ಮಕ್ಕಳ ಪ್ರತಿಭೆ ಹೊರಹಾಕಲು ಚಿತ್ರಕಲೆ ಸಹಕಾರಿ; ಶ್ರುತಿ

ಈ ಬಗ್ಗೆ ನಾಗರಿಕರು ಮತ್ತು ಸರ್ಕಾರ ಎಚ್ಚೆತ್ತುಕೊಳ್ಳಬೇಕಾಗಿದೆ.

Team Udayavani, Jun 6, 2022, 5:32 PM IST

ಮಕ್ಕಳ ಪ್ರತಿಭೆ ಹೊರಹಾಕಲು ಚಿತ್ರಕಲೆ ಸಹಕಾರಿ; ಶ್ರುತಿ

ದೇವನಹಳ್ಳಿ: ಬಣ್ಣಗಳ ಮುಖಾಂತರ ಬಿಳಿಹಾಳೆ ಯಲ್ಲಿ ಪರಿಸರದ ಉಳಿವು ಮತ್ತು ಅಳಿವುಗಳನ್ನು ಚಿತ್ರಿಸುವ ಸೂಪ್ತ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಸಿಕ್ಕಂತಾಗಿದೆ. ವಸ್ತುಸ್ಥಿತಿಯನ್ನು ಕುಂಚದ ಮುಖಾಂ ತರ ಹೊರಹಾಕುವ ಕಲೆಯೇ ಚಿತ್ರಕಲೆಯಾಗಿರು ತ್ತದೆ ಎಂದು ಕೆನರಾಬ್ಯಾಂಕ್‌ ಕನ್ನಮಂಗಲ ಶಾಖೆಯ ವ್ಯವಸ್ಥಾಪಕಿ ಕೆ.ಎಂ.ಶ್ರುತಿ ಅಭಿಪ್ರಾಯ ಪಟ್ಟರು.

ತಾಲೂಕಿನ ದೊಡ್ಡಪ್ಪನಹಳ್ಳಿ ಗ್ರಾಮದಲ್ಲಿನ ಡಾ.ಎಪಿಜೆ ಅಬ್ದುಲ್‌ ಕಲಾಂ ಇಂಗ್ಲಿಷ್‌ ಶಾಲೆಯಲ್ಲಿ ದೇವನಹಳ್ಳಿ ಸರಸ್ವತಿ ಸಂಗೀತ ವಿದ್ಯಾಲಯದಿಂದ ವಿಶ್ವ ಪರಿಸರ ದಿನದ ಅಂಗವಾಗಿ ಶಾಲಾ ಮಕ್ಕಳಿಗಾಗಿ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಮಾನವ ತನ್ನ ಸ್ವಾರ್ಥಕ್ಕಾಗಿ ಗಿಡಮರಗಳ ಮಾರಣ ಹೋಮವನ್ನೇ ನಡೆಸಿದ್ದಾನೆ. ಇಂದಿನ ಪೀಳಿಗೆ ಇದರ ಸಾಧಕ, ಬಾಧಕಗಳನ್ನು ಅರಿತು ಗಿಡಮರಗಳ ಪರಿಸರ ಉಳಿವಿನತ್ತ ಗಮನ ಹರಿಸಬೇಕು ಎಂದು ಕಿವಿ ಮಾತು ಹೇಳಿದರು.

ಪ್ರಕೃತಿಯ ಮೇಲೆ ದೌರ್ಜನ್ಯ: ಸ.ಸಂ.ವಿ. ಕಾರ್ಯದರ್ಶಿ ಮಂಜುನಾಥ ಜಿ. ಮಾತನಾಡಿ, ಅಭಿವೃದ್ಧಿಯ ಹೆಸರಿನಲ್ಲಿ ಪರಿಸರ ಹಾಳಾಗುತ್ತಿದೆ. ಈಗಾಗಲೇ ಮಾನವನಿಂದ ಪ್ರಕೃತಿಯ ಮೇಲೆ ಹಲವು ರೀತಿಯಲ್ಲಿ ದೌರ್ಜನ್ಯಗಳು ನಡೆಯುತ್ತಲೇ ಇವೆ. ಇದರಿಂದಾಗಿ ಗಿಡ-ಮರಗಳ ಬೆಳವಣಿಗೆ ಯಲ್ಲಿ ಕುಂಠಿತ ಕಾಣುತ್ತಿದೆ. ಆರೋಗ್ಯಕರವಾದ ಪ್ರಾಣವಾಯು ಸಿಗದೆ ಜೀವ ವೈವಿಧ್ಯತೆಗಳಾದ ನದಿಗಳು, ವನ್ಯಜೀವಿ, ಪಕ್ಷಿಗಳು ನಾಶದ ಸ್ಥಿತಿಯಲ್ಲಿವೆ.

ಈ ಬಗ್ಗೆ ನಾಗರಿಕರು ಮತ್ತು ಸರ್ಕಾರ ಎಚ್ಚೆತ್ತುಕೊಳ್ಳಬೇಕಾಗಿದೆ. ಕೇವಲ ವರ್ಷಕ್ಕೊಂದು ದಿನ ಮಾತ್ರವೇ ಪರಿಸರ ದಿನವನ್ನು ಆಚರಿಸದೇ ನಿತ್ಯವೂ ಪರಿಸರ ದಿನವನ್ನು ಆಚರಿಸಬೇಕು. ಸಭೆ- ಸಮಾರಂಭಗಳಲ್ಲಿ ಉಡುಗೊರೆಗಳ ಜೊತೆಗೆ ಒಂದೊಂದು ಸಸಿಯನ್ನು ನೀಡುವುದು ರೂಢಿಸಿ ಕೊಳ್ಳುವುದು ಉತ್ತಮ ಎಂದು ಹೇಳಿದರು.

ವೇದಿಕೆ ಒದಗಿಸಿರುವುದು ಸಂತೋಷ: ಡಾ. ಎಪಿಜೆ ಅಬ್ದುಲ್‌ಕಲಾಂ ಇಂಗ್ಲಿಷ್‌ ಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಫ‌ಯಾಜ್‌ ಪಾಷಾ ಮಾತನಾಡಿ, ಇಂದು ಪ್ರಪಂಚದೆಲ್ಲೆಡೆ ವಿಶ್ವ ಪರಿಸರ ದಿನವನ್ನು ಆಚರಿಸುತ್ತಿದ್ದೇವೆ. ನಮ್ಮ ಈ ಶಾಲೆಯಲ್ಲಿ ಈ ದಿನವನ್ನು ಮಕ್ಕಳಿಗೆ ಚಿತ್ರ ಬಿಡಿಸುವ ಮೂಲಕ ಅವರ ಚಿಂತನೆಗೆ ಕುಂಚದ ಮೂಲಕ ವೇದಿಕೆ ಒದಗಿಸಿರುವುದು ಸಂತೋಷದ ವಿಷಯವಾಗಿದೆ ಎಂದರು. ಡಾ. ಎಪಿಜೆ ಅಬ್ದುಲ್‌ ಕಲಾಂ ಇಂಗ್ಲಿಷ್‌ ಶಾಲೆಯ ಪ್ರಾಂಶು
ಪಾಲ ಮುಯೀನ್‌, ಶಿಕ್ಷಕ ನಯನಾ, ಮುನಿರಾಜು,ರಾಮಾಂಜಿ, ಸುಲ್ತಾನ, ನಸೀಮಾ, ಜಯಶ್ರೀ, ಜಕೀರಾ, ಕಲಾವತಿ, ರಾಜೇಶ್ವರಿ, ರಮೇಶ್‌, ವೈಷ್ಣವಿ, ಪೂರ್ಣಿಮಾ, ಭಾಗ್ಯ, ಶಾಲಾ ಸಿಬ್ಬಂದಿ, ಸ.ಸಂ.ವಿದ್ಯಾ ಲಯದ ಸಂಸ್ಥಾಪಕ ಬಿ.ಕೆ. ಗೋಪಾಲ್‌, ಖಜಾಂಚಿ ಜಿ. ನೇತ್ರಾವತಿ, ಚಿನ್ಮಯಿಕೃಷ್ಣ ಇದ್ದರು.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.