ಬಿಜೆಪಿ ಮುಖಂಡ ಅನಂತರಾಜು ಗೆಳತಿಯಿಂದ ಆತ್ಮಹತ್ಯೆ ಹೈಡ್ರಾಮಾ
6 ವರ್ಷದಿಂದ ಲಿವಿಂಗ್ ರಿಲೇಷನ್: ಹನಿಟ್ರ್ಯಾಪ್ ಮಾಡಿಲ್ಲ
Team Udayavani, Jun 2, 2022, 10:12 AM IST
ಬೆಂಗಳೂರು: ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪ್ರಕರಣದಲ್ಲಿ ಈಗಾಗಲೇ ಬಂಧನಕ್ಕೊಳಗಾಗಿ ಜಾಮೀನು ಪಡೆದುಕೊಂಡು ಬಿಡುಗಡೆಯಾದ ಅನಂತರಾಜು ಸ್ನೇಹಿತೆ ರೇಖಾ ಬ್ಯಾಡರಹಳ್ಳಿ ಠಾಣೆ ಎದುರೇ ಆತ್ಮಹತ್ಯೆಗೆ ಯತ್ನಿಸಿ ಹೈಡ್ರಾಮಾ ಸೃಷ್ಟಿಸಿದ ಘಟನೆ ನಡೆದಿದೆ.
ಬುಧವಾರ ಪೊಲೀಸ್ ಠಾಣೆಗೆ ಹಾಜರಾದ ರೇಖಾ, ಅನಂತರಾಜು ಪತ್ನಿ ಸುಮಾ ವಿರುದ್ಧ ದೂರು ನೀಡಿದ್ದರು. ಈ ಹಿಂದೆಯೂ ಸುಮಾ ವಿರುದ್ಧ ಹೇಳಿಕೆ ನೀಡಿದ್ದೆ, ಆದರೆ, ಯಾಕೆ ವಿರುದ್ಧ ಯಾವುದೇ ಕಠಿಣ ಕ್ರಮಕೈಗೊಂಡಿಲ್ಲ. ನೆಪಮಾತ್ರಕ್ಕೆ ವಿಚಾರಣೆ ನಡೆಸಿ ಕಳುಹಿಸಲಾಗಿದೆ. ಹೀಗಾಗಿ ನನಗೆ ನ್ಯಾಯ ಸಿಗುತ್ತಿಲ್ಲ ಎಂದು ಆರೋಪಿಸಿ ಠಾಣೆ ಮುಂಭಾಗದ ರಸ್ತೆಯಲ್ಲಿ ಹೋಗುತ್ತಿದ್ದ ಬಿಎಂಟಿಸಿ ಬಸ್ಗೆ ಅಡ್ಡವಾಗಿ ನಿಂತು ಆತ್ಮಹತ್ಯೆಗೆ ಯತ್ನಿಸುವಂತೆ ಹೈಡ್ರಾಮಾ ಮಾಡಿದರು.
ಬಳಿಕ ಆಕೆಯ ಸಂಬಂಧಿ ರೇಖಾರನ್ನು ರಕ್ಷಣೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳದಂತೆ ಮನವೊಲಿಸಿದರು. ಈ ಹಿಂದೆ ರೇಖಾ ನೀಡಿದ ಆಡಿಯೋ, ಅನಂತರಾಜು ಡೆತ್ ನೋಟ್ ಹಾಗೂ ಇತರೆ ಸಾಕ್ಷ್ಯಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅಲ್ಲಿನ ವರದಿ ಬಂದ ನಂತರ ಪ್ರಕರಣದ ಸತ್ಯಾಸತ್ಯತೆ ತಿಳಿಯಲಿದೆ.
ಅನಂತರಾಜು ಪತ್ನಿ ಸುಮಾ ವಿಚಾರಣೆಯಲ್ಲಿ ಪತಿ ಬೇರೊಂದು ಮಹಿಳೆ ಜತೆ ಸಂಬಂಧ ಹೊಂದಿರುವುದು ಗೊತ್ತಾಗಿ, ರೇಖಾಗೆ ಎಚ್ಚರಿಕೆ ನೀಡಿದ್ದೆ ಎಂದು ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ:ಫೇಸ್ಬುಕ್ನ ಸುಂದರ ಸ್ತ್ರೀಯರಿಗೆ ಅಶ್ಲೀಲ ಫೋಟೋ, ವಿಡಿಯೋ ರವಾನೆ!
6 ವರ್ಷದಿಂದ ಲಿವಿಂಗ್ ರಿಲೇಷನ್
ಠಾಣೆ ಮುಂಭಾಗವೇ ಸುದ್ದಿಗಾರರ ಜತೆ ಮಾತನಾಡಿದ ರೇಖಾ, ಫೇಸ್ಬುಕ್ನಲ್ಲಿ ಅನಂತರಾಜು ಪರಿಚಯವಾಗಿದ್ದು, ಅವರ ಜತೆ ಆರು ವರ್ಷಗಳಿಂದ ಲಿವಿಂಗ್ ರಿಲೇಷನ್ಶಿಪ್ನಲ್ಲಿ ಇದ್ದೆ. ನಾನು ಹನಿಟ್ರ್ಯಾಪ್ ಮಾಡಿಲ್ಲ. ಹಣಕ್ಕೂ ಬೇಡಿಕೆ ಇಟ್ಟಿಲ್ಲ. ಆದರೆ, ಅನಂತರಾಜು ಪತ್ನಿ ಸುಮಾ ಜೀವ ಬೆದರಿಕೆ ಹಾಕುತ್ತಿದ್ದು, ಅದರಿಂದ ದೂರು ನೀಡಿದ್ದೇನೆ. ನನಗೆ ಮತ್ತು ನನ್ನ ಮಕ್ಕಳಿಗೆ ಜೀವ ಬೆದರಿಕೆ ಇದೆ. ಅನಂತರಾಜು ಸಾವು ತುಂಬ ನೋವು ತಂದಿದೆ. ಸುಮಾಳ ಕಿರುಕುಳದಿಂದಲೇ ಅನಂತರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಒಂದು ಬಾರಿ ಅನಂತರಾಜು ಆತ್ಮಹತ್ಯೆಗೆ ಯತ್ನಿಸಿದ್ದರು. ಆದರೆ, ಆತ್ಮಹತ್ಯೆಗೆ ಪ್ರಚೋದನೆ ನೀಡಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್ಗಳ ಜಯ
Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ
Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್