ದೆಹಲಿಯಲ್ಲಿಯೂ ಕಾಶ್ಮೀರದಂತಹ ಪರಿಸ್ಥಿತಿ ನಿರ್ಮಾಣ : ಕಪಿಲ್ ಮಿಶ್ರಾ
ಗೋವಾದಲ್ಲಿ 10 ನೇ ಅಖಿಲ ಭಾರತ ಹಿಂದೂ ಸಮಾವೇಶ
Team Udayavani, Jun 3, 2022, 7:06 PM IST
ಪಣಜಿ: ಇಂದು ದೆಹಲಿಯಲ್ಲಿಯೂ ಕಾಶ್ಮೀರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ನಾಯಕ ಕಪಿಲ್ ಮಿಶ್ರಾ ಹೇಳಿದ್ದಾರೆ.
ಪಣಜಿಯಲ್ಲಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಹಾಂಗಿಪುರಿ ಗಲಭೆಯಲ್ಲಿಯೂ ಕೆಲವರು ಅಪರಾಧಿಗಳ ಪರ ನಿಂತಿರುವುದು ಕಂಡುಬಂದಿದೆ. ಉದ್ದೇಶಪೂರ್ವಕ ಕುತಂತ್ರದಿಂದ ಹಿಂದೂಗಳ ನಂಬಿಕೆಗೆ ಧಕ್ಕೆಯಾಗುತ್ತಿದೆ. ಮಹಾರಾಷ್ಟ್ರ, ರಾಜಸ್ಥಾನ, ಛತ್ತೀಸಗಡ ಸರ್ಕಾರಗಳಿಗೂ ಹಿಂದೂ ವರ್ಗದ ವಿರುದ್ಧ ಹಾಗೂ ಒಂದು ವರ್ಗದ ಕಡೆಯಿಂದ ಸೂಚನೆ ನೀಡಲಾಗುತ್ತಿದೆ. ಇಂದು ಹಿಂದೂ ಸಮಾಜ ಒಗ್ಗೂಡಿ ಈ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಹಿಂದೂ ಜನಜಾಗೃತಿ ಸಮಿತಿಯ ಪ್ರಮುಖ ಡಾ. ಚಾರುದತ್ತ ಪಿಂಗಳೆ ಮಾತನಾಡಿ 10 ನೇಯ ಅಖಿಲ ಭಾರತ ಹಿಂದೂ ಸಮಾವೇಶವು ಜೂನ್ 12 ರಿಂದ 18 ರವರೆಗೆ ಗೋವಾದಲ್ಲಿ ನಡೆಯಲಿದೆ. ಈ ಸಮಾವೇಶದ ನಂತರ “ಹಿಂದೂ ರಾಷ್ಟ್ರ ಸಂಸತ್” ಆಯೋಜಿಸಲಾಗಿದ್ದು ದೇಶ ವಿದೇಶಗಳಿಂದ ಒಂದು ಸಾವಿರ ಜನ ಹಿಂದುತ್ವವಾಧಿಗಳು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಹಿಂದೂ ದೇವಾಲಯಗಳ ಅಭಿವೃದ್ಧಿ ಮತ್ತು ಹಿಂದೂ ಪ್ರಜ್ಞೆಯ ಬೆಳವಣಿಗೆ ಕುರಿತು ಚರ್ಚೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಜ್ಞಾನವಾಪಿ ಪ್ರಕರಣದಲ್ಲಿ ಹಿಂದೂಗಳ ಪರ ವಾದ ಮಂಡಿಸುತ್ತಿರುವ ವಕೀಲ ವಿಷ್ಣುಶಂಕರ ಜೈನ್ ಮಾತನಾಡಿ, ಈ ಧರ್ಮಸಂಸತ್ನಲ್ಲಿ 1991 ರ ಪೂಜಾಸ್ಥಾನ ಕಾಯ್ದೆಯನ್ನು ಪರಿಗಣಿಸಲಾಗುವುದು. ಇಡೀ ಸಂವಿಧಾನದಲ್ಲಿ ಅತ್ಯಂತ ತಪ್ಪಾಗಿರುವ ಕಾನೂನು ಒಂದಿದ್ದರೆ ಅದು 1991 ರ ಆರಾಧನಾ ಖಾಯ್ದೆಯಾಗಿದೆ. ಏಕೆಂದರೆ ನಾಗರೀಕರು ನ್ಯಾಯಾಲಯಕ್ಕೆ ಹೋಗುವುದನ್ನು ಕಾನೂನು ತಡೆಯುತ್ತದೆ. ಈ ನಿಬಂಧನೆ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಇದು ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ಕಾನೂನು ಹಕ್ಕುಗಳನ್ನು ನೀಡುವ ಅಂಬೇಡ್ಕರ್ ರವರ ಸಿದ್ಧಾಂತಕ್ಕೆ ವಿರುದ್ಧವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ
Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ
Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ
MUST WATCH
ಹೊಸ ಸೇರ್ಪಡೆ
Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು
Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ
Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ
Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ