ಡಿಸಿ ಪ್ರೇರಣೆಯಿಂದ ಪರಿಸರ ಪ್ರೇಮಿಯಾದ ವಿದ್ಯಾರ್ಥಿನಿ
6ನೇ ತರಗತಿ ವಿದ್ಯಾರ್ಥಿನಿ ಸಿಂಧೂ ಕಾರ್ಯಕ್ಕೆ ಮೆಚ್ಚುಗೆ
Team Udayavani, Jun 5, 2022, 12:53 PM IST
ಗಂಗಾವತಿ: ಶಾಲಾ ಕಾರ್ಯಕ್ರಮವೊಂದರಲ್ಲಿ ಅಂದಿನ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ ಮಾತಿನಿಂದ ಪ್ರಭಾವಿತಳಾಗಿ ತಂದೆ ಸಹಕಾರದಿಂದ ಆನೆಗೊಂದಿ, ಅಂಜನಾದ್ರಿಯಲ್ಲಿ ವಿಶೇಷ ಸಂದರ್ಭದಲ್ಲಿ ಸಸಿಗಳನ್ನು ನೆಟ್ಟು ಬೆಳೆಸುತ್ತಿರುವ ಚಿಕ್ಕರಾಂಪುರ ಗ್ರಾಮದ ವಿದ್ಯಾರ್ಥಿ ಸಿಂಧೂ ದೇವೇಂದ್ರ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾಳೆ.
ಗಂಗಾವತಿಯ ಕೇಂದ್ರೀಯ ವಿದ್ಯಾಲಯದಲ್ಲಿ 6ನೇ ತರಗತಿ ಓದುತ್ತಿರುವ ಸಿಂಧೂ ಶಾಲೆ ಕಾರ್ಯಕ್ರಮದಲ್ಲಿ ಅಂದಿನ ಜಿಲ್ಲಾಧಿಕಾರಿಯಾಗಿದ್ದ ಪಿ. ಸುನೀಲ್ ಕುಮಾರ, ಪ್ರತಿಯೊಬ್ಬರೂ ಸಸಿಗಳನ್ನು ನೆಡಬೇಕು. ಅದೇ ತರಹ ನೀರನ್ನು ಸದಾ ಉಳಿಸುವ ಕಾರ್ಯ ಮಾಡುವಂತೆ ಕರೆ ನೀಡಿದ್ದರು.
ಇದನ್ನು ಅಕ್ಷರ ಸಹ ಪಾಲಿಸುತ್ತಿರುವ ಸಿಂಧೂ ಆನೆಗೊಂದಿ ಸುತ್ತಲಿನ ಗ್ರಾಮಗಳಲ್ಲಿ ಮತ್ತು ಕಿಷ್ಕಿಂದಾ ಪಾರ್ಕಿಂಗ್ ಜಾಗದ ಸುತ್ತ ಸಸಿಗಳನ್ನು ನೆಟ್ಟು ಬೆಳೆಸುವ ಕಾರ್ಯ ನಿರಂತರವಾಗಿ ಮಾಡುತ್ತಿದ್ದಾಳೆ. ವಿಶೇಷವಾಗಿ ಆನೆಗೊಂದಿ ಉತ್ಸವ ಮೈದಾನದ ಸುತ್ತ, ಆನೆಗೊಂದಿ, ಚಿಕ್ಕರಾಂಪುರ, ಹರ್ಲಾಪುರ ಗ್ರಾಮಗಳ ಸ್ಮಶಾನದಲ್ಲಿ ಸಸಿಗಳನ್ನು ಖರೀದಿಸಿ ನೆಟ್ಟಿದ್ದಾಳೆ.
ಸಿಂಧೂ ಅವರ ತಂದೆ ದೇವೇಂದ್ರ ನಿತ್ಯವೂ ಮಗಳ ಕಾರ್ಯದಲ್ಲಿ ಪಾಲ್ಗೊಂಡು ಬಹುತೇಕ ಸಸಿಗಳಿಗೆ ನೀರುಣಿಸುವ ಕಾಯಕ ಮಾಡುತ್ತಿದ್ದಾರೆ. ಇಡೀ ಕುಟುಂಬದವರು ಕಿಷ್ಕಿಂದಾ ಫೌಂಡೇಶನ್ ಎನ್ನುವ ಸಂಸ್ಥೆ ಮೂಲಕ ಪರಿಸರ ಸಂರಕ್ಷಣೆ ಜನಜಾಗೃತಿ ಕಾರ್ಯ ಮಾಡುತ್ತಿದ್ದಾರೆ. ಅನೇಕ ಸಂಘ ಸಂಸ್ಥೆಗಳು ಚಿಕ್ಕಂದಿನಲ್ಲೇ ಪರಿಸರದ ಕಾಳಜಿ ಹೊಂದಿರುವ ಸಿಂಧೂಗಳನ್ನು ಅನೇಕ ಸಂಘ ಸಂಸ್ಥೆಗಳು ಗೌರವಿಸಿ ಸನ್ಮಾನಿಸಿವೆ.
ಪರಿಸರವಿದ್ದರೆ ನಾವೆಲ್ಲ ಬದುಕಲು ಸಾಧ್ಯ: ಅರಣ್ಯ, ಪ್ರಾಣಿ, ಪಕ್ಷಿಗಳಿದ್ದರೆ ಮಾತ್ರ ಮನುಷ್ಯರು ಬದುಕಲು ಸಾಧ್ಯ. ನಮ್ಮ ಶಾಲೆಗೆ ಆಗಮಿಸಿದ್ದ ಡಿಸಿ ಪಿ. ಸುನೀಲ್ ಕುಮಾರ ಅವರು ಪ್ರತಿ ಮಗು ಸಸಿ ನೆಟ್ಟು ಬೆಳೆಸಬೇಕು. ಗಿಡಗಳನ್ನು ಫ್ರೆಂಡ್ ಮಾಡಿಕೊಂಡು ನೀರು ಹಾಕಿ ಕಾಪಾಡುವಂತೆ ತಿಳಿಸಿದ್ದಾರೆ. ನಾನು ಹಾಗೂ ನನ್ನ ಗೆಳೆಯರು ಸಸಿ ನೆಟ್ಟು ಬೆಳೆಸುತ್ತಿದ್ದೇವೆ. ಪ್ರತಿಯೊಬ್ಬರೂ ಸಸಿ ನೆಟ್ಟು ಗಿಡವಾಗಿಸಿ ತಮ್ಮ ಮಕ್ಕಳಂತೆ ಪ್ರೀತಿ ಮಾಡಿ ಪರಿಸರ ಸಂರಕ್ಷಣೆ ಮಾಡುವಂತೆ ಸಿಂಧೂ ಉದಯವಾಣಿ ಜತೆ ಮಾತನಾಡುತ್ತ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಕೆ. ನಿಂಗಜ್ಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ
Kushtagi: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು
ಸ್ತ್ರೀ ಶಕ್ತಿ ಗುಂಪಿನ ಸದಸ್ಯೆಯರಿಗೆ ಬ್ಯಾಂಕ್ ಸಿಬ್ಬಂದಿಗಳಿಂದ ಕಿರುಕುಳ, ಪ್ರತಿಭಟನೆ
ಕುಕನೂರು: ಸೌಕರ್ಯವಿಲ್ಲದೇ ಹಮಾಲರ ಕಾಲೋನಿ ಅನಾಥ!
3ನೇ ಸೆಮಿಸ್ಟರ್ ಸಮಾಜಶಾಸ್ತ್ರ ಪರೀಕ್ಷೆಗೆ 1ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ವಿತರಣೆ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್