ಪಪಂ ಅಧ್ಯಕ್ಷರ ಕೊಠಡಿಯಲ್ಲಿ ಶ್ವಾನ ಆವಾಂತರ!
Team Udayavani, Jun 1, 2022, 2:57 PM IST
ಮೊಳಕಾಲ್ಮೂರು: ಬೀದಿನಾಯಿ ದಾಳಿಯಿಂದ ಇಲ್ಲಿನ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿನ ಅಧ್ಯಕ್ಷರ ಕೊಠಡಿಯಲ್ಲಿದ್ದ ಕುರ್ಚಿ ಹಾಗೂ ಇತರ ವಸ್ತುಗಳು ಚಿಂದಿಯಾದ ಘಟನೆ ನಡೆದಿದೆ.
ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಕಳೆದ ಶುಕ್ರವಾರ ಕೆಲಸದ ಅವಧಿಯ ಬಳಿಕ ಸಿಬ್ಬಂದಿಗಳು ಕಚೇರಿಯ ಬಾಗಿಲು ಹಾಕಿಕೊಂಡು ಹೋಗಿದ್ದರು. ಇದೇ ಸಂದರ್ಭದಲ್ಲಿ ಬೀದಿನಾಯಿಯೊಂದು ಅಧ್ಯಕ್ಷರ ಕೊಠಡಿ ಒಳಗೆ ಸೇರಿಕೊಂಡಿರುವುದನ್ನು ಯಾರೂ ಗಮನಿಸಿರಲಿಲ್ಲ. ನಾಲ್ಕನೇ ಶನಿವಾರ ಮತ್ತು ಭಾನುವಾರ ರಜಾ ಇದ್ದಿದ್ದರಿಂದ ಕಚೇರಿ ಬಾಗಿಲು ತೆರೆದಿರಲಿಲ್ಲ. ಹಾಗಾಗಿ ಪಪಂ ಅಧ್ಯಕ್ಷರ ಕೊಠಡಿಯಲ್ಲಿದ್ದ ಬೀದಿನಾಯಿ ರಜಾ ದಿನಗಳಲ್ಲಿ ಅನ್ನ-ನೀರಿಲ್ಲದೆ ಪರದಾಡುವಂತಾಗಿತ್ತು. ಹಸಿವು ತಾಳಲಾಗದೆ ಪಪಂ ಅಧ್ಯಕ್ಷರು ಕೂರುವ ಕುರ್ಚಿ ಹಾಗೂ ಕಿಡಕಿಗೆ ಹಾಕಿದ್ದ ಕರ್ಟನ್ಗಳನ್ನು ಎಳೆದಾಡಿ ಹರಿದು ಹಾಕಿದೆ.
ಸೋಮವಾರ ಬೆಳಿಗ್ಗೆ ಪಪಂ ಸಿಬ್ಬಂದಿ ಅಧ್ಯಕ್ಷರ ಕೊಠಡಿ ಬಾಗಿಲು ತೆಗೆಯುತ್ತಿದ್ದಂತೆ ಗಾಬರಿಗೊಂಡ ಬೀದಿನಾಯಿ ಓಡಿ ಹೋಗಿದೆ. ಒಳಗೆ ಹೋಗಿ ನೋಡಿದಾಗ ಬೀದಿನಾಯಿ ಕುರ್ಚಿ ಹಾಗೂ ಕರ್ಟನ್ಗಳನ್ನು ಹರಿದು ಹಾಕಿರುವುದು ಬೆಳಕಿಗೆ ಬಂದಿದೆ. ಪಪಂ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಪಪಂ ಅಧ್ಯಕ್ಷ ಪಿ. ಲಕ್ಷ್ಮಣ, ಮುಂದಿನ ದಿನಗಳಲ್ಲಿ ಹೀಗಾಗದಂತೆ ನೋಡಿಕೊಳ್ಳಬೇಕೆಂದು ತಾಕೀತು ಮಾಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ
ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ
ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು
Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ
ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ
MUST WATCH
ಹೊಸ ಸೇರ್ಪಡೆ
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Sandalwood: ದರ್ಶನ್ ʼಡೆವಿಲ್ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್ ಪೋಸ್ಟರ್ ಔಟ್
Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ
Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ