ಸರ್ಕಾರದ ನಡೆಗೆ ಖಂಡನೆ: ಕುವೆಂಪು ಪ್ರತಿಷ್ಠಾನಕ್ಕೆ ನಾಡೋಜ ಹಂಪನಾ ರಾಜೀನಾಮೆ
Team Udayavani, May 30, 2022, 2:19 PM IST
ಬೆಂಗಳೂರು: ರಾಷ್ಟ್ರಕವಿ ಕುವೆಂಪು ಮತ್ತು ಅವರ ಬರೆದ ನಾಡಗೀತೆಯನ್ನು ಅವಮಾನ ಮಾಡಿದ ರೋಹಿತ್ ಚಕ್ರತೀರ್ಥ ವಿರುದ್ದ ಕ್ರಮ ಕೈಗೊಳ್ಳದ ಸರ್ಕಾರದ ನಡೆಯನ್ನು ಖಂಡಿಸಿ ಖ್ಯಾತ ಸಾಹಿತಿ ನಾಡೋಜ ಹಂಪನಾಗರಾಜಯ್ಯ ಅವರು ಇಂದು ರಾಷ್ಟ್ರಕವಿ ಕುವೆಂಪು ಪತ್ರಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಇಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ನಾಡೋಜ ಹಂಪನಾಗರಾಜಯ್ಯ ಅವರು ಅದೇ ಪತ್ರವನ್ನು ಸುದ್ದಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ.
ತಮ್ಮ ಅಮೂಲ್ಯ ಕೃತಿಗಳಿಂದ ಹೊಸಗನ್ನಡ ಸಾಹಿತ್ಯ ದ ಎಲ್ಲಾ ಪ್ರಕಾರಗಳನ್ನೂ ಸಪ್ರಾಣಿಸಿ ಭಾರತೀಯ ಸಾಹಿತ್ಯದಲ್ಲಿ ಕನ್ನಡಕ್ಕೂ ಕರ್ನಾಟಕಕ್ಕೂ ಮಹಾಕವಿ ಕುವೆಂಪುರವರು ಗೌರವ ತಂದರು. ಅವರು ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದ ಮೊದಲಿಗರು. ಇದನ್ನರಿತು ಸರ್ಕಾರ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾವನ ವನ್ನು ಪ್ರಾರಂಭಿಸಿತಲ್ಲದೆ ಅತ್ಯುನ್ನತ ಕರ್ನಾಟಕ ರತ್ನ ಪ್ರಶಸ್ತಿಯನ್ನಿತ್ತು ಗೌರವಿಸಿತು. ಆದರೆ ಇಂದು ಕುವೆಂಪು ರವರನ್ನೂ ಅವರು ಹುಟ್ಟಿದ ಗೌರವಾನ್ವಿತ ದೊಡ್ಡ ಜನಾಂಗವನ್ನೂ ಅವಾಚ್ಯ ಶಬ್ದಗಳಿಂದ ನಿಂದಿಸಿ ನಮ್ಮ ರಾಷ್ಟ್ರಗೀತೆಯಾದ ನಾಡಗೀತೆಯನ್ನು ಲೇವಡಿ ಮಾಡಿದ ವ್ಯಕ್ತಿಯ ಮೇಲೆ ಕ್ರಮಕೈಗೊಳ್ಳುವ ಬದಲು ಸರ್ಕಾರ ಜವಾಬ್ದಾರಿಯ ಸ್ಥಾನ ನೀಡಿದೆ. ಇದು ಅಪಾಯಕಾರಿಯಾದ ಬೆಳವಣಿಗೆ. ಇದರಿಂದ ಪುಣ್ಯಶ್ಲೋಕರ ಮೇಲೆ ಕೆಟ್ಟ ಮಾತುಗಳ ಮಳೆ ಸುರಿಸಿದರೆ ಅಂಥವರಿಗೆ ಸರಕಾರದ ಸಮಿತಿಗಳಲ್ಲಿ ಸದಸ್ಯರಾಗುವ ಸದಾವಕಾಶಗಲಿವೆ ಎಂಬ ತಪ್ಪು ಸಂದೇಶ ರವಾನೆ ಮಾಡಿದಂತಾಗಿದೆ ಎಂದು ಹಂಪನಾಗರಾಜಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.
ವ್ಯಕ್ತಿಗಳ ತೇಜೋವಧೆ ಮಾಡುವುದನ್ನು ನಮ್ಮ ಸರಕಾರ ಸಹಿಸುವುದಿಲ್ಲ ಎಂಬ ನಂಬಿಕೆ ಹುಸಿಯಾಗಿದೆ. ರಾಷ್ಟ್ರಕವಿ ಕುವೆಂಪುರವನ್ನೂ ನಮ್ಮ ಪವಿತ್ರ ನಾಡಗೀತೆಯನ್ನೂ ಅಪಮಾನಿಸುತ್ತಿದ್ದರೂ ನೋಡಿಕೊಂಡು ತೆಪ್ಪಗಿರುವುದು ನನಗೆ ಕಷ್ಟವಾಗಿದೆ. ಸಕಾರ ಸ್ಥಾಪಿಸಿರುವ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೂ ಸದಸ್ಯತ್ವಕ್ಕೂ ನನ್ನ ರಾಜೀನಾಮೆಯನ್ನು ಮಾನ್ಯ ಮುಖ್ಯಮಂತ್ರಿಗಳು ಅಂಗೀಕರೀಸಬೇಕೆಂದು ಹಂಪನಾ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ