ಕಲಾವಿದರ ಸಮರ್ಪಣೆ, ಪ್ರೇಕ್ಷಕರ ಪ್ರೋತ್ಸಾಹದಿಂದ ಯಕ್ಷಗಾನದ ಉಳಿವು
ಯಕ್ಷಧ್ರುವ ಪಟ್ಲ ಸಂಭ್ರಮ 2022 ಸಮಾರೋಪದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ
Team Udayavani, May 30, 2022, 1:49 AM IST
yakshadhruva, patla Sambhrama 2022,ಯಕ್ಷಧ್ರುವ, ಪಟ್ಲ ಸಂಭ್ರಮ 2022
ಮಂಗಳೂರು: ಆಧುನಿಕತೆಯ ಹೊಡೆತದಿಂದ ಅನೇಕ ಕಲೆಗಳು ನಶಿಸುತ್ತಿರುವ ಕಾಲ ಘಟ್ಟದಲ್ಲಿ ಯಕ್ಷಗಾನ ತನ್ನ ಅಸ್ತಿತ್ವವನ್ನು ಉಳಿಸಿಕೊಂಡು, ಜನಪ್ರಿಯತೆ ವೃದ್ಧಿಸಿ ಕೊಂಡು ಬೆಳೆಯುವಲ್ಲಿ ಕಲಾವಿದರ ಸಮರ್ಪಣ ಭಾವ, ಹೊಸತನ, ಪ್ರೇಕ್ಷಕರ ಪ್ರೋತ್ಸಾಹ ಕಾರಣವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟರು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಆಶ್ರಯದಲ್ಲಿ ರವಿವಾರ ಅಡ್ಯಾರ್ ಗಾರ್ಡನ್ನಲ್ಲಿ ಡಾ| ಪುನೀತ್ ರಾಜ್ಕುಮಾರ್ ವೇದಿಕೆ ಯಲ್ಲಿ ಜರಗಿದ ಯಕ್ಷಧ್ರುವ ಪಟ್ಲ ಸಂಭ್ರಮ 2022 ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತ ನಾಡಿದರು. ಪಟ್ಲ ಸತೀಶ್ ಶೆಟ್ಟಿ ಅವರಂಥ ಯುವ ಕಲಾವಿದರು ಹೊಸತನವನ್ನು ಪ್ರತಿಪಾದಿಸಿದ ಕಾರಣ ಈ ಕಲೆ ಸಾಕಷ್ಟು ಜನರನ್ನು ಆಕರ್ಷಿ ಸುತ್ತಿದೆ. ಸತೀಶ್ ಶೆಟ್ಟಿ ಅವರ ನೇತೃತ್ವದ ಟ್ರಸ್ಟ್ ಯಕ್ಷಗಾನ ಕಲೆ, ಕಲಾವಿದರ ಅಭಿವೃದ್ಧಿಗಾಗಿ ನಡೆಸುತ್ತಿರುವ ಕಾರ್ಯ ಅನನ್ಯ ಎಂದರು.
ಎಡನೀರು ಮಠದ ಶ್ರೀ ಸಚ್ಚಿದಾ ನಂದ ಭಾರತಿ ಸ್ವಾಮೀಜಿ, ಶ್ರೀ ಕ್ಷೇತ್ರ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.
ಮುಂಬಯಿಯ ಉದ್ಯಮಿ, ಟ್ರಸ್ಟ್ನ ಗೌರವಾಧ್ಯಕ್ಷ ಸದಾಶಿವ ಶೆಟ್ಟಿ ಕನ್ಯಾನ ಶುಭಾಶಂಸನೆಗೈದರು. ಬರೋಡಾದ ಉದ್ಯಮಿ ಶಶಿಧರ ಬಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಸಚಿವ ಎಸ್. ಅಂಗಾರ, ಕೆಪಿಎಸ್ಸಿ ನಿವೃತ್ತ ಆಯುಕ್ತ ಟಿ. ಶ್ಯಾಮ್ ಭಟ್, ಉದ್ಯಮಿಗಳಾದ ಆನಂದ ಶೆಟ್ಟಿ ತೋನ್ಸೆ, ರಘುರಾಮ ಶೆಟ್ಟಿ, ಕೆ.ಎಂ. ಶೆಟ್ಟಿ, ರವೀಂದ್ರ ಭಂಡಾರಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಪೂನಾ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ, ಸಂಗೀತ ನಿರ್ದೇಶಕ ಗುರುಕಿರಣ್, ಬಂಟರ ಸಂಘ ಮುಂಬಯಿ ಪ್ರಧಾನ ಕಾರ್ಯದರ್ಶಿ ಆರ್.ಕೆ. ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.
ಶಾಸಕರಾದ ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್, ಡಾ| ಭರತ್ ಶೆಟ್ಟಿ, ಎಂಇಐ ಲಿ. ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಉದ್ಯಮಿ ಸಂತೋಷ್ ಶೆಟ್ಟಿ, ಹಿಂ. ವರ್ಗಗಳ ಆಯೋಗದ ಸದಸ್ಯ ಕೆ.ಟಿ. ಶೆಟ್ಟಿ, ಉದ್ಯಮಿ ಯಾದವ ಕೋಟ್ಯಾನ್ ವಿಶೇಷ ಆಹ್ವಾನಿತರಾಗಿದ್ದರು.
ಟ್ರಸ್ಟ್ನ ಮಹಾಪೋಷಕರಾದ ರಾಜ್ಯೋತ್ಸವ ಪುರಸ್ಕೃತ ಚೆಲ್ಲಡ್ಡ ಕೆ.ಡಿ. ಶೆಟ್ಟಿ ದಂಪತಿ ಹಾಗೂ ವಕ್ವಾಡಿ ಪ್ರವೀಣ್ ಶೆಟ್ಟಿ, ಅಂತಾರಾಷ್ಟ್ರೀಯ ಸೊಸೈಟಿ ಐಕಾನ್ ಪ್ರಶಸ್ತಿ ಪುರಸ್ಕೃತ ಕಡಂದಲೆ ಸುರೇಶ್ ಭಂಡಾರಿ ಹಾಗೂ ಸಹಕಾರಿ ರತ್ನ ಪುರಸ್ಕೃತ ಸವಣೂರು ಸೀತಾರಾಮ ರೈ ದಂಪತಿಗೆ ಗೌರವಾರ್ಪಣೆ ಸಲ್ಲಿಸಿ ಸಮ್ಮಾನಿಸಲಾಯಿತು. ಭಾರತೀಯ ಸೇನೆಯ ಮೇಜರ್ ಆಗಿ ಪದೋನ್ನತಿ ಹೊಂದಿರುವ ಭರತ್ ಶೆಟ್ಟಿ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ ಸ್ವಾಗತಿಸಿದರು. ಅಡ್ಯಾರ್ ಪುರುಷೋತ್ತಮ ಭಂಡಾರಿ, ಕದ್ರಿ ನವನೀತ್ ಶೆಟ್ಟಿ ನಿರೂಪಿಸಿದರು. ಬೆಳಗ್ಗೆ ಉದ್ಘಾಟನ ಸಮಾ ರಂಭ ಜರಗಿತು. ಸಮಾರಂಭ ದಲ್ಲಿ “ಯಕ್ಷಾಂಗಣ ಧ್ರುವತಾರೆ ಪಟ್ಲ’ ಮತ್ತು “ಧ್ರುವ ಪ್ರಭ’-ಸೇವಾಯಾನದ ಮೆಲುಕು ಕೃತಿ ಬಿಡುಗಡೆ ಮಾಡಲಾಯಿತು.
ಪಟ್ಲ ಪ್ರಶಸ್ತಿ ಪ್ರದಾನ
ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ 1 ಲಕ್ಷ ರೂ. ನಗದು ಸಹಿತ “ಪಟ್ಲ ಪ್ರಶಸ್ತಿ 2022′ ನೀಡಿ ಗೌರವಿಸಲಾಯಿತು. ಕರ್ನಾಟಕ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ| ಎಂ.ಎಲ್. ಸಾಮಗ ಅಭಿನಂದನ ಭಾಷಣ ಮಾಡಿದರು. ಪದ್ಮನಾಭ ಉಪಾಧ್ಯ, ಸದಾಶಿವ ಶೆಟ್ಟಿಗಾರ್ ಸಿದ್ದಕಟ್ಟೆ, ಅಜ್ರಿ ಗೋಪಾಲ ಗಾಣಿಗ, ಯೋಗಾಕ್ಷಿ ಗಣೇಶ್ ಗುಜರನ್, ಮಾಧವ ಭಂಡಾರಿ ಕುಳಾಯಿ, ಕಲ್ಲುಗುಂಡಿ ಕೊರಗಪ್ಪ ಮಣಿಯಾಣಿ, ಉಜಿರೆ ನಾರಾಯಣ ಪೂಜಾರಿ, ವಿಜಯಕುಮಾರ್ ಶೆಟ್ಟಿ ಮೊಲೊಟ್ಟು, ಅರೆಹೊಳೆ ಸಂಜೀವ ಶೆಟ್ಟಿ, ಮಧುಕರ ಬೋಳೂರು ಅವರಿಗೆ ತಲಾ 20 ಸಾವಿರ ರೂ. ನಗದು ಸಹಿತ “ಯಕ್ಷಧ್ರುವ ಕಲಾ ಗೌರವ-2022′ ಪ್ರದಾನ ಮಾಡಲಾಯಿತು.
ಕಲಾವಿದರಿಗೆ ನೆರವು
ಯಕ್ಷಧ್ರುವ ಪಟ್ಲ ಸಂಭ್ರಮ 2022 ಕಾರ್ಯಕ್ರಮದಲ್ಲಿ ಸೇವಾಯೋಜನೆಯಡಿ 13 ಮಂದಿ ಆಶಕ್ತ ಕಲಾವಿದರಿಗೆ ತಲಾ 50 ಸಾವಿರ ರೂ. ನೆರವು, 12 ಮಂದಿ ಕಲಾವಿದರಿಗೆ ತಲಾ 25 ಸಾವಿರ ರೂ.ಗಳಂತೆ ವೈದ್ಯಕೀಯ ನೆರವು, 24 ಮಂದಿ ಕಲಾವಿದರಿಗೆ ಮನೆ ನಿರ್ಮಾಣಕ್ಕೆ ತಲಾ 25 ಸಾವಿರ ರೂ. ನೆರವು, ಯಕ್ಷಾಶ್ರಯ ಯೋಜನೆಯಲ್ಲಿ ಮನೆ ನಿರ್ಮಾಣ ಸೇರಿದಂತೆ ಒಟ್ಟು 57.5 ಲಕ್ಷ ರೂ. ನೆರವು ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಉಚ್ಚಾಟಿಸಿದರೇನಂತೆ.. ಜಗದೀಶ್ ಶೆಟ್ಟರ್ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್
AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್
ರಾಜ್ಯಕ್ಕೆ ಬರುತ್ತಿದ್ದ ನೀರನ್ನು ತಡೆ ಹಿಡಿದ ಮಹಾ ಸರ್ಕಾರದ ಕ್ರಮಕ್ಕೆ ರೈತರು ಆಕ್ರೋಶ
Jackfruit: ಹಲಸಿನ ಹಣ್ಣಿನ ಬೆಲೆ ದುಬಾರಿ, ರೈತರ ಸಂತಸ
Chikkaballapur: ಇಳುವರಿ ಕುಸಿತ; ಮಾವಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ