ಇಂದಿನಿಂದ ಯಾಂತ್ರಿಕ ಮೀನುಗಾರಿಕೆ ನಿಷೇಧ; ಡೀಸೆಲ್‌ ಹೊರೆಯಿಂದ ಬಹುತೇಕ ಬೋಟುಗಳು ನಷ್ಟದಲ್ಲಿ


Team Udayavani, Jun 1, 2022, 7:15 AM IST

ಇಂದಿನಿಂದ ಯಾಂತ್ರಿಕ ಮೀನುಗಾರಿಕೆ ನಿಷೇಧ; ಡೀಸೆಲ್‌ ಹೊರೆಯಿಂದ ಬಹುತೇಕ ಬೋಟುಗಳು ನಷ್ಟದಲ್ಲಿ

ಮಲ್ಪೆ/ಮಂಗಳೂರು: ರಾಜ್ಯ ಸರಕಾರ ಯಾಂತ್ರಿಕ ಮೀನುಗಾರಿಕೆಗೆ ಜೂ. 1ರಿಂದ ಜು. 31ರ ವರೆಗೆ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ಎಲ್ಲ ಯಾಂತ್ರಿಕ ಮೀನುಗಾರರು ತಮ್ಮ ಬೋಟುಗಳನ್ನು ದಡ ಸೇರಿಸುತ್ತಿದ್ದಾರೆ.

ಬುಧವಾರ ಈ ಋತುವಿನ ಯಾಂತ್ರಿಕ ಮೀನುಗಾರಿಕೆಗೆ ಅಧಿಕೃತ ತೆರೆ ಬೀಳಲಿದೆ. ಎಪ್ರಿಲ್‌, ಮೇ ತಿಂಗಳು ವಿಪುಲ ವಾಗಿ ಮೀನುಗಾರಿಕೆ ನಡೆಸುವ ಸಮಯ. ಆಗ ಅತ್ಯಧಿಕ ಸ‌ಂಖ್ಯೆಯಲ್ಲಿ ಮೀನುಗಾರಿಕೆ ನಡೆಯುತ್ತಿದೆ. ಕೆಲವು ವರ್ಷಗಳಿಂದ ಸಿಗದ ಬೂತಾಯಿ, ಬಂಗುಡೆ ಮತ್ತು ಬೊಂಡಾಸ್‌ ಮೀನುಗಳು ಈ ಬಾರಿ ಕಾಣಸಿಕ್ಕಿವೆ. ಆದರೆ ಏರುತ್ತಿರುವ ಡೀಸೆಲ್‌ ದರ ಮೀನು ಗಾರಿಕೆಗೆ ತಡೆಯೊಡ್ಡಿದೆ. ನಷ್ಟದ ಭೀತಿಯಲ್ಲಿ ಮಾಲಕರು ಬೋಟುಗಳನ್ನು ಲಂಗರು ಹಾಕಿದ್ದಾರೆ.

ರೋಡ್‌ಸೆಸ್‌ನಿಂದ
ವಿನಾಯಿತಿಗೆ ಆಗ್ರಹ
ಬೋಟುಗಳು ನೀರಿನಲ್ಲಿ ಚಲಿಸುವುದರಿಂದ ಮೀನುಗಾರಿಕೆಗೆ ರೋಡ್‌ಸೆಸ್‌ ಬರುವುದಿಲ್ಲ. ಈಗಿನ ಡೀಸೆಲ್‌ ದರದಲ್ಲಿ ಒಂದು ಪ್ರಯಾಣದಲ್ಲಿ 6 ಲಕ್ಷ ರೂ. ಮೌಲ್ಯದ ಮೀನು ಹಿಡಿದರೂ ಲಾಭದಾಯಕವಲ್ಲ. ಆದ್ದರಿಂದ ಕರಾವಳಿ ಭಾಗದ ಸಂಸದರು, ಶಾಸಕರು ಸೇರಿ ಮೀನುಗಾರರಿಗೆ ರೋಡ್‌ಸೆಸ್‌ನಿಂದ ವಿನಾಯಿತಿ ಸಿಗುವಂತೆ ಮಾಡಬೇಕು ಎಂದು ಮಲ್ಪೆ ಮೀನುಗಾರರ ಸಂಘದ ಮಾಜಿ ಅಧ್ಯಕ್ಷ ಸತೀಶ್‌ ಕುಂದರ್‌ ಆಗ್ರಹಿಸಿದ್ದಾರೆ.

ಮೀನು ಇಳಿಸಲು ಅವಕಾಶ
ಜೂ. 1ರಿಂದ ಯಾಂತ್ರಿಕ ಮೀನು ಗಾರಿಕೆಗೆ ರಜೆ ಇದ್ದರೂ ಬಂದರು ಸೇರಿರುವ ಬೋಟುಗಳಿಂದ ಮೀನು ಖಾಲಿ ಮಾಡಲು ಕೆಲವು ದಿನಗಳ ಅವಕಾಶ ಕಲ್ಪಿಸಲಾಗಿದೆ ಎಂದು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಕೆ. ಸುವರ್ಣ ತಿಳಿಸಿದ್ದಾರೆ.

ಕರ್ನಾಟಕ ಕರಾವಳಿ ಮೀನುಗಾರಿಕೆ (ನಿಯಂತ್ರಣ) ಕಾಯ್ದೆ 198 ರ ಅನ್ವಯ ಉಡುಪಿ ಜಿಲ್ಲೆಯ ಕರಾವಳಿಯಲ್ಲಿ ಜೂ. 1ರಿಂದ ಜು. 31ರವರೆಗೆ ಯಾಂತ್ರಿಕೃತ ಮೀನುಗಾರಿಕೆ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಎಲ್ಲ ಮೀನುಗಾರರು ಕಡ್ಡಾಯವಾಗಿ ಸರಕಾರದ ಆದೇಶವನ್ನು ಪಾಲಿಸಬೇಕಾಗಿದೆ. ಕಾನೂನು ಉಲ್ಲಂಘಿಸಿದರೆ ಸರಕಾರದಿಂದ ಸಿಗುವ ಮಾರಾಟ ಕರ ರಹಿತ ಡೀಸೆಲ್‌, ಇತರ ಯಾವುದೇ ಸೌಲಭ್ಯಗಳು ಸಿಗುವುದಿಲ್ಲ ಮತ್ತು ದಂಡನೆಗೆ ಗುರಿಯಾಗುತ್ತಾರೆ.
– ಗಣೇಶ್‌ ಕೆ., ಜಂಟಿ ನಿರ್ದೇಶಕರು, ಮೀನುಗಾರಿಕಾ ಇಲಾಖೆ

ಮಳೆಗಾಲದಲ್ಲಿ ನಾಡದೋಣಿ
ಯಾಂತ್ರಿಕ ಮೀನುಗಾರಿಕೆಗೆ ನಿಷೇಧವಿದ್ದರೂ ನಾಡದೋಣಿ ಮೀನುಗಾರಿಕೆಗೆ ಅವಕಾಶವಿದೆ. 12 ನಾಟಿಕಲ್‌ ಮೈಲುನೊಳಗೆ 10 ಅಶ್ವಶಕ್ತಿಯ ಎಂಜಿನ್‌ ಬಳಸಿದ ದೋಣಿಗಳಲ್ಲಿ ಸಮುದ್ರತೀರದಲ್ಲಿ ಮೀನುಗಾರಿಕೆ ನಡೆಸಬಹುದಾಗಿದೆ ಎಂದು ಮಲ್ಪೆ ಸಾಂಪ್ರದಾಯಿಕ ನಾಡದೋಣಿ ಮೀನುಗಾರ ಸಂಘದ ಅಧ್ಯಕ್ಷ ಸುಂದರ ಪಿ. ಸಾಲ್ಯಾನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಲೈಂಗಿಕ ದೌರ್ಜನ್ಯ ಬಿಡುಗಡೆಗೆ ಆದೇಶ

Udupi: ಲೈಂಗಿಕ ದೌರ್ಜನ್ಯ ಬಿಡುಗಡೆಗೆ ಆದೇಶ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.