ಕೊನೆಗಾಣದ ಕಾಡಾನೆ, ಮಾನವ ಸಂಘರ್ಷ ಸಮಸ್ಯೆ


Team Udayavani, May 29, 2022, 3:30 PM IST

ಕೊನೆಗಾಣದ ಕಾಡಾನೆ, ಮಾನವ ಸಂಘರ್ಷ ಸಮಸ್ಯೆ

ಸಕಲೇಶಪುರ: ಆಧುನಿಕ ಜೀವನದಲ್ಲಿ ಬಂಡವಾಳಷಾಹಿಗಳ ದುರಾಸೆಯಿಂದಾಗಿ ಕಾಡಾನೆ ಹಾಗೂ ಮಾನವನ ನಡುವಿನ ಸಂಘರ್ಷ ಹೆಚ್ಚಾಗಿ ಕಾಡಾನೆಗಳಿಗೂ ನೆಮ್ಮ ದಿಯಿಲ್ಲದಂತಾಗಿದೆ. ಇತ್ತ ರೈತರು ಹಾಗೂ ಜನಸಾಮಾನ್ಯರಿಗೂ ಸಹ ನೆಮ್ಮದಿಯಿಲ್ಲ ದ ಪರಿಸ್ಥಿತಿ ನಿರ್ಮಾಣವಾಗಿದೆ.

ಕಳೆದ ಒಂದು ದಶಕದಲ್ಲಿ ಮಲೆನಾಡಿನ ಪಶ್ಚಿಮಘಟ್ಟದ ತಪ್ಪಲುಗಳಲ್ಲಿ ಅವೈಜ್ಞಾ ನಿಕ ಅಭಿವೃದ್ಧಿ ಕಾರ್ಯಗಳಿಂದ ಕಾಡು ಪ್ರಾಣಿಗಳಿಗೆ ನೆಲೆ ಇಲ್ಲದಂತಾಗಿದ್ದು ಅದರಲ್ಲೂ ದಿನನಿತ್ಯ ನೂರಾರು ಕಿ.ಮಿ ಅಡ್ಡಾಡುವ ಕಾಡಾನೆಗಳ ಮೂಕರೋಧನೆ ಯಾರಿಗೂ ತಿಳಿಯದಾಗಿದೆ.

ಕಳೆದ ಒಂದು ದಶಕದಲ್ಲಿ ತಾಲೂಕಿನಲ್ಲಿ ಜಾರಿಗೊಳಿಸಲಾಗಿರುವ ಸರ್ಕಾರದ ಜಲವಿದ್ಯುತ್‌ ಯೋಜನೆಗಳು, ಎತ್ತಿನಹೊಳೆ ಯೋಜನೆಯಿಂದಾ ಗಿ ಅಪಾರ ಪ್ರಮಾಣದ ವನ್ಯ ಸಂಪತ್ತು ನಾಶವಾಗಿದೆ. ಇದರಿಂದ ಕಾಡುಪ್ರಾಣಿಗಳ ನೆಲೆ ಕಡಿಮೆಯಾಗಿದ್ದುಅದರಲ್ಲೂ ಕಾಡಾನೆಗಳು ಆ ಹಾರಕ್ಕಾಗಿ ಹಾತೊರೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕಾಡಾನೆಗಳಿಗೆ ನೆಲೆ ಇಲ್ಲದಂತಾಗಿದೆ: ಬೆಂಗಳೂರಿನ ಹಲವಾರು ಬಂಡವಾಳಷಾಹಿಗಳು ತಾಲೂಕಿಗೆ ಆಗಮಿಸಿ ಕಡಿದಾದ ಕಾಡುಗಳಲ್ಲಿ ಕೋಟ್ಯಂತರ ವೆಚ್ಚದಲ್ಲಿ ರೆಸಾರ್ಟ್‌, ಹೋಂಸ್ಟೇಗಳನ್ನು ಸ್ಥಳೀಯ ಪ್ರಭಾವಿಗಳ ನೆರವಿನಿಂದ ನಿರ್ಮಾಣ ಮಾಡುತ್ತಿದ್ದಾರೆ. ಇದು ಸಹ ಕಾಡಾನೆ ಸಮಸ್ಯೆ ಭುಗಿಲೇಳಲು ಪ್ರಮುಖ ಕಾರಣವಾಗಿದೆ. ಇದಲ್ಲದೆ ಇತ್ತೀಚಿನ ವರ್ಷಗಳಲ್ಲಿ ಕಾಫಿ ಬೆಳೆಗೆ ಮಾರುಕಟ್ಟೆಯಲ್ಲಿಉತ್ತಮ ದರ ದೊರಕುತ್ತಿರುವ ಹಿನ್ನೆಲೆ ಅಪಾರ ಪ್ರಮಾ ಣದ ಅರಣ್ಯಪ್ರದೇಶ ಹಾಗೂ ಗೋಮಾಳಗಳನ್ನು ಒತ್ತುವರಿ ಮಾಡಿ, ಕಾಫಿ ತೋಟಗಳಾಗಿ ಮಾಡಿಕೊಂಡಿರುವುದು ಸಹ ಕಾಡಾನೆಗಳಿಗೆ ನೆಲೆ ಇಲ್ಲದಂತಾಗಿದೆ.

ಕಾಡಾನೆ ಸಾವು ತಡೆಗಟ್ಟುವಲ್ಲಿ ವಿಫ‌ಲ: ಕಾಡಾನೆಗಳುನೆಲೆಯಿಲ್ಲದೆ ಆಹಾರಕ್ಕಾಗಿ ನಾಡಿನತ್ತ ಬರುವ ಪರಿಸ್ಥಿತಿ ನಿರ್ಮಾಣವಾಗಿರುವುದಲ್ಲದೆ, ಆಹಾರ ಅರಸಿಹೊಲ-ಗದ್ದೆ ತೋಟಗಳಿಗೆ ಕಾಡಾನೆ ದಂಡು ನುಗ್ಗಿ ದಾಂದಲೆ ನಡೆಸಿರೋದು ಸಾಮಾನ್ಯವಾಗಿದೆ. ಇದರಿಂದ ರೈತರು, ಕೂಲಿ ಕಾರ್ಮಿಕರು ಆತಂಕದಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಬೇಕಾಗಿದೆ. ತಾಲೂಕಿನ ಹಲವಾರು ಪ್ರದೇಶಗಳಲ್ಲಿ ಕಾಡಾನೆಗಳ ಹಾವಳಿ ವಿಪರೀತವಾಗಿದ್ದು ಇದರಿಂದ ಬೇಸತ್ತು ಕೆಲವರು ಕಾಡಾನೆಗಳನ್ನು ಗುಂಡು ಹೊಡೆದು ಸಾಯಿಸಿದ್ದಾರೆ. ಆದರೆ, ಅರಣ್ಯ ಇಲಾಖೆ ಕಿಡಿಗೇಡಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಕಳೆದ ಎರಡು ದಿನಗಳ ಹಿಂದಷ್ಟೆ ಪಕ್ಕದ ಬೇಲೂರು ತಾಲೂಕಿನ ಮಲಸಾವರ ಸಮೀಪ ಅಮಾಯಕಕಾಡಾನೆಯೊಂದಕ್ಕೆ ಕಿಡಿಗೇಡಿ ಯೋರ್ವ ಗುಂಡು ಹೊಡೆದು ಹತ್ಯೆ ಮಾಡಿದ್ದ. ಮುಂದಿನ ದಿನಗಳಲ್ಲಿ ಇಂತಹ ಘಟನೆ ಹೆಚ್ಚುವ ಸಾಧ್ಯತೆಯಿದೆ. ಈಗಾಗಲೆ ಸುಮಾರು 49 ಜನರು ಕಳೆದ ಒಂದು ದಶಕದಲ್ಲಿ,ಕಾಡಾನೆಗಳ ದಾಳಿಗೆ ಸಕಲೇಶಪುರ ಹಾಗೂ ಆಲೂರುತಾಲೂಕುಗಳಲ್ಲಿ ಬಲಿಯಾಗಿದ್ದು ಅನೇಕ ಮಂದಿ ಶಾಶ್ವತವಾಗಿ ದಿವ್ಯಾಂಗರಾಗಿದ್ದಾರೆ ಎಂದರು.

ಕಾಡಾನೆಗಳ ಸಾವಿನ ಪ್ರಮಾಣ ಹೆಚ್ಚಳ: ಇನ್ನೂ ಕಾಡಾನೆಗಳು ಸಹ ಗುಂಡೇಟಿನಿಂದ, ವಿದ್ಯುತ್‌ ಬೇಲಿಹಾರಲು ಹೋಗಿ, ರೈಲು ಡಿಕ್ಕಿ ಹೊಡೆದ ಪರಿಣಾಮ,ದಂತಗಳ ಕಳ್ಳರಿಂ ದ ಸೇರಿದಂತೆ ವಿವಿಧಕಾರಣಗಳಿಂದ ಹಲವಾರು ಕಾಡಾನೆಗಳುಮೃತಪಟ್ಟಿವೆ. ಮನುಷ್ಯನ ಆಧುನಿಕ ಅಭಿವೃದ್ಧಿದಾಹಕ್ಕೆ ಅಮಾಯಕ ಕಾ ಡಾನೆಗಳು ನೆಲೆ ಕಳೆದುಕೊಂಡು ಪರದಾಡುತ್ತಿವೆ. ಇತ್ತ ರೈತರು ಕೂಲಿಕಾರ್ಮಿಕರು ಸಹ ಕಾಡಾನೆಗಳ ಆತಂಕದಲ್ಲೇ ಜೀವನ ಸಾಗಿಸಬೇಕಾಗಿದೆ. ಕಾಡಾನೆ ಸಮಸ್ಯೆಗೆ ಶಾಶ್ವ ತ ಪರಿಹಾರ ಹುಡುಕಬೇಕೆಂಬ ಒತ್ತಾಯ ವ್ಯಾಪಕವಾಗಿ ಕೇಳಿಬರುತ್ತಿದ್ದರು ಸಹ ನಮ್ಮನ್ನು ಆಳುತ್ತಿರುವ ಸರ್ಕಾರಗಳಿಗೆ ಇಚ್ಛಾ ಶಕ್ತಿಯಿಲ್ಲದ ಕಾರಣ ಸಮಸ್ಯೆ ಬಗೆಹರಿಯದಂತಾಗಿದೆ.

ರೈತರಿಗೆ ಬೆಳೆ ನಷ್ಟ: ಕಾಡಾನೆ ದಾಳಿಯಿಂದಾಗಿ ರೈತರು ಅಪಾರ ಪ್ರಮಾಣದ ಬೆಳೆ ಕಳೆದುಕೊಂಡು ನಷ್ಟ ಅನುಭವಿಸುತ್ತಿದ್ದಾರೆ. ಇದರಿಂದ ಕಾಡಾನೆಗಳು ಗುಂಡೇಟಿಗೆ ಬಲಿಯಾಗುತ್ತಿವೆ. ತಾಲೂಕಿನಲ್ಲಿ ಸದ್ಯ ಇರುವ 70ಕ್ಕೂ ಹೆಚ್ಚು ಕಾಡಾನೆಗಳನ್ನು ರಾಜ್ಯದ ಪ್ರತಿ ಜಿಲ್ಲೆಗಳಿಗೆ ಎರಡ್ಮೂರು ಕಾಡಾನೆ ಗಳಂತೆ ಹಿಡಿದುಸಾಗಿಸುವ ಅವಕಾಶವಿದ್ದು ಈ ಕುರಿತು ಸರ್ಕಾರಗಂಭೀರವಾಗಿ ಯೋಚಿಸಬೇಕಾಗಿದೆ. ರಾಜಕಾರಣಿಗಳು ಹಣ ಮಾಡಲು ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕುಲು ಮುಂದಾಗುತ್ತಿಲ್ಲ ಎಂಬ ಅಭಿಪ್ರಾಯ ಎಲ್ಲೆಡೆ ಕೇಳಿ ಬರುತ್ತಿದೆ.

ಒಟ್ಟಾರೆ ಮನುಷ್ಯನ ದುರಾಸೆಯಿಂದಾಗಿತಾಲೂಕಿನಲ್ಲಿ ಮಾನವ ಹಾಗೂ ಕಾಡಾನೆ ಸಂಘರ್ಷ ಮಿತಿಮೀರಿದ್ದು ಮುಂದಿನ ದಿನಗಳಲ್ಲಿ ಕಾಡಾನೆಹಾಗೂ ಮನುಷ್ಯನ ನಡುವಿನ ಸಂಘರ್ಷ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಕಾಡಾನೆಹಾಗೂ ಮಾನವ ಸಂಘರ್ಷ ಸಮಸ್ಯೆಗೆ ಸೂಕ್ತ ಪರಿಹಾರ ಹುಡುಕಿಕೊಳ್ಳಬೇಕಾಗಿದೆ.

ಕಾಡಾನೆಗಳನ್ನು ಓಡಿಸಲು ಹತ್ಯೆ ಮಾಡುವುದುಸರಿಯಲ್ಲ.ಮೂಕಪ್ರಾಣಿಗಳಿಗೆ ಜೀವಿಸುವ ಹಕ್ಕಿದೆ.ಸರ್ಕಾರ ಕಾಡಾನೆಗಳಿಂದ ನಷ್ಟವುಂಟಾದರೈತರಿಗೆ 48ಗಂಟೆಯಲ್ಲಿ ಪರಿಹಾರನೀಡಿದರೆ ಯಾವ ರೈತರು ಕಾಡಾನೆಗಳನ್ನು ಸಾಯಿ ಸಲು ಮುಂದಾಗುವುದಿಲ್ಲ. – ಹುರುಡಿ ವಿಕ್ರಂ, ಪರಿಸರ ಪ್ರೇಮಿ

ಕಾಡಾನೆಗಳ ನೆಲೆಗಳು ನಾಶವಾಗಿದೆ. ಆದರಿಂದಕಾಡಾನೆ ಗಳು ನಾಡಿನತ್ತ ಬರುತ್ತಿವೆ.ಸರ್ಕಾರಗಳು ಕಾಡಾನೆಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕದಕಾರಣ ಮೂಕ ಪ್ರಾಣಿಗಳು ವಿನಃಕಾರಣಸಾವನ್ನಪ್ಪುವ ಪರಿಸ್ಥಿತಿ ನಿರ್ಮಾಣವಾಗಿದೆ. ಜೊತೆಗೆ ರೈತರು ಸಹ ಕಾಡಾನೆಗಳಿಂದತೊಂದರೆ ಅನುಭವಿಸಬೇಕಾಗಿದೆ. ಮಲೆನಾಡಿನಲ್ಲಿ ಅವೈಜ್ಞಾನಿಕ ಯೋಜನೆ ಜಾರಿಗೆ ತರಬಾರದು. -ಹುರುಡಿ ಪ್ರಶಾಂತ್‌ ಕುಮಾರ್‌, ಕಾಫಿ ಬೆಳೆಗಾರರು

– ಸುಧೀರ್‌ ಎಸ್‌.ಎಲ್‌

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.