ರೈತ ಸಂಘದ ಹೋರಾಟಕ್ಕೆ ಜಿಲ್ಲಾಡಳಿತ ಸ್ಪಂದನೆ

ಎಂಎಸ್‌ಪಿಎಲ್‌ ಕಂಪನಿ ಯೂನಿಟ್‌ ವಿಸ್ತರಣೆಗೆ ವಿರೋಧ ; ರೈತರ ಹೋರಾಟಕ್ಕೆ ತಾತ್ಕಾಲಿಕ ತಡೆ

Team Udayavani, Jun 6, 2022, 2:47 PM IST

15

ಕೊಪ್ಪಳ: ಕರ್ನಾಟಕ ರೈತ ಸಂಘ ಹಾಗೂ ಭೂ ಸಂತ್ರಸ್ತ ರೈತರ ಹೋರಾಟ ಸಮಿತಿ ನೇತೃತ್ವದಲ್ಲಿ ಮೂರು ದಿನಗಳ ಹೋರಾಟಕ್ಕೆ ಕೈಗಾರಿಕೆ ಇಲಾಖೆ, ಜಿಲ್ಲಾಡಳಿತ ಸ್ಪಂದಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದಕ್ಕೆ ರೈತ ಸಂಘವು ಸಂತಸ ವ್ಯಕ್ತಪಡಿಸಿ, ಹೋರಾಟವನ್ನು ತಾತ್ಕಾಲಿಕ ಹಿಂಪಡೆದಿದೆ.

ಎಂಎಸ್‌ಪಿಎಲ್‌ ಕಂಪನಿಯು ಯೂನಿಟ್‌ನ್ನು ವಿಸ್ತರಣೆ ವಿರೋಧಿಸಿ, ಹೆಚ್ಚುವರಿ ರೈತರ ಭೂಮಿ ರೈತರಿಗೆ ವಾಪಾಸ್‌ ಕೊಡುವಂತೆ ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಲಾಗಿತ್ತು. ಜಿಲ್ಲಾಡಳಿತವು ಇದಕ್ಕೆ ಸ್ಪಂದಿಸಿದ್ದು, ಕಂಪನಿ ಪ್ರತಿನಿಧಿಗಳ ಜೊತೆ ಸಭೆ ನಡೆಸಿ, ರಾಜ್ಯ ಕೈಗಾರಿಕೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ಕೆಲವೊಂದು ಅಂಶಗಳನ್ನು ಆ ಪತ್ರದಲ್ಲಿ ವಿವರಿಸಿದ್ದಾರೆ.

ಜಿಲ್ಲಾಧಿಕಾರಿ ಅವರು ಬರೆದ ಪತ್ರದಲ್ಲಿ ಕೈಗಾರಿಕೆಗಾಗಿ ಖರೀದಿಸಿದ ಭೂಮಿಯನ್ನು ರೈತರಿಗೆ ವಾಪಸ್‌ ಕೊಡಲು ಕೋರಿದ್ದಾರೆ. ಕಂಪನಿಯು ಕೈಗಾರಿಕೆ ವಿಸ್ತರಣೆ ಮಾಡುವ ತೀರ್ಮಾನ ಕೈ ಬಿಟ್ಟಿರುವ ಕುರಿತು ಸಭೆಯಲ್ಲಿ ತಿಳಿಸಿದ್ದಾರೆ. ಖರೀದಿ ವ್ಯವಹಾರದಲ್ಲಿ ನಡೆದ ವಂಚನೆ ಕುರಿತು ನ್ಯಾಯಾಂಗ ತನಿಖೆಗೊಪ್ಪಿಸಲು ತಿಳಿಸಿದ್ದಾರೆ. ಕೆಐಎಡಿಬಿ ಮೂಲಕ ಎಕ್ಸಾಂ ಡಿಯರ್‌ ಕಂಪೆನಿಗೆ 350 ಎಕರೆ ಭೂಮಿ ಕಳೆದುಕೊಂಡ 71 ಕುಟುಂಬಗಳ ಪೈಕಿ 41 ಕುಟುಂಬಗಳಿಗೆ ಈವರೆಗೂ ಉದ್ಯೋಗ ದೊರೆತಿಲ್ಲ. ಈ 41 ಕುಟುಂಬಗಳಿಗೆ ತಕ್ಷಣ ಕೆಲಸ ಕೊಡಬೇಕು ಮತ್ತು ಅವರು ಅರ್ಜಿ ಸಲ್ಲಿಸಿದ ದಿನಗಳಿಂದ ವೇತನ ಲೆಕ್ಕ ಹಾಕಿ ಕೊಡಬೇಕು. ಕೆಲವರಿಗೆ 4 ವರ್ಷ ಇನ್ನು ಕೆಲವರಿಗೆ 6, 8 ವರ್ಷದ ವೇತನ ಕೊಡಲು ಕಂಪನಿಗೆ ಸೂಚನೆ ಕೊಟ್ಟಿದ್ದು, ಸಂತಸ ತರಿಸಿದೆ ಎಂದು ಅವರು ತಿಳಿಸಿದ್ದಾರೆ.

ಕುಣೆಕೇರಿ, ಲಾಚನಕೇರಿ, ಚಿಕ್ಕಬಗನಾಳ, ಕುಣಿಕೇರಿ ತಾಂಡಾದ ರೈತರು ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿ ಸಂತಸ ವ್ಯಕ್ತಪಡಿಸಿದರು. ಹೋರಾಟಕ್ಕೆ ಸಿಕ್ಕ ಜಯದ ಬಗ್ಗೆ ಸಂತಸ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಡಿ.ಎಚ್‌. ಪೂಜಾರ, ರೈತ ಸಂಘದ ಶರಣಪ್ಪ ದೊಡ್ಡಮನಿ, ಖಾದಲ ಹುಸೇನ್‌ ಕಾರಟಗಿ, ಅಲ್ಲಮಪ್ರಭು ಬೆಟ್ಟದೂರು, ಬಿ.ಎನ್‌. ಯರದಿಹಾಳ, ಬಸವರಾಜ ಶೀಲವಂತರ, ಈಶಪ್ಪ ಕುಣಿಕೇರಿ, ಬಸವರಾಜ ಕುಂಬಾರ, ಮಂಜುನಾಥ ಗಡಗಿ, ಮಂಜುನಾಥ ಕುಂಬಾರ, ಬಸವರಾಜ ನರೆಗಲ್‌, ಲಿಂಗಯ್ಯ ಶಶಿಮಠ, ಪಂಪಯ್ಯ ಹಿರೇಮಠ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.