ಋತು ಚಕ್ರದ ಬಗ್ಗೆ ಹೆಣ್ಣು ಮಕ್ಕಳಿಗೆ ಅರಿವು ಮೂಡಿಸಿ


Team Udayavani, May 29, 2022, 1:09 PM IST

ಋತು ಚಕ್ರದ ಬಗ್ಗೆ ಹೆಣ್ಣು ಮಕ್ಕಳಿಗೆ ಅರಿವು ಮೂಡಿಸಿ

ಚಾಮರಾಜನಗರ: ಋತುಚಕ್ರದ ಬಗ್ಗೆ ತಾಯಂದಿರು ತಮ್ಮ ಹೆಣ್ಣು ಮಕ್ಕಳಿಗೆ ಅರಿವು ಮೂಡಿಸುವುದು ಅಗತ್ಯ ಎಂದು ಜಿಪಂ ಉಪಕಾರ್ಯದರ್ಶಿ ಗುಡೂರ್‌ ಭೀಮಸೇನ್‌ ಸಲಹೆ ನೀಡಿದರು.

ತಾಲೂಕಿನ ಹರವೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಿದ್ದ ಮಹಿಳೆಯರಿಗೆ ಋತುಚಕ್ರ ನಿರ್ವಹಣೆ ಕುರಿತ ಜಿಲ್ಲಾ ಮಟ್ಟದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಾಲ್ಯಾವಸ್ಥೆಯಿಂದ ಪ್ರೌಢಾವಸ್ಥೆಗೆ ಬಂದಾಗಋತುಚಕ್ರ ಎಂಬುದು ಪ್ರತಿಯೊಬ್ಬ ಹೆಣ್ಣುಮಕ್ಕಳಲ್ಲಿ ಕಾಣಿಸಿಕೊಳ್ಳುತ್ತದೆ. ಈ ಸಂದರ್ಭದಲ್ಲಿಭೌತಿಕ ಬದಲಾವಣೆಗಳಾಗುತ್ತವೆ. ಋತುಚಕ್ರದಬಗ್ಗೆ ಮೌಡ್ಯ ಮನೆ ಮಾಡಿಕೊಂಡಿದೆ. ಋತುಚಕ್ರ ಯಾಕೆ ಬರುತ್ತದೆ. ಬಂದಾಗ ಏನೆಲ್ಲ ಬದಲಾವಣೆಗಳಾಗುತ್ತವೆ. ಇದನ್ನು ಹೇಗೆನಿರ್ವಹಣೆ ಮಾಡಬೇಕು ಎಂಬುದರ ಕುರಿತುತಾಯಂದಿರು ಮುಕ್ತವಾಗಿ ತಮ್ಮ ಹೆಣ್ಣು ಮಕ್ಕಳಿಗೆಹೇಳಿಕೊಡಬೇಕು. ಶಾಲೆಗಳಲ್ಲೂ ಸಹ ಶಿಕ್ಷಕಿಯರು ಇದನ್ನು ಹೇಳಿಕೊಡಬೇಕು ಎಂದರು.

ಋತುಚಕ್ರ ದೈಹಿಕ ಬೆಳವಣಿಗೆಯಾಗುತ್ತದೆ. ನಾವು ಸೇವಿಸುವ ಆಹಾರದಲ್ಲಿಬದಲಾವಣೆಗಳಾದಾಗ ಋತುಚಕ್ರದಲ್ಲಿಯೂ ಬದಲಾವಣೆಯಾಗುತ್ತದೆ.  ಕೆಲವು ಬಾರಿ ಕೆಲ ಮಕ್ಕಳಿಗೆ ಅಧಿಕ ರಕ್ತಸ್ರಾವವಾಗಬಹುದು. ಋತುಚಕ್ರದ ಬಗ್ಗೆ ಮಕ್ಕಳಿಗೆ ಮುಕ್ತವಾಗಿಹೇಳಿಕೊಡದಿದ್ದರೆ ಬಹಳಷ್ಟು ಮಕ್ಕಳು ಖನ್ನತೆಗೆಒಳಗಾಗುತ್ತಾರೆ. ಎಷ್ಟೋ ಮುಗ್ಧಮಕ್ಕಳು ಬೇರೆ ಬೇರೆ ರೀತಿಯಲ್ಲಿ ಶೋಷಣೆಗೆ ಒಳಪಡುತ್ತಾರೆ. ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ಕೊಡದಿದ್ದರೆ ಅವರು ತಪ್ಪು ದಾರಿ ಹಿಡಿಯುವ ಸಾಧ್ಯತೆಯೂ ಇರುತ್ತದೆ ಎಂದು ತಿಳಿಸಿದರು.

ಜಿಲ್ಲಾ ಕಾರ್ಯಕ್ರಮ ಅಧಿಕಾರಿಡಾ.ರವಿಕುಮಾರ್‌ ಮಾತನಾಡಿ, ಋತುಚಕ್ರವುಹೆಣ್ಣು ಮಕ್ಕಳು ಬಾಲ್ಯಾವಸ್ಥೆಯಿಂದ ಪ್ರೌಢಾವಸ್ಥೆಗೆ ಬರುವಾಗ ಆಗುವ ಸಹಜ ದೈಹಿಕಬದಲಾವಣೆಯಾಗಿದೆ. ಹಿಂದಿನ ಕಾಲದಿಂದಲೂ ಕೆಲವು ಆಚರಣೆಗಳನ್ನು ತಪ್ಪು ರೀತಿಯಲ್ಲಿಮಾಡುತ್ತಾ ಬಂದಿದ್ದೇವೆ. ಹಿಂದೆ ಋತುಚಕ್ರದಸಂದರ್ಭದಲ್ಲಿ ಮಹಿಳೆಯರನ್ನು ಮನೆಯಿಂದ ಹೊರಗೆ ಇಡುವ ಪ್ರಕ್ರಿಯೆ ನಡೆಯುತ್ತಿತ್ತು. ಆದರೆ, ಈಗ ಕಾಲ ಬದಲಾಗಿದ್ದು ಪ್ರಸ್ತುತ ಎಲ್ಲರಿಗೂ ಋತುಚಕ್ರದ ಬಗ್ಗೆ ಅರಿವು ಬಂದಿದೆ ಎಂದು ಹೇಳಿದರು.

ಇದಕ್ಕೂ ಮುನ್ನ ಋತುಚಕ್ರ ಸ್ವಚ್ಛತೆ ಬಗ್ಗೆ ಅರಿವು ಜಾಥಾ ನಡೆಯಿತು. ಜಾಥಾವು ಗ್ರಾಮದಪ್ರಮುಖ ಬೀದಿಗಳಲ್ಲಿ ಹೊರಟು ಜನರಲ್ಲಿ ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯಕೇಂದ್ರದ ಆರೋಗ್ಯಾಧಿಕಾರಿ ಡಾ.ಸುರೇಶ್‌,ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಡಾ.ಮಮತಾ ಕುಮಾರಿ, ಸಮುದಾಯಅಧಿಕಾರಿ ಶ್ರುತಿ, ಯುನಿಸೆಫ್ ಎಸ್‌ಬಿಐ ಸಿಸಿಜಿಲ್ಲಾ ಸಂಯೋಜಕ ಟಿ.ಜೆ.ಸುರೇಶ್‌, ಗ್ರಾಪಂಕಾರ್ಯದರ್ಶಿ ಮಹದೇವಯ್ಯ,ಉಪಪ್ರಾಂಶುಪಾಲ ಶಿವರಾಮಯ್ಯ, ದಾಖಲಾತಿ ಅಧಿಕಾರಿ ಲತಾ, ಡಿಎಚ್‌ಇಡಿ ದೊರೆಸ್ವಾಮಿ, ಸಿಡಿಪಿಒ ಮುತ್ತು, ಸ್ವಚ್ಛ ಭಾರತ್‌ ಮಿಷನ್‌ನಜಿಲ್ಲಾ ಸಮಾಲೋಚಕರಾದ ಮಹದೇವ್‌, ಜೋಸೆಫ್, ಪ್ರಭುಸ್ವಾಮಿ ಇದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.