ಪಠ್ಯ ಪರಿಷ್ಕರಣೆ : ಸಿಎಂಗೆ ವರದಿ ಸಲ್ಲಿಸಿದ ಶಿಕ್ಷಣ ಸಚಿವ
Team Udayavani, Jun 1, 2022, 12:29 PM IST
ಬೆಂಗಳೂರು : ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಸೃಷ್ಟಿಯಾಗಿದ್ದ ಎಲ್ಲ ಗೊಂದಲಗಳಿಗೆ ಸ್ಪಷ್ಟನೆ ನೀಡಿ ಶಿಕ್ಷಣ ಸಚಿವರ ಕಚೇರಿಯಿಂದ ಸಿಎಂ ಬೊಮ್ಮಾಯಿ ಕಾರ್ಯಾಲಯಕ್ಕೆ ವರದಿ ಸಲ್ಲಿಸಲಾಗಿದೆ.
ಗುಜರಾತ್ ನಲ್ಲಿ ನಡೆಯುತ್ತಿರುವ ಶಿಕ್ಷಣ ಸಚಿವರ ಸಮ್ಮೇಳನದಲ್ಲಿ ಭಾಗವಹಿಸಲು ತೆರಳುವುದಕ್ಕೆ ಮುನ್ನ ಈ ವರದಿಯನ್ನು ಸಿಎಂ ಕಚೇರಿಗೆ ಕಳುಹಿಸಲಾಗಿದೆ. ಬೊಮ್ಮಾಯಿ ಅವರು ಬೆಂಗಳೂರಿಗೆ ವಾಪಾಸ್ ಆದ ಬಳಿಕ ಈ ವರದಿಯತ್ತ ಚಿತ್ತ ಹರಿಸಲಿದ್ದಾರೆ.
ಇದನ್ನೂ ಓದಿ:ಪಠ್ಯ ಪರಿಷ್ಕರಣೆಯ ವಾಸ್ತವಾಂಶದ ಆಧಾರದಲ್ಲಿ ನಾಳೆಯೇ ಸೂಕ್ತ ನಿರ್ಧಾರ: ಸಿಎಂ ಬೊಮ್ಮಾಯಿ
ಭಗತ್ ಸಿಂಗ್, ನಾರಾಯಣಗುರು ಕುರಿತಾದ ವಿವಾದಗಳಿಗೆ ಈ ವರದಿಯಲ್ಲಿ ಸ್ಪಷ್ಟನೆ ನೀಡಲಾಗಿದೆ. ಜತೆಗೆ ಕುವೆಂಪು ವಿಚಾರದಲ್ಲಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಶ್ರೀಗಳು ಸೇರಿದಂತೆ ಅನೇಕರ ಪ್ರಶ್ನೆಗಳಿಗೆ ಉತ್ತರ ನೀಡಲಾಗಿದೆ.
ಪರಿಷ್ಕರಣೆ :
ಇದರ ಜತೆಗೆ ಪಿಯುಸಿ ದ್ವಿತೀಯ ವರ್ಷದ ಸಮಾಜ ವಿಜ್ಞಾನದ ಒಂದು ಪಾಠವನ್ನೂ ಬದಲಾಯಿಸಲಾಗಿದೆ. ಒಂದು ಸಮುದಾಯದ ಭಾವನೆಗೆ ಧಕ್ಕೆ ಪಡಿಸುವಂತಿದ್ದ ಹೊಸಧರ್ಮಗಳ ಉದಯ ಪಾಠದ ಆಕ್ಷೇಪಾರ್ಹ ವಿಚಾರವನ್ನು ಕೈ ಬಿಡಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ