ವೈಚಾರಿಕ ಪ್ರಜ್ಞೆ ಮೂಡಿಸಿದ್ದ ಶರಣರು: ಡಾ| ಗುರುದೇವಿ

ಅಮಾವಾಸ್ಯೆ ಅನುಭಾವ ಗೋಷ್ಠಿ-ಅಂಧಶ್ರದ್ಧೆ-ಅಂಧಾನುಕರಣೆ ಅಲ್ಲಗಳೆದ ವಿಚಾರವಾದಿಗಳು

Team Udayavani, Jun 2, 2022, 5:12 PM IST

27

ಬೆಳಗಾವಿ: ಹನ್ನೆರಡನೇ ಶತಮಾನದ ಶರಣರು ಸಮಾಜದಲ್ಲಿ ಬೇರು ಬಿಟ್ಟಿದ್ದ ಮೂಢನಂಬಿಕೆ ತೊಡೆದುಹಾಕಿ ವೈಚಾರಿಕ ಪ್ರಜ್ಞೆ ಮೂಡಿಸಿದ್ದರು. ದುಡಿಮೆಯಲ್ಲಿಯೇ ಪರಮಾತ್ಮನನ್ನು ಕಂಡರು. ಅಂಧಾನುಕರಣೆ ಕಠೊರವಾಗಿ ಖಂಡಿಸಿದರು ಎಂದು ಹಿರಿಯ ಮಹಿಳಾ ಸಾಹಿತಿ ಡಾ| ಗುರುದೇವಿ ಹುಲೆಪ್ಪನವರಮಠ ಹೇಳಿದರು.

ನಗರದ ಲಿಂಗಾಯತ ಭವನದಲ್ಲಿ ಅಖೀಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಆಯೋಜಿಸಿದ್ದ ಅಮಾವಾಸ್ಯೆ ಅನುಭಾವ ಗೋಷ್ಠಿಯಲ್ಲಿ “ಶರಣರ ವಚನಗಳಲ್ಲಿ ಮೂಢನಂಬಿಕೆಯ ವಿರೋಧ’ ವಿಷಯ ಕುರಿತು ಮಾತನಾಡಿದರು.

ಪ್ರಖರ ವಿಚಾರವಾದಿಗಳಾದ ಶರಣರು ಮನುಕುಲದ ಮಾನ ಕಳೆವ, ಶೋಷಣೆ-ಹಿಂಸೆಗೆ ದಾರಿ ಮಾಡಿಕೊಡುವ ಅಂಧಶ್ರದ್ಧೆ ಮತ್ತು ಅಂಧಾನುಕರಣೆ ವಿರುದ್ಧ ಪ್ರತಿಭಟಿಸಿದರು. ಯಾವುದೇ ವ್ಯಕ್ತಿ, ಸ್ಥಳ, ಮತ್ತು ಸಮಯದ ಬಗೆಗೆ ಧನಾತ್ಮಕಭಾವ ತಳೆಯುವುದು ವಿಚಾರವಾದಿಗಳ ನಡೆ. ಅಂತಹ ನಡೆಯಲ್ಲಿ ವ್ಯಷ್ಟಿ ಮತ್ತು ಸಮಷ್ಟಿಯ ಉದ್ಧಾರ ಅಡಗಿದೆ ಎಂದರು.

ಸಂವಾದದಲ್ಲಿ ಪಾಲ್ಗೊಂಡಿದ್ದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಮಹಾವಿದ್ಯಾಲಯದ ಉಪನ್ಯಾಸಕ ಡಾ| ಸಾಹುಕಾರ ಕಾಂಬಳೆ ಮಾತನಾಡಿ, ಶರಣ ತತ್ವಗಳು ವೈಜ್ಞಾನಿಕ ಮತ್ತು ವೈಚಾರಿಕ ತಳಹದಿ ಮೇಲೆ ರೂಪುಗೊಂಡಿರುವಂತವು. ಮನುಕುಲದ ಸರ್ವಾಂಗೀಣ ಕಲ್ಯಾಣಕ್ಕಾಗಿ ಬಸವಣ್ಣನವರ ನೇತೃತ್ವದಲ್ಲಿ ಹೋರಾಡಿದ ಶರಣರು ಭಯ, ಬಡತನ ಮತ್ತು ಅಜ್ಞಾನ ಮೂಲವಾದ ಮೂಢನಂಬಿಕೆ ನಿರ್ಮೂಲನೆ ಮಾಡಲು ಶ್ರಮಿಸಿದ್ದು ಮಾನವ ಇತಿಹಾಸದಲ್ಲಿ ಅಪರೂಪದ ಘಟನೆ ಎಂದರು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಂಗಮೇಶ ತೆಲಸಂಗ್‌ ಮಾತನಾಡಿ, ಶರಣರು ಜಂಗಮ ತತ್ವ ಸಾಧಿಸಿ ಬೋಧಿಸಿದರು. ಜಂಗಮ ಎಂದರೆ ಚಲನಶೀಲ, ಕ್ರಿಯಾಶೀಲವಾದ ಸಮಾಜವಾಗಿದೆ. ಅದನ್ನು ತೃಪ್ತಿ ಪಡಿಸುವುದರಲ್ಲಿ ಜೀವನದ ಸಾರ್ಥಕತೆ ಅಡಗಿದೆ ಎಂದರು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ| ಹನುಮಂತಪ್ಪ ಸಂಜೀವನ್ನವರ ಮಾತನಾಡಿ, ಶರಣರು ಸದಾಚಾರ ಸಂಪನ್ನತೆಯಿಂದ ವಿಜೃಂಭಿಸುವ ಸಮಾಜ ನಿರ್ಮಿತಿಗೆ ಶ್ರಮಿಸಿದ ಮಹಾಮಾನವತಾವಾದಿಗಳು. ಬಹಿರಂಗದ ವ್ಯವಹಾರ ಸಾರಾಸಗಟಾಗಿ ಅಲ್ಲಗಳೆದು ಸಮಸ್ಯೆಗಳಿಗೆ ಪರಿಹಾರ ಸೂಚಿಸಿದ್ದರು. ಮೂಢನಂಬಿಕೆಗಳ ಅರ್ಥಹೀನತೆ, ಅಪಾಯ ಮನಗಂಡಿದ್ದ ಅವರು ಜನರು ಅಂತಹ ಅಂಧಾನುಕರಣೆ ಕೈಬಿಡುವಂತೆ ಕರೆ ನೀಡಿದ್ದರು ಎಂದರು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ವಿದ್ಯಾರ್ಥಿನಿ ಮಹೇಶ್ವರಿ ತೇಗೂರ ಮಾತನಾಡಿದರು. ಕಾರಂಜಿ ಮಠದ ಗುರುಸಿದ್ಧ ಸ್ವಾಮಿಗಳು ಆಶೀರ್ವಚನ ನೀಡಿ, ನಮ್ಮ ಜೀವನ ಬೆಳಗಿಸಿಕೊಳ್ಳಲು ಶರಣರು ಹಲವು ಮೌಲ್ಯಗಳೆಂಬ ದೀಪಗಳನ್ನು ವಚನಮುಖೇನ ದಯಪಾಲಿಸಿದ್ದಾರೆ. ಅವುಗಳಲ್ಲಿ ವೈಚಾರಿಕತೆಯೂ ಒಂದು. ಮಾಡುವ ಮಾಟದ ಸತ್ಯಾಸತ್ಯತೆ ಪರಿಶೀಲಿಸಿ ಮುನ್ನಡೆಯುವವನು ಎಡವಲಾರ. ಅಂಧಶ್ರದ್ಧೆಯಿಂದ ದೂರವಿರಲು ಶ್ರಮಿಸಿದವನು ಜೀವನದಲ್ಲಿ ಸುಖೀಯಾಗಿರುತ್ತಾನೆ ಎಂದರು.

ಅಖೀಲ ಭಾರತ ವೀರಶೈವ ಮಹಾಸಭೆ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷೆ ಶರಣೆ ರತ್ನಪ್ರಭಾ ಬೆಲ್ಲದ ಅಧ್ಯಕ್ಷತೆ ವಹಿಸಿದ್ದರು. ಶುಭಾ ಎಸ್‌. ತೆಲಸಂಗ ವಚನ ವಿಶ್ಲೇಷಣೆ ಮಾಡಿದರು. ಆಶಾ ಯಮಕನಮರಡಿ ಕಾರ್ಯಕ್ರಮ ನಿರ್ವಹಿಸಿದರು. ಈ ವೇಳೆ ಎಂ.ವೈ. ಮೆಣಸಿನಕಾಯಿ ವಂದಿಸಿದರು. ಚನ್ನಬಸಪ್ಪ ಚೊಣ್ಣದ ಇದ್ದರು.

ಟಾಪ್ ನ್ಯೂಸ್

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

1-raisi

Iran ತೀವ್ರಗಾಮಿ ಅಧ್ಯಕ್ಷ ಕಟ್ಟರ್‌ ಸಂಪ್ರದಾಯವಾದಿ ರೈಸಿ ಸಾವಿನ ಸುತ್ತ ನಾನಾ ಕತೆ

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.