ಪೊಲೀಸ್‌ ವಸತಿ ಗೃಹದಲ್ಲೇ ಹಣ್ಣಿನ ತೋಟ ನಿರ್ಮಿಸಿದ ಡಿವೈಎಸ್ಪಿ


Team Udayavani, Jun 5, 2022, 4:25 PM IST

14

ಬೈಲಹೊಂಗಲ: ಬಂದೋಬಸ್ತ್, ರೌಂಡ್ಸ್‌, ಸ್ಟೇಷನ್‌ ಡ್ನೂಟಿ, ವಿಐಪಿ ಭದ್ರತೆ ಹೀಗೆ ವರ್ಷವಿಡೀ ಪೊಲೀಸ್‌ ಸಿಬ್ಬಂದಿಗೆ ಒತ್ತಡದ ಕೆಲಸ ಸಹಜ. ಇಷ್ಟೆಲ್ಲ ಒತ್ತಡದ ಕೆಲಸದ ನಡುವೆ ಅಧಿಕಾರಿಯೊಬ್ಬರು ಸಮಯ ಮಾಡಿಕೊಂಡು ಪೊಲೀಸ್‌ ವಸತಿ ಗೃಹದಲ್ಲಿ ಹಣ್ಣಿನ ತೋಟ ಮಾಡಿದ್ದಾರೆ.

ಹೌದು, ಪಟ್ಟಣದ ಹೊಸೂರ ರಸ್ತೆಯಲ್ಲಿರುವ ಗ್ರಾಮೀಣ ಪೊಲೀಸ್‌ ಠಾಣೆ ಪಕ್ಕದ ವಸತಿ ಗೃಹದಲ್ಲಿ ಡಿವೈಎಸ್ಪಿ ಶಿವಾನಂದ ಕಟಗಿ ಅವರೇ ಈ ಪರಿಸರ ಕಾಳಜಿ ತೋರಿದ ಅಧಿಕಾರಿ.

ಅಲ್ಲಿ ವಿವಿಧ ಹಣ್ಣಿನ ಸಸಿ ನೆಟ್ಟು ಗಿಡವಾಗಿಸಿದ್ದಾರೆ. ಹಲವಾರು ಹಣ್ಣಿನ ಗಿಡ ಬೆಳೆಯುವ ಪ್ರಯೋಗ ಮಾಡಿ ಯಶಸ್ವಿಯಾಗಿದ್ದಾರೆ. ಅಧಿಕಾರಿಯ ಈ ಉತ್ಸಾಹಕ್ಕೆ ಸಿಬ್ಬಂದಿ ಕೈ ಜೋಡಿಸಿದ್ದಾರೆ. ಪಾಳು ಬಿದ್ದಿದ್ದ ಜಾಗದಲ್ಲಿ ಹಣ್ಣಿನ ತೋಟ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಯಾವುದೇ ರಾಸಾಯನಿಕ ವಸ್ತು ಬಳಸದೇ ಹಣ್ಣಿನ ಗಿಡ ಬೆಳೆಸಲಾಗುತ್ತಿದೆ.

ಪಾಳು ಬಿದ್ದಿದ್ದ ಜಾಗದಲ್ಲಿ ಜೆಸಿಬಿ ಮೂಲಕ ಭೂಮಿ ಹದಗೊಳಿಸಿ ಹಣ್ಣಿನ ತೋಟದ ಕೆಲಸ ಆರಂಭಿಸಿದ್ದಾರೆ. ಕಲ್ಲು, ಮಣ್ಣು, ಗೊಬ್ಬರ ಹಾಕಿ ಜಮೀನಿನ ರೂಪ ನೀಡಿದ್ದಾರೆ. ಬಿಡುವಿನ ಸಮಯದಲ್ಲಿ ಪೊಲೀಸ್‌ ಸಿಬ್ಬಂದಿ, ಕುಟುಂಬಸ್ಥರು ತೋಟದ ಕೆಲಸದಲ್ಲಿ ಎಲ್ಲರೂ ತೊಡಗಿಸಿಕೊಂಡಿದ್ದಾರೆ.

15ಕ್ಕೂ ಹೆಚ್ಚು ಹಣ್ಣಿನ ಗಿಡಗಳ ಬೆಳವಣಿಗೆ: ಕಳೆದೊಂದು ವರ್ಷದಿಂದ ಹಣ್ಣಿನ ತೋಟ ಮಾಡಿ 30 ಗುಂಟೆ ಜಾಗದಲ್ಲಿ ಮಾವು, ಸೇಬು, ಪಪ್ಪಾಯಿ, ಹಲಸು, ಪೇರಲ, ಚಿಕ್ಕು, ದಾಳಿಂಬೆ, ಲಿಂಬೆ, ಗುಡ್ಡನ್ನೆಲ್ಲಿ, ಟೆಂಗು, ಸೀತಾಫಲ, ನೇರಳೆ, ಗೋಡಂಬೆ, ವಾಟರ್‌ ಆ್ಯಪಲ್‌ ಸೇರಿದಂತೆ ಇನ್ನೂ ಹಲವಾರು ಹಣ್ಣಿನ ಸಸಿ ನೆಟ್ಟು ಗಿಡವಾಗಿಸಿ ಉತ್ತಮ ಫಲ ಬೆಳೆಯಲಾಗುತ್ತಿದೆ. ಬೆಳೆದ ಹಣ್ಣುಗಳನ್ನು ತಾವು ಸವಿದು, ಸಿಬ್ಬಂದಿ, ಕುಟುಂಬಕ್ಕೂ ನೀಡುತ್ತಿದ್ದಾರೆ.

ಖಾಲಿ ಜಾಗೆಯಲ್ಲಿ ಫಸಲು: ಪೊಲೀಸ್‌ ವಸತಿ ಗೃಹ ಸುತ್ತಮುತ್ತ ಸಾಕಷ್ಟು ಜಾಗೆ ಇದೆ. ಆ ಜಾಗದಲ್ಲಿ ಹೂವು, ಹಣ್ಣು, ತರಕಾರಿ ಬೆಳೆದು ಸದ್ಬಳಕೆ ಮಾಡಿಕೊಳ್ಳಬೇಕೆನ್ನುವ ದೃಷ್ಟಿಯಿಂದ ಹಣ್ಣಿನ ತೋಟ ನಿರ್ಮಾಣಕ್ಕೆ ಕೈ ಹಾಕಿ ತಾಜಾ ಹಣ್ಣುಗಳನ್ನು ಬೆಳೆಯಲಾಗುತ್ತಿದೆ. ಸಿಬ್ಬಂದಿ ಇದನ್ನು ಹೀಗೆ ಮುಂದುವರಿಸಿಕೊಂಡು ಹೋಗಬೇಕು ಎಂದು ಡಿವೈಎಸ್ಪಿ ಶಿವಾನಂದ ಕಟಗಿ ತಿಳಿಸುತ್ತಾರೆ.

ಪೊಲೀಸ್‌ ಎಂದರೆ ಭಯ ಅಲ್ಲ, ಗೌರವ ಮನೋಭಾವ ಎಲ್ಲರಲ್ಲಿ ಮೂಡಬೇಕು. ಕರ್ತವ್ಯದೊಂದಿಗೆ ಆರೋಗ್ಯದ ಕಡೆ ಹೆಚ್ಚು ಕಾಳಜಿ ವಹಿಸಬೇಕು.  ಶಿವಾನಂದ ಕಟಗಿ, ಡಿವೈಎಸ್ಪಿ, ಬೈಲಹೊಂಗಲ

„ಸಿ.ವೈ. ಮೆಣಶಿನಕಾಯಿ

ಟಾಪ್ ನ್ಯೂಸ್

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.