಳಿತ ಹಸ್ತಾಂತರಿಸುವಂತೆ ನೋಟಿಸ್ ಜಾರಿ ಮಾಡಿದ್ದರು. ಅದರಂತೆ ತಹಶೀಲ್ದಾರ್ ಪರವಾಗಿ ಶಿರಸ್ತೆದಾರ ಗಿರೀಶ ಜಾಂಬಾವಳಿಕರ ಆಡಳಿತ ಹಸ್ತಾಂತರ ಪ್ರಕ್ರಿಯೆ ನಡೆಸಿಕೊಟ್ಟರು.
ಜಿ.ಸಿ. ನಾಯ್ಕರಿಂದ ದೇವಸ್ಥಾನಕ್ಕೆ ಸಂಬಂಧಿಸಿದ ಎಲ್ಲ ಕೀಲಿಕೈಗಳನ್ನೂ, ದೇವರ 70 ಬಗೆಯ ಬೆಳ್ಳಿ, ಬಂಗಾರದ ಆಭರಣಗಳನ್ನೂ ನಗದು ಹಣವನ್ನೂ ಬ್ಯಾಂಕುಗಳಲ್ಲಿನ ಎಫ್.ಡಿ ಸರ್ಟಿಫಿಕೇಟ್ಗಳನ್ನೂ, ಕಾಗದ ಪತ್ರಗಳನ್ನೂ ನೂತನ ಆಡಳಿತ ಮಂಡಳಿಯ ಅಧ್ಯಕ್ಷ ಗಣೇಶ ನಾಯ್ಕರಿಗೆ ಹಸ್ತಾಂತರಿಸಿದರು.
ನೂತನ ಆಡಳಿತ ಮಂಡಳಿ ವತಿಯಿಂದ ಮೊಕ್ತೇಸರರಾಗಿ ದಶಕಗಳ ಕಾಲ ದೇವಸ್ಥಾನದ ಜವಾಬ್ದಾರಿ ನಿರ್ವಹಿಸಿದ ಜಿ.ಸಿ.ನಾಯ್ಕರನ್ನು ಸನ್ಮಾನಿಸಲಾಯಿತು. ಉಪ ತಹಶೀಲ್ದಾರ್(ಬೆಳಸೆ) ಎಸ್.ಪಿ. ಹರಿಕಾಂತ, ಕಂದಾಯ ಇಲಾಖೆಯ ಮಂಜುನಾಥ, ಗ್ರಾಮ ಲೆಕ್ಕಾಧಿಕಾರಿ ಲಲಿತಾ ಆಗೇರ, ಸಿಪಿಐ ಸಂತೋಷ ಶೆಟ್ಟಿ, ಪಿಎಸೈ ಮಾಲಿನಿ ಹಾಸಭಾವಿ ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?