ಪಂಜಾಬ್: 420ಕ್ಕೂ ಹೆಚ್ಚು ವಿವಿಐಪಿಗಳಿಗೆ ಮತ್ತೆ ಭದ್ರತೆ
Team Udayavani, Jun 3, 2022, 7:35 AM IST
ಚಂಡೀಗಢ: ಪಂಜಾಬ್ ಸರಕಾರ ಇತ್ತೀಚೆಗೆ ತಾನು ಹಿಂಪಡೆದಿದ್ದ 420ಕ್ಕೂ ಹೆಚ್ಚು ಅತೀ ಗಣ್ಯ ವ್ಯಕ್ತಿಗಳ ಭದ್ರತೆಯನ್ನು ಪುನರ್ ನಿಯೋಜಿಸಲಾಗುತ್ತದೆ ಎಂದು ತಿಳಿಸಿದೆ.
ಗುರುವಾರದಂದು, ಸಿಎಂ ಭಗವಂತ್ ಮನ್ ಅವರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ಗೆ ಈ ವಿಷಯ ತಿಳಿಸಿದ್ದಾರೆ. ಈ ಹಿಂದೆ ಸರಕಾರ ದಿಂದ ಭದ್ರತೆ ಪಡೆದಿದ್ದ ಎಲ್ಲ ಗಣ್ಯರಿಗೂ ಜೂ. 7ರಿಂದ ಪುನಃ ಅದೇ ರೀತಿಯ ಭದ್ರತೆಯನ್ನು ಕಲ್ಪಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಇದರಿಂದ, ಪಂಜಾಬ್ನಲ್ಲಿ ವಿಐಪಿ ಸಂಸ್ಕೃತಿಗೆ ಕಡಿವಾಣ ಹಾಕುವುದಾಗಿ ಹೊರಟಿದ್ದ ಆಡಳಿತಾರೂಢ ಆಮ್ ಆದ್ಮಿ ಪಾರ್ಟಿ (ಆಪ್) ತೀವ್ರ ಮುಜುಗರಕ್ಕೆ ಈಡಾಗಿದೆ.
ಇತ್ತೀಚೆಗೆ, 424 ವಿವಿಐಪಿಗಳ ಭದ್ರತೆ ಯನ್ನು ಸರಕಾರ ಹಿಂಪಡೆದ ಬೆನ್ನಲ್ಲೇ ಖ್ಯಾತ ಗಾಯಕ ಸಿಧು ಮೂಸೆವಾಲ ಅವರ ಹತ್ಯೆಯಾಗಿತ್ತು. ಆ ಹಿನ್ನೆಲೆಯಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್, ಭದ್ರತೆಯನ್ನು ಹಿಂಪಡೆದಿದ್ದಕ್ಕೆ ಕಾರಣ ನೀಡಬೇಕು ಹಾಗೂ ಭದ್ರತೆ ಹಿಂಪಡೆದವರ ಹೆಸರುಗಳನ್ನು ಪ್ರಕಟಿಸಿ ದ್ದೇಕೆ ಎಂದು ಪ್ರಶ್ನಿಸಿತ್ತು. ಇದರಿಂದ ಸರಕಾರ ಪೇಚಿಗೆ ಸಿಲುಕಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಾ ಲಯಕ್ಕೆ ವಿವರಣೆ ಕೊಟ್ಟಿರುವ ಸಿಎಂ, ವಿವಿಐಪಿಗಳಿಗೆ ಪುನಃ ಭದ್ರತೆಯನ್ನು ನೀಡುವುದಾಗಿ ತಿಳಿಸಿದೆ.
ಕೇಂದ್ರಕ್ಕೆ ಪತ್ರ: ಗಾಯಕ ಮೂಸೆವಾಲ ಕುಟುಂಬವು ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದು, ಮೂಸೆವಾಲ ಹತ್ಯೆ ತನಿಖೆಯನ್ನು ಕೇಂದ್ರೀಯ ತನಿಖಾ ಸಂಸ್ಥೆಗಳಿಂದ ನಡೆಸಬೇಕೆಂದು ಮನವಿ ಮಾಡಿದ್ದಾರೆ. ಈ ವಿಷಯವನ್ನು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ತಿಳಿಸಿದ್ದಾರೆ.
ಮಾನ್ – ಕೇಜ್ರಿವಾಲ್ ಭೇಟಿ: ಮೂಸೆವಾಲ ಹತ್ಯೆ ಪ್ರಕರಣದಿಂದಾಗಿ ವಿಪಕ್ಷಗಳಿಂದ ಭಾರೀ ಟೀಕೆಗೆ ಒಳಗಾಗಿರುವ ಪಂಜಾಬ್ ಮುಖ್ಯ ಮಂತ್ರಿ ಭಗವಂತ ಮಾನ್, ಗುರುವಾರ, ಹೊಸದಿಲ್ಲಿಯಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mass sick leave; ವಜಾಗೊಂಡ ಎಲ್ಲಾ ಏರ್ ಇಂಡಿಯಾ ಎಕ್ಸ್ಪ್ರೆಸ್ ಕ್ಯಾಬಿನ್ ಸಿಬಂದಿ ಮರುನೇಮಕ
Goa; ಚುನಾವಣೆ ಸಂದರ್ಭ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ
PoK ಭಾರತದ ಭಾಗ; ಮರಳುವಿಕೆ ಖಚಿತಪಡಿಸಿಕೊಳ್ಳಲು ಎಲ್ಲಾ ಪಕ್ಷಗಳು ಬದ್ಧವಾಗಿವೆ: ಜೈಶಂಕರ್
Sivakasi ಪಟಾಕಿ ಘಟಕದಲ್ಲಿ ಸ್ಪೋಟ; ಐವರು ಮಹಿಳೆಯರು ಸೇರಿ 8 ಮಂದಿ ಸಾವು
Pitroda’s remarks; ದೆಹಲಿ ಕಾಂಗ್ರೆಸ್ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ
Saudi Arabia; ಭೂಮಿ ನೀಡಲು ಒಪ್ಪದಿದ್ದರೆ ಹತ್ಯೆ: ಬಿಬಿಸಿ ವರದಿ
Hate speech ಪ್ರಚಾರ: ಮೋದಿ ವಿರುದ್ಧ ಕ್ರಮಕ್ಕೆ ಸುಪ್ರೀಂನಲ್ಲಿ ರಿಟ್ ಅರ್ಜಿ
Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್
BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ: ಹಿಮಂತ್ ಬಿಸ್ವಾ