ಸೌಡ-ಶಂಕರನಾರಾಯಣ ಸೇತುವೆ ನಿರ್ಮಾಣಕ್ಕೆ ಕಾಲ ಸನ್ನಿಹಿತ

15 ಕೋ.ರೂ. ವೆಚ್ಚದ ಕಾಮಗಾರಿ

Team Udayavani, May 30, 2022, 10:19 AM IST

river

ಕುಂದಾಪುರ: ಅನೇಕ ವರ್ಷಗಳಿಂದ ಘೋಷಣೆಯಾಗಿ, ನನೆಗುದಿಗೆ ಬಿದ್ದಿದ್ದ ಬಹು ಬೇಡಿಕೆಯ ಸೌಡ-ಶಂಕರನಾರಾಯಣ ಸೇತುವೆಗೆ ಅಂತೂ ಟೆಂಡರ್‌ ಕರೆಯಲಾಗಿದೆ. ಇದರೊಂದಿಗೆ ಗಗನಕುಸುಮವಾಗಿದ್ದ ಸೌಡ ಸೇತುವೆ ಕಾಮಗಾರಿಗೆ ಚಾಲನೆ ನೀಡುವ ಕಾಲ ಸನ್ನಿಹಿತವಾಗಿದೆ.

ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರಾಹಿ ನದಿಗೆ ಅಡ್ಡಲಾಗಿ ಶಂಕರನಾರಾಯಣ ಗ್ರಾಮದ ಸೌಡದಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ಉಡುಪಿ ಲೋಕೋಪಯೋಗಿ ಇಲಾಖೆಯಿಂದ ಮೇ 23ಕ್ಕೆ ಆನ್‌ ಲೈನ್‌ ಮೂಲಕ ಟೆಂಡರ್‌ ಕರೆಯಲಾಗಿದೆ. ಟೆಂಡರ್‌ನಲ್ಲಿ ಭಾಗವಹಿಸಲು ಒಂದು ತಿಂಗಳ ಕಾಲಾವಕಾಶವಿದ್ದು, ಜೂ.23ರಂದು ಟೆಂಡರ್‌ ಪ್ರಕ್ರಿಯೆ ಅಂತ್ಯವಾಗಲಿದೆ.

15 ಕೋ.ರೂ. ವೆಚ್ಚ

ಈ ಸೌಡ – ಶಂಕರನಾರಾಯಣ ಸೇತುವೆಯು ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗೆ ಮತ್ತೂಂದು ಸಂಪರ್ಕ ಕೊಂಡಿಯಾಗಲಿದ್ದು, 15 ಕೋ.ರೂ. ವೆಚ್ಚದಲ್ಲಿ ಟೆಂಡರ್‌ ಕರೆಯಲಾಗಿದೆ. ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡ ಬಳಿಕ, ವರ್ಕ್‌ ಆರ್ಡರ್‌ ಆಗಲಿದ್ದು, ಆ ಬಳಿಕ ಕಾಮಗಾರಿಗೆ ಚಾಲನೆ ಸಿಗಲಿದೆ. ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟರ ಪ್ರಯತ್ನದಿಂದಾಗಿ ಅನುದಾನ ಮಂಜೂರಾಗಿದೆ.

ಶಾಸಕರಿಗೆ ಕೃತಜ್ಞತೆ

ಕಳೆದ ಚುನಾವಣೆ ಸಂದರ್ಭದಲ್ಲಿ ಬೈಂದೂರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟರು ಸೌಡ – ಶಂಕರನಾರಾಯಣ ಸೇತುವೆ ಮಾಡಿಕೊಡುವ ಭರವಸೆ ನೀಡಿದ್ದು, ಅದರಂತೆ ಸೇತುವೆಗೆ ಅನುದಾನ ಮಂಜೂರಾಗಿ, ಟೆಂಡರ್‌ ಕರೆಯಲಾಗಿದೆ. ಕೊಟ್ಟ ಮಾತು ಉಳಿಸಿಕೊಂಡ ಶಾಸಕರಿಗೆ ಈ ಭಾಗದ ಜನರು ಕೃತಜ್ಞತೆ ಸಲ್ಲಿಸಿದ್ದಾರೆ.

10 ಕಿ.ಮೀ. ಹತ್ತಿರ

ಸೌಡ ಸೇತುವೆಯಾದರೆ ಪ್ರಮುಖವಾಗಿ ಉಪ ನೋಂದಣಿ ಕಚೇರಿ ಸಹಿತ ಹತ್ತು ಹಲವು ಸರಕಾರಿ ಕಚೇರಿಗಳನ್ನು ಹೊಂದಿರುವ ಶಂಕರನಾರಾಯಣಕ್ಕೆ ಬರಲು ಹಾರ್ದಳ್ಳಿ-ಮಂಡಳ್ಳಿ, ಮೊಳಹಳ್ಳಿ, ಹೊಂಬಾಡಿ – ಮಂಡಾಡಿ, ಯಡಾಡಿ – ಮತ್ಯಾಡಿ, ಕೊರ್ಗಿ, ಜಪ್ತಿ, ಹೆಸ್ಕಾತ್ತೂರು ಗ್ರಾಮಗಳ ಜನರಿಗೆ ಅನುಕೂಲವಾಗಲಿದೆ. ಇನ್ನು ಸೌಡ ಭಾಗದ ಜನರು ಕುಂದಾಪುರ ಹಾಗೂ ಉಡುಪಿಗೆ ಬರಲು 10ರಿಂದ 12 ಕಿ.ಮೀ. ಹತ್ತಿರವಾಗಲಿದೆ. ಮಚ್ಚಟ್ಟು, ಸಿದ್ದಾಪುರ, ಹೊಸಂಗಡಿ, ಉಳ್ಳೂರು-74 ಭಾಗದ ಜನರಿಗೆ ಮಣಿಪಾಲ, ಉಡುಪಿಗೆ ತೆರಳಲು ಸಹ ಪ್ರಯೋಜನವಾಗಲಿದೆ.

ಭರವಸೆ ಈಡೇರಿಸಿದ್ದೇನೆ

ಚುನಾವಣೆ ಸಂದರ್ಭದಲ್ಲಿ ಗೆದ್ದರೆ ನಾನು ಅಲ್ಲಿನ ಜನರಿಗೆ ಸೇತುವೆ ಮಾಡಿಕೊಡುವ ಭರವಸೆ ನೀಡಿದ್ದೆ. ಅದರಂತೆ ಈಗ ಅನುದಾನ ಮಂಜೂರಾಗಿ, ಟೆಂಡರ್‌ಗೆ ಹೋಗಿದೆ. ಅದೆಲ್ಲ ಪ್ರಕ್ರಿಯೆ ಮುಗಿದು, ಆದಷ್ಟು ಬೇಗ ಕಾಮಗಾರಿಗೆ ಚಾಲನೆ ಸಿಗಲಿದೆ. ಆಗ ಜನರಿಗೆ ನೀಡಿದ್ದ ಭರವಸೆಯನ್ನು ಈಡೇರಿಸಿದ್ದೇನೆ. – ಬಿ.ಎಂ. ಸುಕುಮಾರ್‌ ಶೆಟ್ಟಿ, ಶಾಸಕರು

ಟೆಂಡರ್‌ ಪ್ರಕ್ರಿಯೆ

ಮೇ 23ಕ್ಕೆ ಟೆಂಡರ್‌ ಕರೆಯಲಾಗಿದೆ. ಟೆಂಡರ್‌ನಲ್ಲಿ ಭಾಗವಹಿಸಲು ಗುತ್ತಿಗೆದಾರರಿಗೆ ಒಂದು ತಿಂಗಳ ಕಾಲಾವಕಾಶವಿದೆ. ಟೆಂಡರ್‌ ಕಾರ್ಯ ಮುಗಿದ ಬಳಿಕ ಮುಂದಿನ ಪ್ರಕ್ರಿಯೆ ನಡೆಯಲಿದೆ. – ದುರ್ಗಾದಾಸ್‌, ಸಹಾಯಕ ಕಾರ್ಯ ಪಾಲಕ ಎಂಜಿನಿಯರ್‌, ಕುಂದಾಪುರ ಲೋಕೋಪಯೋಗಿ ಇಲಾಖೆ

ಸುದಿನ ವರದಿ

ಸೌಡ- ಶಂಕರ ನಾರಾಯಣ ಸೇತುವೆ ಬೇಡಿಕೆ ಬಗ್ಗೆ, ಒಮ್ಮೆ ಘೋಷಣೆಯಾಗಿ ಬಳಿಕ ನನೆಗುದಿಗೆ ಬಿದ್ದ ಕುರಿತು, ವಿಳಂಬದ ಬಗ್ಗೆಯೂ ‘ಉದಯವಾಣಿ ಸುದಿನ’ವು ನಿರಂತರ ವಿಶೇಷ ವರದಿಗಳನ್ನು ಪ್ರಕಟಿಸಿ, ಗಮನಸೆಳೆದಿತ್ತು.

ಟಾಪ್ ನ್ಯೂಸ್

ಕಾಂಗ್ರೆಸ್‌ಗೆ 5 ಸ್ಥಾನದಲ್ಲಿ ಗೆಲುವು: ರಾಮಲಿಂಗಾ ರೆಡ್ಡಿ

ಕಾಂಗ್ರೆಸ್‌ಗೆ 5 ಸ್ಥಾನದಲ್ಲಿ ಗೆಲುವು: ರಾಮಲಿಂಗಾ ರೆಡ್ಡಿ

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

British Prime Minister Sunak thought to change the student visa policy!

U.K; ವಿದ್ಯಾರ್ಥಿ ವೀಸಾ ನೀತಿ ಬದಲಿಸಲು ಬ್ರಿಟನ್‌ ಪ್ರಧಾನಿ ಸುನಕ್‌ ಚಿಂತನೆ!

ಅಧಿಕಾರ ಸಿಗದಕ್ಕೆ ಎಚ್‌ಡಿಕೆ ಹತಾಶರಾಗಿ ಮಾತನಾಡುತ್ತಿದ್ದಾರೆ: ಡಿಕೆಶಿ ಲೇವಡಿ

ಅಧಿಕಾರ ಸಿಗದಕ್ಕೆ ಎಚ್‌ಡಿಕೆ ಹತಾಶರಾಗಿ ಮಾತನಾಡುತ್ತಿದ್ದಾರೆ: ಡಿಕೆಶಿ ಲೇವಡಿ

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

ಚೀನಾ ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

China ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppunda ಅಪರಿಚಿತ ವಾಹನ ಢಿಕ್ಕಿ; ಕೂಲಿ ಕಾರ್ಮಿಕ ಸಾವು

Uppunda ಅಪರಿಚಿತ ವಾಹನ ಢಿಕ್ಕಿ; ಕೂಲಿ ಕಾರ್ಮಿಕ ಸಾವು

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Byndoor ಟಿ.ಸಿ. ವಿಷಯ: ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Byndoor ಟಿ.ಸಿ. ವಿಷಯ: ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಕಾಂಗ್ರೆಸ್‌ಗೆ 5 ಸ್ಥಾನದಲ್ಲಿ ಗೆಲುವು: ರಾಮಲಿಂಗಾ ರೆಡ್ಡಿ

ಕಾಂಗ್ರೆಸ್‌ಗೆ 5 ಸ್ಥಾನದಲ್ಲಿ ಗೆಲುವು: ರಾಮಲಿಂಗಾ ರೆಡ್ಡಿ

bjpMLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

British Prime Minister Sunak thought to change the student visa policy!

U.K; ವಿದ್ಯಾರ್ಥಿ ವೀಸಾ ನೀತಿ ಬದಲಿಸಲು ಬ್ರಿಟನ್‌ ಪ್ರಧಾನಿ ಸುನಕ್‌ ಚಿಂತನೆ!

ಅಧಿಕಾರ ಸಿಗದಕ್ಕೆ ಎಚ್‌ಡಿಕೆ ಹತಾಶರಾಗಿ ಮಾತನಾಡುತ್ತಿದ್ದಾರೆ: ಡಿಕೆಶಿ ಲೇವಡಿ

ಅಧಿಕಾರ ಸಿಗದಕ್ಕೆ ಎಚ್‌ಡಿಕೆ ಹತಾಶರಾಗಿ ಮಾತನಾಡುತ್ತಿದ್ದಾರೆ: ಡಿಕೆಶಿ ಲೇವಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.