ಮಳೆ-ಗಾಳಿಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಬೈಕ್ ಗಳ ನಡುವೆ ಅಪಘಾತ : ಓರ್ವನ ಸ್ಥಿತಿ ಗಂಭೀರ
Team Udayavani, Jun 5, 2022, 8:56 PM IST
ಮುದ್ದೇಬಿಹಾಳ: ಸಂಭವನೀಯ ಭಾರೀ ಗಾಳಿ ಮಳೆಯಿಂದ ತಪ್ಪಿಸಿಕೊಂಡು ಊರು ಸೇರಲು ವೇಗವಾಗಿ ಬೈಕ್ ಚಲಾಯಿಸಿಕೊಂಡು ತೆರಳುತ್ತಿದ್ದಾಗ ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಘಟನೆ ಮುದ್ದೇಬಿಹಾಳ ತಾಳಿಕೋಟೆ ರಾಜ್ಯ ಹೆದ್ದಾರಿಯ ಹೊಕ್ರಾಣಿ ಕ್ರಾಸ್ ನಲ್ಲಿ ಭಾನುವಾರ ರಾತ್ರಿ ನಡೆದಿದೆ.
ಘಟನೆಯಲ್ಲಿ ಒಂದು ಬೈಕ್ ನಲ್ಲಿದ್ದ ಹೊಕ್ರಾಣಿ ಗ್ರಾಮದ ವ್ಯಕ್ತಿಯೊಬ್ಬನ ತಲೆಗೆ ಪೆಟ್ಟಾಗಿದ್ದು ಆತನನ್ನು ಅಂಬ್ಯೂಲೆನ್ಸ್ ಮೂಲಕ ಸರ್ಕಾರಿ ಆಸ್ಪತ್ರೆಗೆ ಕರೆತಂದು ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನೊಂದು ಬೈಕ್ ನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಇದ್ದು ಅಂಬ್ಯುಲೆನ್ಸ್ ಏರಿ ಚಿಕಿತ್ಸೆಗೆ ಬರಲು ನಿರಾಕರಿಸಿದ್ದಾನೆ ಎನ್ನಲಾಗಿದೆ.
ವಿಷಯ ತಿಳಿದು ಸಿಪಿಐ ಆನಂದ ವಾಘ್ಮೋಡೆ ಸೂಚನೆ ಮೇರೆಗೆ ಘಟನೆ ನಡೆದ ಸ್ಥಳದ ವ್ಯಾಪ್ತಿ ಹೊಂದಿರುವ ತಾಳಿಕೋಟೆ ಪೊಲೀಸ್ ಠಾಣೆಯ ಪಿಎಸೈ ವಿನೋದ ದೊಡಮನಿ ಸ್ಥಳಕ್ಕೆ ತೆರಳಿ ಕಾನೂನು ಕ್ರಮ ಕೈಕೊಂಡಿದ್ದಾರೆ.
ಇದನ್ನೂ ಓದಿ : ಕೆರೆಗೆ ಈಜಲು ಹೋಗಿದ್ದ ಯುವಕರು ನೀರುಪಾಲು : ಸಂಡೂರಿನ ಶಿವಪುರ ಕೆರೆಯಲ್ಲಿ ದುರ್ಘಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್