ಪುತ್ತೂರು: ಮುಸ್ಲಿಂ ಮಹಿಳೆಯ ಮನೆಯಲ್ಲಿ ಹಿಂದೂ ಯುವಕ: ಘಟನೆ ಬಗ್ಗೆ ಪೊಲೀಸರ ಸ್ಪಷ್ಟನೆ
Team Udayavani, Jun 3, 2022, 1:01 PM IST
ಪುತ್ತೂರು: ಕಬಕದ ಕೊಡಿಪ್ಪಾಡಿಯಲ್ಲಿ ಮುಸ್ಲಿಂ ಮಹಿಳೆಯೋರ್ವರ ಮನೆಯಲ್ಲಿ ಹಿಂದೂ ಯುವಕನೊರ್ವನಿದ್ದಾನೆ ಎಂದು ಎರಡೂ ಕೋಮಿನ ಜನ ಸೇರಿದ್ದಾರೆ ಎಂಬ ಸುದ್ದಿ ಹಬ್ಬಿದ್ದು, ಆದರೆ ಪೊಲೀಸ್ ಇಲಾಖೆ ಇಂತಹ ಘಟನೆ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದೆ.
ಕಬಕ ಸಮೀಪದ ಮನೆಯೊಂದರ ಮುಂಬಾಗಿಲಿಗೆ ಬೀಗ ಹಾಕಲಾಗಿತ್ತು. ಮನೆಯೊಳಗೆ ಅಟೋ ಚಾಲಕ ಯುವಕನೋರ್ವ ಇದ್ದಾನೆ ಎಂಬ ಸುದ್ದಿ ಹಬ್ಬಿತ್ತು. ಮನೆಯ ಸುತ್ತ ನೂರಾರು ಮಂದಿ ಜಮಾಯಿಸುತ್ತಿದ್ದಂತೆಯೇ ನಗರ ಪೊಲೀಸರಿಗೆ ಮಾಹಿತಿ ತಿಳಿದು ಪರಿಶೀಲನೆ ನಡೆಸಿದ್ದಾರೆ ಎನ್ನುವ ಅಂಶ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ:ಲವ್ ಜಿಹಾದ್ ಪ್ರಕರಣ: ಹಿಂದೂಯೇತರರ ವಾಹನಕ್ಕೆ ನಿಷೇಧ ಹೇರಿ ಸೌತಡ್ಕದಲ್ಲಿ ಫ್ಲೆಕ್ಸ್ ಅಳವಡಿಕೆ
ಪೊಲೀಸರು ಮನೆಯ ಸುತ್ತ ಪರಿಶೀಲನೆ ನಡೆಸುವ ವೇಳೆ ಹಿಂಬಾಗಿಲಿನ ಬಾಗಿಲು ತೆರೆಯಲಾಗಿತ್ತು. ಜನ ಸೇರುವುದನ್ನು ಕಂಡ ಇವರಿಬ್ಬರು ಹಿಂಬಾಗಿಲಿನ ಮೂಲಕ ತಪ್ಪಿಸಿಕೊಂಡಿದ್ದು, ಯಾರಿಗೂ ಗೊತ್ತಾಗಿರಲಿಲ್ಲ ಎಂಬ ಬಗ್ಗೆಯು ಮಾಹಿತಿ ಹಬ್ಬಿತ್ತು. ಆದರೆ ನಗರ ಠಾಣೆಯನ್ನು ಸಂಪರ್ಕಿಸಿದಾಗ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಇಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ