ಸರಕಾರಿ ಶಾಲೆಗಳಿಗೆ ಮನಸೋತ ಮಕ್ಕಳು

ಕಲಿಕಾ ಗುಣಮಟ್ಟ ಅರಿತು ಮಕ್ಕಳ ದಾಖಲಾತಿ

Team Udayavani, Jun 5, 2022, 5:30 PM IST

17

ಜಮಖಂಡಿ: ರಬಕವಿ-ಬನಹಟ್ಟಿ ಮತ್ತು ಜಮಖಂಡಿ ಅವಳಿ ತಾಲೂಕಿನಲ್ಲಿ ಶೇ. 68 ವಿದ್ಯಾರ್ಥಿಗಳು ಸರಕಾರಿ ಶಾಲೆಗಳಿಗೆ ಪ್ರವೇಶ ಪಡೆಯುವ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಹೆಚ್ಚಿನ ಪೈಪೋಟಿ ನೀಡುತ್ತಿದೆ.

ಅಂದಾಜು 69501ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅವಳಿ ತಾಲೂಕಿನ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಪ್ರವೇಶ ಪಡೆಯಲು ಸಿದ್ಧತೆ ನಡೆಸುತ್ತಿದ್ದಾರೆ.

ಅವಳಿ ತಾಲೂಕಿನಲ್ಲಿ ಸರಕಾರಿ ಶಾಲೆಗಳ ಕಟ್ಟಡ ಮತ್ತು ಮೂಲಭೂತ ಸೌಲಭ್ಯ ಕೊರತೆ ಇದ್ದರೂ ಶಿಕ್ಷಣ ಕಲಿಕಾ ಗುಣಮಟ್ಟ ಉತ್ತಮವಾಗಿರುವುದನ್ನು ಗಮನಿಸಿರುವ ವಿದ್ಯಾರ್ಥಿಗಳ ಪಾಲಕರು-ಪೋಷಕರು ಖಾಸಗಿ ಶಾಲೆಗಳತ್ತ ಮುಖ ಮಾಡದೇ ಸರಕಾರಿ ಶಾಲೆಗಳಲ್ಲಿ ಪ್ರವೇಶ ಪಡೆಯುತ್ತಿದ್ದಾರೆ. ಇಲ್ಲಿ ಗುಣಮಟ್ಟದ ಶಿಕ್ಷಣ ಜತೆಗೆ ಮಕ್ಕಳಿಗೆ ಸರಕಾರ ಎಲ್ಲ ಸೌಲಭ್ಯಗಳು ಲಭಿಸುತ್ತಿರುವ ಹಿನ್ನೆಲೆಯಲ್ಲಿ ಸಹಜವಾಗಿ ಸರಕಾರಿ ಶಾಲೆಗಳಲ್ಲಿ ಮಕ್ಕಳ ಪ್ರವೇಶ ಹೆಚ್ಚಾಗುತ್ತಿದೆ. ಕಳೆದ ವರ್ಷಕ್ಕಿಂತ ಪ್ರಸಕ್ತ ವರ್ಷ ಶೇ. 5ರಿಂದ 8 ಮಕ್ಕಳ ದಾಖಲಾತಿ ಹೆಚ್ಚಾಗುವ ಸಾಧ್ಯತೆ ಇದೆ.

ಅವಳಿ ತಾಲೂಕಿನಲ್ಲಿ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಸೇರಿದಂತೆ ಅಂದಾಜು 575 ಪ್ರಾಥಮಿಕ- ಪ್ರೌಢಶಾಲೆಗಳಲ್ಲಿ ಅಂದಾಜು 104986 ವಿದ್ಯಾರ್ಥಿಗಳು ಪ್ರವೇಶ ಪಡೆಯುವ ಸಾಧ್ಯತೆಯಿದೆ. ಜೂನ್‌ ಅಂತ್ಯದವರೆಗೆ ವಿದ್ಯಾರ್ಥಿಗಳ ದಾಖಲಾತಿ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಸರಕಾರಿ ಶಾಲೆಗಳಲ್ಲಿ 1746 ಶಿಕ್ಷಕರಲ್ಲಿ 1229 ಶಿಕ್ಷಕರು ಸೇವೆಯಲಿದ್ದು, 250ಕ್ಕೂ ಹೆಚ್ಚು ಅತಿಥಿ ಶಿಕ್ಷಕರಿಂದ ಪಠ್ಯಬೋಧನೆ ನಡೆಯಲಿದೆ. ಪ್ರೌಢಶಾಲೆಯಲ್ಲಿ 521 ಶಿಕ್ಷಕರಲ್ಲಿ 410 ಶಿಕ್ಷಕರು ಸೇವೆಯಲ್ಲಿದ್ದು, 60ಕ್ಕೂ ಹೆಚ್ಚು ಅತಿಥಿ ಶಿಕ್ಷಕರ ನೇಮಕ ನಡೆಯಲಿದೆ.

ಅವಳಿ ತಾಲೂಕಿನಲ್ಲಿ 278 ಸರಕಾರಿ ಪ್ರಾಥಮಿಕ, 46 ಪ್ರೌಢಶಾಲೆಗಳಿದ್ದು ಪ್ರಾಥಮಿಕ ವಿಭಾಗದಲ್ಲಿ 40336 ಮತ್ತು ಪ್ರೌಢವಿಭಾಗದಲ್ಲಿ 15650 ವಿದ್ಯಾರ್ಥಿಗಳು ಪ್ರವೇಶ ಪಡೆಯಲಿದ್ದಾರೆ. ಅವಳಿ ತಾಲೂಕಿನ 29 ಅನುದಾನಿತ ಪ್ರಾಥಮಿಕ ಮತ್ತು 22 ಪ್ರೌಢಶಾಲೆಗಳಿದ್ದು, ಪ್ರಾಥಮಿಕ ಶಾಲೆಯಲ್ಲಿ 6280 ಮತ್ತು ಪ್ರೌಢಶಾಲಾ ವಿಭಾಗದಲ್ಲಿ 7235 ವಿದ್ಯಾರ್ಥಿಗಳು ಪ್ರವೇಶ ಪಡೆಯಲಿದ್ದಾರೆ. ಅವಳಿ ತಾಲೂಕಿನಲ್ಲಿ ಪ್ರತಿಷ್ಠಿತ ಖಾಸಗಿ 158 ಪ್ರಾಥಮಿಕ ಮತ್ತು 42 ಪ್ರೌಢಶಾಲೆಗಳಿದ್ದು, ಖಾಸಗಿ ಶಿಕ್ಷಣ ಸಂಸ್ಥೆಯ ಪ್ರಾಥಮಿಕ ಶಾಲೆಯಲ್ಲಿ 27945, ಪ್ರೌಢಶಾಲೆಯಲ್ಲಿ 7540 ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಸಿದ್ಧತೆ ನಡೆಸಿದ್ದಾರೆ.

ಅವಳಿ ತಾಲೂಕಿನ ಬರುವ 375 ಸರಕಾರಿ ಶಾಲೆಗಳಲ್ಲಿ 40 ಶಾಲೆಗಳಲ್ಲಿ ಅಲ್ಪ ಪ್ರಮಾಣ ದುರಸ್ತಿ ಕೆಲಸವಿದ್ದು, 2 ಶಾಲೆಗಳು ಕಲಿಕೆಗೆ ಅಸಾಧ್ಯವಾದ ಪರಿಸ್ಥಿತಿಯಲ್ಲಿವೆ. ಜಮಖಂಡಿ ತಾಲೂಕಿನ ಲಿಂಗನೂರ ಎಲ್‌.ಟಿ. ಶಾಲೆಯ ಮೇಲ್ಛಾವಣಿ ಶಿಥಿಲಾವಸ್ಥೆಯಲ್ಲಿದ್ದು, ಮುಂಜಾಗ್ರತೆ ಕ್ರಮವಾಗಿ ಕಲಿಕೆ ಸ್ಥಗಿತಗೊಂಡಿದೆ.

ತಾಲೂಕಿನ ಬಿದರಿ ಗ್ರಾಮದಲ್ಲಿ 15 ದಿನದ ಹಿಂದೆ ಧಾರಾಕಾರ ಮಳೆ ಬಿರುಗಾಳಿಗೆ ಸರಕಾರಿ ಪ್ರಾಥಮಿಕ ಶಾಲೆ ಮೇಲ್ಛಾವಣಿ ಕಿತ್ತಿರುವ ಹಿನ್ನೆಲೆಯಲ್ಲಿ ಎರಡು ಶಾಲೆಗಳಲ್ಲಿ ಕಲಿಕಾ ತೊಂದರೆಯಿದೆ. ಉಳಿದ 373 ಶಾಲೆಗಳು ಉತ್ತಮ ಸ್ಥಿತಿಯಲ್ಲಿದ್ದು ಕಲಿಕಾ ಚಟುವಟಿಕೆಗಳು ಆರಂಭಗೊಂಡಿವೆ. ಸರಕಾರಿ ಶಾಲೆಗಳಲ್ಲಿ ಅಧ್ಯಯನ ಮಾಡಬೇಕೆಂಬ ಆಸೆ ಕೂಡ ವಿದ್ಯಾರ್ಥಿಗಳಲ್ಲಿ ಮೂಡಿರುವ ಹಿನ್ನೆಲೆಯಲ್ಲಿ ಕಳೆದ ವರ್ಷದ ಕೊರೊನಾ ನೋವು ಮರೆಯಲು ಯತ್ನಿಸುತ್ತಿದ್ದಾರೆ.

ನಗರದ ಸರಕಾರಿ ಪಿ.ಬಿ.ಹೈಸ್ಕೂಲ್‌ದಲ್ಲಿ 9ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿದ್ದು, ಶಾಲಾ ಶಿಕ್ಷಕರು ನಮಗೆ ತಿಳಿಸುವ ಹಾಗೆ ಪಠ್ಯ ಬೋಧನೆ ಮಾಡುತ್ತಾರೆ. ನಾವು ಅಧ್ಯಯನದಲ್ಲಿ ತಪ್ಪಿದ ಸಂದರ್ಭದಲ್ಲಿ ನಮ್ಮ ಕೈಹಿಡಿದು ಸರಿಪಡಿಸುವ ಮೂಲಕ ಬುದ್ಧಿ ಹೇಳುತ್ತಿದ್ದಾರೆ. ಕ್ರೀಡೆ, ಪಠ್ಯ-ಪಠ್ಯೇತರ ಚಟುವಟಿಕೆಗಳು ನಮ್ಮ ಬೆಳವಣಿಗೆಗೆ ಅನುಕೂಲವಾಗಿದೆ.  ಆತ್ಯ, ಅಭಿಷೇಕ ರಾವಳ ವಿದ್ಯಾರ್ಥಿಗಳು, ಜಮಖಂಡಿ.

ಅವಳಿ ತಾಲೂಕಿನಲ್ಲಿ ಶಿಕ್ಷಕರಿಗೆ ಕಲಿಕಾ ಗುಣಮಟ್ಟದ ಹೆಚ್ಚಿನ ಆದ್ಯತೆ ನೀಡುವಂತೆ ಸೂಚನೆ ನೀಡಿದೆ. ಕಳೆದ ವರ್ಷದಿಂದ ಕೊರೊನಾದಿಂದ ಶಿಕ್ಷಣ ಕ್ಷೇತ್ರ ಕುಸಿತಗೊಂಡ ಹಿನ್ನೆಲೆಯಲ್ಲಿ ಸರಳ ಪಠ್ಯಬೋಧನೆ ಸಹಿತ ಪಠ್ಯ ಚಟುವಟಿಕೆ ನಿಗದಿತ ಅವ ಧಿಯಲ್ಲಿ ಪೂರ್ಣಗೊಳಿಸುವಂತೆ ಮಾಹಿತಿ ನೀಡಲಾಗಿದೆ. ಸರಕಾರಿ ಶಾಲೆಗಳಲ್ಲಿ ಸೌಲಭ್ಯಗಳ ಕೊರತೆ ನಡುವೆಯೂ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ಪರಿಣಾಮ ಪ್ರಸಕ್ತ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿದ್ದೇವೆ. -ಸಿ.ಎಂ.ನೇಮಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ

 -ಮಲ್ಲೇಶ ರಾ. ಆಳಗಿ

ಟಾಪ್ ನ್ಯೂಸ್

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

3-mahalingapur

Mahalingpur: ತೆರಬಂಡಿ ಸ್ಪರ್ಧೆಯ ಹೋರಿ ದಾಖಲೆಯ 10.10 ಲಕ್ಷಕ್ಕೆ ಖರೀದಿಸಿದ ರೈತ

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.