ಎಂಟಿಬಿ ಟ್ರಸ್ಟ್ ನಿಂದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು
ನೀಟ್ ತರಬೇತಿ ಕೇಂದ್ರಕ್ಕೆ ನೆರವಿನ ಭರವಸೆ
Team Udayavani, May 29, 2022, 6:52 PM IST
ಬೆಂಗಳೂರು:ಎಂಟಿಬಿ ಅನಂತ ಉನ್ನತಿ ಎಜುಕೇಷನ್ ಟ್ರಸ್ಟ್ ನಿಂದ ಕುರುಬ ಸಮಾಜದ 24 ವೈದ್ಯಕೀಯ ವಿದ್ಯಾರ್ಥಿಗಳಿಗೆ ತಲಾ 60ಸಾವಿರ ರೂಪಾಯಿ ಆರ್ಥಿಕ ನೆರವು ನೀಡಿದ ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜು, ಮುಂದಿನ ಶೈಕ್ಷಣಿಕ ವರ್ಷದಿಂದ 50 ವೈದ್ಯಕೀಯ ವಿದ್ಯಾರ್ಥಿ ಗಳಿಗೆ ಆರ್ಥಿಕ ನೆರವು ನೀಡುವುದರ ಜೊತೆಗೆ ನೀಟ್ ಪರೀಕ್ಷೆಗೆ ಅಗತ್ಯವಾದ ತರಬೇತಿಗೆ ನೆರವು ನೀಡುವುದಾಗಿ ತಿಳಿಸಿದರು.
ಕಾಳಿದಾಸ ಹೆಲ್ತ್ ಅಂಡ್ ಎಜುಕೇಷನ್ ಟ್ರಸ್ಟ್ ಬೆಂಗಳೂರಿನಲ್ಲಿ ಇಂದು ಆಯೋಜಿಸಿದ್ದ ಕುರುಬ ಸಮಾಜದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭದಲ್ಲಿ ಸಚಿವರು ಪಾಲ್ಗೊಂಡು ಮಾತನಾಡಿದರು.
ಅನೇಕ ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದರೂ ಆರ್ಥಿಕ ತೊಂದರೆಯಿಂದ ಉನ್ನತ ಶಿಕ್ಷಣ ಪಡೆಯಲಾಗುತ್ತಿಲ್ಲ.ಹಾಗಾಗಿ,ಎಂಟಿಬಿ ಅನಂತ ಉನ್ನತಿ ಎಜುಕೇಷನ್ ಟ್ರಸ್ಟ್ ನಿಂದ ಈ ಬಾರಿ 24 ವಿದ್ಯಾರ್ಥಿಗಳಿಗೆ ತಲಾ 60 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ತಲಾ 50 ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವುದಾಗಿ ಸಚಿವ ಎಂಟಿಬಿ ನಾಗರಾಜು ಪ್ರಕಟಿಸಿದರು.
ಕುರುಬ ಸಮಾಜದ ಹೆಚ್ಚು ಮಂದಿ ವೈದ್ಯಕೀಯ ಶಿಕ್ಷಣ ಪಡೆಯುವಂತಾಗಬೇಕು.ಅದಕ್ಕಾಗಿ ನೀಟ್ ಪರೀಕ್ಷೆಗಾಗಿ ತರಬೇತಿ ಕೇಂದ್ರ ಆರಂಭಿಸಬೇಕು.ಅದಕ್ಕೆ ಅಗತ್ಯವಾದ ನೆರವು ನೀಡುವೆ ಎಂದು ಸಚಿವರು ಭರವಸೆ ನೀಡಿ, ಜೀವನದಲ್ಲಿ ಗುರಿ ಇರಬೇಕು.ಜೊತೆಗೆ, ಅದೃಷ್ಟವೂ ಜೊತೆಗೂಡಿದರೆ ಅದ್ಬುತಗಳನ್ನು ಸಾಧಿಸಬಹುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಸೀಟು ಪಡೆದ 160 ವಿದ್ಯಾರ್ಥಿಗಳನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಮಾಜಿ ಸಚಿವ ಎಚ್.ಎಂ.ರೇವಣ್ಣ,ಮಾಜಿ ಶಾಸಕ ಡಾ.ಹುಲಿ ನಾಯ್ಕ್,ಟ್ರಸ್ಟ್ ನ ಸಂಸ್ಥಾಪಕ ಟ್ಟಸ್ಟಿ ಡಾ.ವಿಜಯಲಕ್ಷೀ ಪರಮೇಶ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ