ಯುಪಿಸಿಎಲ್ಗೆ 52 ಕೋಟಿ ರೂ. ದಂಡ: ರಾ. ಹಸುರು ಪೀಠ ಆದೇಶ
Team Udayavani, Jun 2, 2022, 1:36 AM IST
ಪಡುಬಿದ್ರಿ: ನಂದಿಕೂರು ಜನಜಾಗೃತಿ ಸಮಿತಿಯು 2005ರಲ್ಲಿ ಹೂಡಿದ್ದ ದಾವೆಯ ವಿಚಾರದಲ್ಲಿ ಚೆನ್ನೈಯ ಹಸುರು ಪೀಠವು ಮೇ 31ರಂದು ಯುಪಿಸಿಎಲ್ಗೆ 52 ಕೋಟಿ ರೂ. ದಂಡ ವಿಧಿಸಿದೆ.
ಉಡುಪಿ ಜಿಲ್ಲೆಯ ಎಲ್ಲೂರು ಗ್ರಾಮದಲ್ಲಿರುವ ಕಲ್ಲಿದ್ದಲು ಆಧಾರಿತ ಉಡುಪಿ ಪವರ್ ಕಾರ್ಪೊರೇಶನ್ (ಯುಪಿಸಿಎಲ್) ಪರಿಸರ ನಿಯಮಗಳನ್ನು ಉಲ್ಲಂ ಸಿರುವುದು ಮತ್ತು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿರುವುದನ್ನು ಪರಿಗಣಿಸಿ 52 ಕೋಟಿ, 2 ಲಕ್ಷದ 50 ಸಾವಿರ ರೂ. ದಂಡ ಪಾವತಿಸುವಂತೆ ಆದೇಶಿಸಿದೆ.
ಈ ಮೊದಲೇ ಯುಪಿಸಿಎಲ್ ಠೇವಣಿಯಾಗಿರಿಸಿದ 5 ಕೋಟಿ ರೂ. ಗಳನ್ನು ದಂಡದ ಮೊತ್ತಕ್ಕಾಗಿ ವಿನಿಯೋಗಿಸಿಕೊಳ್ಳಲು ಹೇಳಿರುವ ಹಸುರು ಪೀಠವು ಎಲ್ಲ ಮೊತ್ತವನ್ನು ಮುಂದಿನ ಮೂರು ತಿಂಗಳುಗಳೊಗಾಗಿ ಕೇಂದ್ರಿಯ ಪರಿಸರ ನಿಯಂತ್ರಣಾ ಮಂಡಳಿಗೆ ಪಾವತಿಸುವಂತೆ ಸೂಚಿಸಿದೆ. ಈ ದಂಡವನ್ನು ಪರಿಸರ ಸುರಕ್ಷೆಗಾಗಿ ಮತ್ತೆ ಬಳಸಿಕೊಳ್ಳುವಂತೆಯೂ ಕೇಂದ್ರ ಪರಿಸರ ಹಾಗೂ ಅರಣ್ಯ ಸಚಿವಾಲಯಕ್ಕೆ ನಿರ್ದೇಶಿಸಿದೆ.
ಸಮಿತಿ ರಚನೆಗೆ ಸೂಚನೆ
ಯುಪಿಸಿಎಲ್ ಪರಿಸರದ 10 ಕಿ.ಮೀ. ಪ್ರದೇಶದಲ್ಲಿ ಪರಿಸರ, ಬೆಳೆ ಹಾನಿ, ಮಣ್ಣಿನ ಫಲವತ್ತತೆಯ ಪರೀಕ್ಷೆ, ಕಪ್ಪು ವರ್ಣಕ್ಕೆ ತಿರುಗಿರುವ ನೀರು ಹಾಗೂ ಗಾಳಿಯ ಗುಣಮಟ್ಟ ಪರಿಶೀಲನೆಗಳನ್ನು ಪ್ರತಿಯೋರ್ವ ರೈತ ಹಾಗೂ ಪರಿಸರದ ಮನೆ ಮಂದಿಯನ್ನೂ ಸೇರಿದಂತೆ ಭೇಟಿ ಮಾಡಿ ಯುಪಿಸಿಎಲ್ನಿಂದಾಗಿರುವ ನಷ್ಟವನ್ನು ಅಂದಾಜಿಸಲು ಸಮಿತಿಯೊಂದನ್ನು ರಚಿಸುವಂತೆಯೂ ಹಸಿರು ಪೀಠವು ಆದೇಶಿಸಿದೆ.
ಈ ಸಮಿತಿಯಲ್ಲಿ ಉಡುಪಿ ಜಿಲ್ಲಾಧಿ ಕಾರಿ ಅಥವಾ ಸಹಾಯಕ ಕಮಿಷನರ್ ಅಥವಾ ತಾಲೂಕು ದಂಡಾಧಿಕಾರಿಗಳ ಸಹಿತ ಯುಪಿಸಿಎಲ್ನ ಓರ್ವ ಪ್ರತಿನಿಧಿಯೂ ಹಾಜರಿರ ಬಹುದಾಗಿದೆ. ಉಳಿದಂತೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು, ಹಿರಿಯ ವಿಜ್ಞಾನಿಗಳು ಈ ವಿಶೇಷ ಸಮಿತಿಯಲ್ಲಿರುತ್ತಾರೆ. ಈ ಸಮಿತಿಯು ಅಂದಾಜಿಸುವ ನಷ್ಟದ ಮೊತ್ತವನ್ನು ಯುಪಿಸಿಎಲ್ ಮೂಲಕ ಆಯಾಯ ರೈತರಿಗೆ, ಸಂತ್ರಸ್ತರಿಗೆ ತಲಪುವಂತೆಯೂ ನೋಡಿ ಕೊಳ್ಳಬೇಕೆಂದು ಪೀಠವು ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Taiwan; ಸಂಸತ್ನಲ್ಲಿ ಸಂಸದರ ಭಾರೀ ಬಡಿದಾಟ!
Singapore; ಹೆಚ್ಚಿದ ಕೋವಿಡ್: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ
Gundmi Toll Plaza ಸ್ಥಳೀಯರಿಗೆ ಟೋಲ್ ಬರೆ; ಟೋಲ್ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ
Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ
D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’