ರೈತ ನಾಯಕ ಟಿಕಾಯತ್‌ ಮೇಲಿನ ಹಲ್ಲೆಗೆ ಖಂಡನೆ


Team Udayavani, Jun 1, 2022, 5:14 PM IST

22protest

ವಿಜಯಪುರ: ರೈತ ನಾಯಕ ರಾಕೇಶ ಟಿಕಾಯತ್‌ ಅವರ ಮೇಲೆ ಬೆಂಗಳೂರಿನಲ್ಲಿ ನಡೆದ ಹಲ್ಲೆ ಹಾಗೂ ಮುಖಕ್ಕೆ ಮಸಿ ಬಳಿದ ಪ್ರಕರಣ ಖಂಡಿಸಿ ನಗರದಲ್ಲಿ ರೈತರು ಹಾಗೂ ಪ್ರಗತಿಪರ ಸಂಘಟನೆಗಳು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದವು.

ಮಂಗಳವಾರ ನಗರದ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿ ಕಪ್ಪು ಬಟ್ಟೆ ಪ್ರದರ್ಶಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ರೈತ ಮುಖಂಡರಿಗೆ ಮಸಿ ಬಳಿದು, ಹಲ್ಲೆ ನಡೆಸಿದ ಕಿಡಿಗೇಡಿಗಳನ್ನು ಜೈಲಿಗೆ ಹಾಕಬೇಕು. ಬೇಜವಾಬ್ದಾರಿತನ ತೋರಿದ ಸರ್ಕಾರಕ್ಕೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಹನೆ-ಸಜ್ಜನಿಕೆಗೆ ಹೆಸರಾದ ಕರ್ನಾಟಕವನ್ನು ಬಿಜೆಪಿ ಗೂಂಡಾ ರಾಜ್ಯವನ್ನಾಗಿಸುತ್ತಿದೆ. ರಾಷ್ಟ್ರೀಯ ರೈತ ನಾಯಕ ರಾಕೇಶ ಟಿಕಾಯತ್‌ ಅವರ ಮೇಲೆ ನಡೆಸಿದ ಹಲ್ಲೆ ಇಡೀ ರೈತ ಸಮುದಾಯಕ್ಕೆ ಮಾಡಿದ ಅಪಮಾನ. ಪ್ರಜಾತಂತ್ರದ ಕಗ್ಗೊಲೆ ಮಾಡಲು ಪ್ರೇರಣೆ ನೀಡುತ್ತಿರುವ ಫ್ಯಾಸಿಸ್ಟ್‌ ಮನಸ್ಥಿತಿ ಪ್ರದರ್ಶಿಸುತ್ತಿರುವ ಶಕ್ತಿಗಳಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು.

ವೈಚಾರಿಕ ಭಿನ್ನಾಭಿಪ್ರಾಯವನ್ನು ಸಿದ್ಧಾಂತದ ಮೂಲಕ ಎದುರಿಸಲಾಗದ ಬಿಜೆಪಿ ಮತ್ತು ಬೆಂಬಲಿಗರರು ನಡೆಸಿರುವ ದಾಳಿ ಅವರ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ. ಇಂಥ ದಾಳಿಗಳಿಗೆ ಕುಮ್ಮಕ್ಕು ನೀಡುತ್ತಿರುವ ರಾಜ್ಯ ಸರ್ಕಾರ ಮತ್ತು ಪೊಲೀಸ್‌ ಇಲಾಖೆ ಬೇಜವಾಬ್ದಾರಿತನ ಎದ್ದು ಕಾಣುತ್ತದೆ ಎಂದು ಹರಿಹಾಯ್ದರು.

ರೈತ ನಾಯಕರಿಗೆ ಮಸಿ ಬಳಿದು ಹಲ್ಲೆ ನಡೆಸಿರುವುದು ಇಡಿ ದೇಶಕ್ಕೆ ಅನ್ನ ನೀಡುವ ರೈತರಿಗೆ ರೈತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ. ಇದರಿಂದ ದೇಶದ ಪ್ರಜ್ಞಾವಂತ ನಾಗರಿಕರ ತಾಳ್ಮೆ ಪರೀಕ್ಷೆ ಮಾಡಿದಂತಾಗಿದೆ. ಬಿಜೆಪಿ ಸರ್ಕಾರಕ್ಕೆ ದೆಹಲಿ ರೈತರ ಹೋರಾಟದಿಂದ ಅವಮಾನವಾಗಿದೆ ಹಾಗಾಗಿ ಆ ಸೇಡು ತೀರಿಸಿಕೊಳ್ಳಲು ಆ ಹೋರಾಟದ ಮುಂಚೂಣಿ ನಾಯಕರಿಗೆ ಮಸಿ ಬಳಿದು ತಮ್ಮ ಕೀಳುಮಟ್ಟದ ರಾಜಕೀಯದ ಕುತಂತ್ರ ಬುದ್ಧಿ ಎದ್ದು ಕಾಣುತ್ತಿದೆ. ಬಿಜೆಪಿಯವರು ಕೀಳು ರಾಜಕೀಯ ಮಾಡಿ ಸರ್ಕಾರ ನಡೆಸುತ್ತಿರುವುದು ಇದೇ ಮೊದಲೇನಲ್ಲ. ಹಲವಾರು ಪ್ರಗತಿಪರ ಚಿಂತಕರಿಗೆ ಮಹಾತ್ಮರಿಗೆ ಗುಂಡಿಟ್ಟು ಕೊಲೆ ಮಾಡಿದ ಸಂಸ್ಕೃತಿ ದೇಶದ ಸಾಮಾನ್ಯ ಪ್ರಜೆಗೂ ತಿಳಿದಿದೆ. ಪಠ್ಯ ಪುಸ್ತಕಗಳಲ್ಲಿ ತಮಗೆ ಇಷ್ಟವಾದ ವ್ಯಕ್ತಿಗಳನ್ನು ಸೇರಿಸುವ ಮೂಲಕ ದೇಶಕ್ಕಾಗಿ ಸ್ವಾತಂತ್ರ್ಯಕ್ಕಾಗಿ ತಮ್ಮನ್ನೇ ತ್ಯಾಗ-ಬಲಿದಾನಗೈದ ಹೋರಾಟಕ್ಕೆ ಸ್ಫೂರ್ತಿಯಾದ ಮಹಾನ್‌ ನಾಯಕರ ಚರಿತ್ರೆಯನ್ನು ಅಳಿಸಿಹಾಕುವ ಕೃತ್ಯದಲ್ಲಿ ತೊಡಗಿದೆ ಎಂದರು ದೂರಿದರು.

ವಿವಿಧ ರೈತ, ಕಾರ್ಮಿಕ ಹಾಗೂ ಪ್ರಗತಿಪರ ಸಂಘಟನೆಗಳ ಪ್ರಮುಖದಾರ ಭೀಮಶಿ ಕಲಾದಗಿ, ಬಿ.ಭಗವಾನರೆಡ್ಡಿ, ಅಣ್ಣಾರಾಯ ಈಳಗೇರ, ಬಾಳು ಜೇವೂರ, ಸದಾನಂದ ಮೋದಿ, ಅಪ್ಪಾಸಾಹೇಬ ಯರನಾಳ, ಲಕ್ಷ್ಮಣ ಹಂದ್ರಾಳ, ಇರ್ಫಾನ್‌ ಶೇಖ್‌, ಸಿ.ಬಿ. ಪಾಟೀಲ, ಸಿದ್ದಲಿಂಗ ಬಾಗೇವಾಡಿ, ಭರತಕುಮಾರ, ದೀಪಾ ವಡ್ಡರ, ಮಾಹಾದೇವಿ ರಾಠೊಡ, ಶರಣಗೌಡ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

1-qwqeewqe

Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಎನ್‌ಇಪಿ ರದ್ದು, ರಾಜಕೀಯ ಪ್ರೇರಿತ: ಬೊಮ್ಮಾಯಿ

Bidar; ಎನ್‌ಇಪಿ ರದ್ದು ರಾಜಕೀಯ ಪ್ರೇರಿತ: ಬೊಮ್ಮಾಯಿ

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!

Bangla MP who came to Kolkata goes missing

ಕೋಲ್ಕತಾಗೆ ಬಂದ ಬಾಂಗ್ಲಾ ಸಂಸದ ನಾಪತ್ತೆ

Swati Maliwal case: Data destruction on Bibhav’s phone

Swati Maliwal case: ಬಿಭವ್‌ ಫೋನ್‌ನಲ್ಲಿ ದತ್ತಾಂಶ ನಾಶ

Former AAP leader Jagbir Singh joins BJP

New Delhi; ಆಪ್‌ ಮಾಜಿ ನಾಯಕ ಜಗ್ಬೀರ್‌ ಸಿಂಗ್‌ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.