ಚಿತ್ತಾಪುರ ಸರ್ಕಾರಿ ಶಾಲೆಯ ದುಸ್ಥಿತಿ ಕೇಳುವವರಿಲ್ಲ; ಪ್ರಾಣ ಭೀತಿಯಲ್ಲಿ ಬಡ ಮಕ್ಕಳು
Team Udayavani, Jun 3, 2022, 9:20 PM IST
ಚಿತ್ತಾಪುರ : ತಾಲೂಕಿನ ಹಳಕರ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿ ಕೇಳುವವರಿಲ್ಲ ಎನ್ನುವ ಸ್ಥಿತಿ ನಿರ್ಮಾಣವಾಗಿದೆ.
ಗೋಡೆ ಬಿರುಕು ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡಲಾಗುತ್ತಿದ್ದು, ಹನ್ನೆರಡು ತರಗತಿ ಕೋಣೆಗಳ ಗೋಡೆ ಶಿಥಿಲಗೊಂಡಿದೆ. ಕಟ್ಟಡದ ಮೇಲ್ಛಾವಣಿಯ ಕಾಂಕ್ರಿಟ್ ಕಳಚಿ ಬೀಳುತ್ತಿದೆ. ಕಬ್ಬಿಣದ ರಾಡುಗಳು ತುಕ್ಕು ಹಿಡಿದು ಅಪಾಯ ಮೂಡಿಸಿವೆ.
ಹಳೆಯ ಶಾಲಾ ಕಟ್ಟಡ ಮಕ್ಕಳ ಜೀವ ನುಂಗಲು ಹವಣಿಸುತ್ತಿದೆ ಎನ್ನುವ ಸ್ಥಿತಿ ನಿರ್ಮಾಣವಾಗಿದ್ದು, ಬಿಸಿಯೂಟದ ವಾಸನೆ ಹಿಡಿದು ಶಾಲೆಗೆ ಹಂದಿಗಳ ಹಿಂಡು ಶಾಲೆಗೆ ಬರುತ್ತಿವೆ. ಕಿಟಕಿ, ಬಾಗಿಲು, ಮೇಜು, ತಿಜೋರಿ ಪೀಠೋಪಕರಣಗಳು ಓಬೇರಾಯನ ಕಾಲದ ಕಥೆ ಹೇಳುತ್ತಿವೆ.
ಮಕ್ಕಳ ಪಾಠ ಪ್ರವಚನಗಳು ಭಯದಲ್ಲೇ ನಡೆಯುತ್ತಿವೆ. ನೂರಾರು ಬಡ ಮಕ್ಕಳು ಪ್ರಾಣ ಭೀತಿಯಲ್ಲಿ ಶಾಲೆಗೆ ಕಾಲಿಡುತ್ತಿದ್ದಾರೆ.
ಹಲವು ಬಾರಿ ಈ ಕುರಿತು ಗಮನಕ್ಕೆ ತಂದರೂ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿಲ್ಲ. ಈ ಕಟ್ಟಡ ನೆಲಸಮ ಮಾಡಿ ಹೊಸ ಶಾಲೆ ನಿರ್ಮಾಣಕ್ಕೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ