ಉಪ್ಪಿನಕುದ್ರು ಲವ್‌ ಜೆಹಾದ್‌ ಪ್ರಕರಣ: ವಿಹಿಂಪ, ಬಜರಂಗದಳ ಪ್ರತಿಭಟನೆ


Team Udayavani, Jun 1, 2022, 1:21 AM IST

ಉಪ್ಪಿನಕುದ್ರು ಲವ್‌ ಜೆಹಾದ್‌ ಪ್ರಕರಣ: ವಿಹಿಂಪ, ಬಜರಂಗದಳ ಪ್ರತಿಭಟನೆ

ಕುಂದಾಪುರ: ಉಪ್ಪಿನಕುದ್ರು ಲವ್‌ ಜೆಹಾದ್‌ ಪ್ರಕರಣದ ಹಿಂದಿನ ಶಕ್ತಿಗಳ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು. ಪರಾರಿಯಾದ ಆರೋಪಿಗಳು ಕೇರಳದಲ್ಲಿ ಇದ್ದರು. ಅಲ್ಲಿ ಲವ್‌ ಜೆಹಾದ್‌ಗೆ ತರಬೇತಿ ನೀಡುವ ಸಂಸ್ಥೆಯೇ ಕಾರ್ಯಾಚರಿಸುತ್ತಿದೆ. ಘಟನೆಯ ಹಿಂದಿನ ಸಂಘಟನೆ, ಶಕ್ತಿಗಳ ಮುಖವಾಡ ಬಯಲಾಗಬೇಕು ಎಂದು ವಿಶ್ವ ಹಿಂದೂ ಪರಿಷತ್‌ ವಿಭಾಗ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಹೇಳಿದರು.

ಅವರು ಮಂಗಳವಾರ ಸಂಜೆ ಇಲ್ಲಿನ ಶಾಸ್ತ್ರಿ ವೃತ್ತದ ಬಳಿ ವಿಹಿಂಪ ಹಾಗೂ ಬಜರಂಗದಳ ವತಿಯಿಂದ ನಡೆದ ಲವ್‌ ಜೆಹಾದ್‌ ವಿರುದ್ಧದ ಪ್ರತಿಭಟನೆ ಹಾಗೂ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಉನ್ನತ ತನಿಖೆಗೆ ಆಗ್ರಹಿಸಿ ಬುಧವಾರ ಜಿಲ್ಲೆಗೆ ಆಗಮಿಸುವ ಮುಖ್ಯಮಂತ್ರಿಗೆ ಮನವಿ ನೀಡಲಾಗುವುದು. ಮುಂದಿನ ದಿನಗಳಲ್ಲಿ ಶಿಲ್ಪಾ ರೀತಿ ಬೇರೆ ಹೆಣ್ಣುಮಕ್ಕಳಿಗೆ ಅನ್ಯಾಯ ಆದರೆ ಹಿಜಾಬ್‌ ಘಟನೆಯಂತೆಯೇ ಆರ್ಥಿಕ ಬಹಿಷ್ಕಾರ ಹಾಕಲಾಗುವುದು. ಕುಂದಾಪುರದ ಜನ ಸೌಮ್ಯವಾದಿಗಳು. ಇಂದು ಒಂದು ಮನೆಯಲ್ಲಿ ನಡೆದುದು ನಾಳೆ ಇನ್ನೊಂದಷ್ಟು ಮನೆಗಳಿಗೆ ಹಬ್ಬದಂತೆ ಹಿಂದೂ ಸಮಾಜ ಜಾಗೃತಗೊಳ್ಳಬೇಕು. ಸಾಮಾ ಜಿಕ ಜಾಲತಾಣಗಳಿಂದ ಹೆಣ್ಮಕ್ಕಳು ದೂರ ಇರಬೇಕು ಎಂದರು.

ಪ್ರತೀ ಗ್ರಾಮದಲ್ಲಿ
ಮಹಿಳಾ ಬ್ರಿಗೇಡ್‌
ಬಜರಂಗದಳ ಪ್ರಾಂತ ಸಂಯೋಜಕ ಸುನಿಲ್‌ ಕೆ.ಆರ್‌. ಮಾತನಾಡಿ, ಲವ್‌ ಜೆಹಾದ್‌ ವ್ಯವಸ್ಥಿತವಾಗಿ ವ್ಯಾಪಿಸುತ್ತಿದೆ. ಇದು ಕೇವಲ ಪ್ರತಿಭಟನೆ ಅಲ್ಲ, ಜನಜಾಗೃತಿ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಪ್ರತೀ ಗ್ರಾಮಗಳಲ್ಲಿ ಮಹಿಳಾ ಬ್ರಿಗೇಡ್‌ ಆರಂಭಿಸಲಾಗುವುದು ಎಂದರು.

ವಿಹಿಂಪ ಉಡುಪಿ ಜಿಲ್ಲಾ ಕಾರ್ಯ ದರ್ಶಿ ದಿನೇಶ್‌ ಮೆಂಡನ್‌, ಸಮಾಜದ ರಕ್ಷಣೆಗೆ ತ್ರಿಶೂಲ ದೀಕ್ಷೆ ನೀಡಲಾಗಿದೆ. ಅಗತ್ಯ ಬಿದ್ದರೆ ಅದರ ಉಪಯೋಗ ನಮಗೆ ತಿಳಿದಿದೆ. ಘಟನೆಯ ಹಿಂದಿನ ಎಲ್ಲ ಷಡ್ಯಂತ್ರ ಬಯಲಾಗುವವರೆಗೆ ಹೋರಾಟ ಮುಂದುವರಿಯಲಿದೆ ಎಂದರು.

ವಿಹಿಂಪ ಕೇಂದ್ರ ವಿಶ್ವಸ್ತ ಮಂಡಳಿ ಸದಸ್ಯ ಪ್ರೇಮಾನಂದ ಶೆಟ್ಟಿ ಬಜರಂಗದಳ ವಿಭಾಗ ಸಂಯೋಜಕ ಭುಜಂಗ ಕುಲಾಲ್‌, ವಿಹಿಂಪ ಜಿಲ್ಲಾ ಉಪಾಧ್ಯಕ್ಷ ಶ್ರೀಧರ ಬಿಜೂರು, ಮಾತೃಶಕ್ತಿ ಪ್ರಮುಖ್‌ ಪೂರ್ಣಿಮಾ ಸುರೇಶ್‌, ಮೃತ ಶಿಲ್ಪಾಳ ಸಹೋದರ ರಾಘವೇಂದ್ರ ದೇವಾಡಿಗ, ವಿಹಿಂಪ ಜಿಲ್ಲಾ ಸಂಪರ್ಕ ಪ್ರಮುಖ್‌ ಗಿರೀಶ್‌ ಕುಂದಾಪುರ, ಬಜರಂಗದಳ ತಾಲೂಕು ಸಂಯೋಜಕ ಸುಧೀರ್‌ ಮೇರ್ಡಿ, ಸಂಘಟನೆ ಮುಖಂಡರಾದ ಗುರುರಾಜ್‌ ಸಂಗಂ, ವಸಂತ ಸಂಗಂ, ವಿಹಿಂಪ ತಾಲೂಕು ಕಾರ್ಯದರ್ಶಿ ಪ್ರದೀಪ್‌ ಮಾರ್ಕೋಡು ಉಪಸ್ಥಿತರಿದ್ದರು.

ಸುರೇಂದ್ರ ಕೋಟೇಶ್ವರ ನಿರ್ವಹಿಸಿದರು. ಹೊಸ ಬಸ್‌ ನಿಲ್ದಾಣದಿಂದ ಶಾಸ್ತ್ರಿ ವೃತ್ತದ ವರೆಗೆ ಮೆರವಣಿಗೆ ನಡೆಯಿತು. ಡಿವೈಎಸ್‌ಪಿಗೆ ಮನವಿ ನೀಡಲಾಯಿತು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.