ಬೆಳ್ತಂಗಡಿ : ಅಕ್ರಮವಾಗಿ ಶೇಖರಿಸಿಟ್ಟ ಪಡಿತರ ಚೀಟಿಯ 14 ಕ್ವಿಂಟಾಲ್ ಅಕ್ಕಿ ವಶ
Team Udayavani, Jun 1, 2022, 6:34 PM IST
ಬೆಳ್ತಂಗಡಿ : ಇಲ್ಲಿನ ಗೇರುಕಟ್ಟೆ ಸಮೀಪದ ದಿನಸಿ ಅಂಗಡಿಯಲ್ಲಿ ಅಕ್ರಮವಾಗಿ ಶೇಖರಿಸಿಟ್ಟ 14 ಕ್ವಿಂಟಾಲ್ ಗೂ ಅಧಿಕ ಅನ್ನಭಾಗ್ಯ ಪಡಿತರವನ್ನು ಜೂ.1 ರಂದು ಸಂಜೆ 5 ಗಂಟೆ ಸುಮಾರಿಗೆ ತಹಶೀಲ್ದಾರ್ ಸಮ್ಮುಖದಲ್ಲಿ ವಶಕ್ಕೆ ಪಡೆಯಲಾಗಿದೆ.
ಗೇರುಕಟ್ಟೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದ್ದು ವಾಹನದಲ್ಲಿ ಸಾಗಾಟಕ್ಕೆ ಮಾಡಲು ಯತ್ನಿಸುತ್ತಿದ್ದ ವೇಳೆ ವಶಕ್ಕೆ ಪಡೆಯಲಾಗಿದೆ.
ಜಪ್ತಿವೇಳೆ 14 ಕ್ವಿಂಟಾಲ್ ಗೂ ಅಧಿಕ ಪಡಿತರ ಕಂಡುಬಂದಿದೆ. ಈ ಕುರಿತು ತಹಶೀಲ್ದಾರ್ ಮಹೇಶ್ ಜೆ., ಆಹಾರ ನಿರೀಕ್ಷಕರಾದ ವಿಶ್ವ, ಕಂದಾಯ ನಿರೀಕ್ಷಕ ಪಾವಡಪ್ಪ ದೊಡ್ಡಮನಿ ಸ್ಥಳದಲ್ಲಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸ್ಥಳಕ್ಕೆ ಬೆಳ್ತಂಗಡಿ ಎಸ್.ಐ. ನಂದಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ಒಂದು ವಾರಗಳ ಹಿಂದೆ ಕಕ್ಕಿಂಜೆಯಿಂದ ಮೂಡಿಗೆರೆಗೆ ಸಾಗಿಸುತ್ತಿದ್ದ 33 ಕ್ವಿಂಟಾಲ್ ಅಕ್ರಮ ಪಡಿತರವನ್ನು ಟೆಂಪೋ ಸಹಿತ ಚಾರ್ಮಾಡಿ ಚೆಕ್ ಫೊಸ್ಟ್ ನಲ್ಲಿ ವಶಕ್ಕೆ ಪಡೆಯಲಾಗಿತ್ತು. ಇದೀಗ ಎರಡನೇ ಪ್ರಕರಣ ಬೆಳಕಿಗೆ ಬಂದಿದೆ.
ದ.ಕ.ಜಿಲ್ಲೆಯಲ್ಲಿ ಇಂತಹಾ ಪ್ರಕರಣ ಆಗಾಗ ಕಂಡು ಬರುತ್ತಿದ್ದು, ಪಡಿತರ ಅಕ್ಕಿಯನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವುದು ಕಂಡು ಬರುತ್ತಿದೆ.
ಇದನ್ನೂ ಓದಿ : ಶೈ ಹೋಪ್ ಅಜೇಯ ಶತಕ; ನೆದರ್ಲೆಂಡ್ಸ್ ವಿರುದ್ಧ ವೆಸ್ಟ್ ಇಂಡೀಸ್ 7 ವಿಕೆಟ್ಗಳ ಗೆಲುವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ