ರಣಜಿ ಟ್ರೋಫಿ ಕ್ವಾರ್ಟರ್‌ ಫೈನಲ್‌: ಸೌರಭ್‌ ಸ್ಪಿನ್ನಿಗೆ ಕುಸಿದ ಕರ್ನಾಟಕ


Team Udayavani, Jun 6, 2022, 11:17 PM IST

ರಣಜಿ ಟ್ರೋಫಿ ಕ್ವಾರ್ಟರ್‌ ಫೈನಲ್‌: ಸೌರಭ್‌ ಸ್ಪಿನ್ನಿಗೆ ಕುಸಿದ ಕರ್ನಾಟಕ

ಬೆಂಗಳೂರು: ಉತ್ತರ ಪ್ರದೇಶ ವಿರುದ್ಧ ಸೋಮವಾರ ಮೊದಲ್ಗೊಂಡ ರಣಜಿ ಟ್ರೋಫಿ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಆತಿಥೇಯ ಕರ್ನಾಟಕ ಕುಸಿತದ ಹಾದಿ ಹಿಡಿದಿದೆ.

ಮೊದಲ ದಿನದ 72 ಓವರ್‌ಗಳ ಆಟದಲ್ಲಿ 7 ವಿಕೆಟಿಗೆ ಕೇವಲ 213 ರನ್‌ ಮಾಡಿದೆ. ಸ್ಪಿನ್ನರ್‌ ಸೌರಭ್‌ ಕುಮಾರ್‌ 4, ಮಧ್ಯಮ ವೇಗಿ ಶಿವಂ ಮಾವಿ 3 ವಿಕೆಟ್‌ ಕಿತ್ತು ಪಾಂಡೆ ಪಡೆಗೆ ಕಡಿವಾಣ ಹಾಕಿದರು.

ಆಲೂರಿನ ಕೆಎಸ್‌ಸಿಎ ಕ್ರೀಡಾಂ ಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್‌ ಗೆದ್ದ ಯುಪಿ ಕರ್ನಾಟಕವನ್ನು ಬ್ಯಾಟಿಂಗ್‌ಗೆ ಇಳಿಸಿತ್ತು. ಅಂಗಳ ಒದ್ದೆ ಇದ್ದುದರಿಂದ ಪಂದ್ಯ ವಿಳಂಬವಾಗಿ ಆರಂಭ ವಾಗಿತ್ತು. ಬಳಿಕ ಬೆಳಕಿನ ಅಭಾವ ದಿಂದಾಗಿ ಬೇಗನೇ ಕೊನೆಗೊಂಡಿತು. ಕೆಎಸ್‌ಸಿಎ ಟ್ರ್ಯಾಕ್‌ ಬೌಲರ್‌ಗಳಿಗೆ ನೆರವಾ ಗುವ ಸಾಧ್ಯತೆ ಇದ್ದುದರಿಂದ ಯುಪಿ ನಾಯಕ ಕರಣ್‌ ಶರ್ಮ ಅವರ ಬೌಲಿಂಗ್‌ ನಿರ್ಧಾರ ಭರಪೂರ ಯಶಸ್ಸು ಕಂಡಿತು.

ಆರಂಭಕಾರ ರವಿಕುಮಾರ್‌ ಸಮರ್ಥ್ ಕರ್ನಾಟಕ ಸರದಿಯ ಏಕೈಕ ಅರ್ಧ ಶತಕಕ್ಕೆ ಸಾಕ್ಷಿಯಾದರು (57). ಮಧ್ಯಮ ಕ್ರಮಾಂಕದ ಆಟಗಾರ ಕೆ. ಸಿದ್ಧಾರ್ಥ್ 37, ಕರುಣ್‌ ನಾಯರ್‌ 29, ನಾಯಕ ಮನೀಷ್‌ ಪಾಂಡೆ 27 ರನ್‌ ಮಾಡಿದರು. 26 ರನ್‌ ಮಾಡಿರುವ ಶ್ರೇಯಸ್‌ ಗೋಪಾಲ್‌ ಮತ್ತು 12 ರನ್‌ ಗಳಿಸಿರುವ ವಿಜಯಕುಮಾರ್‌ ವೈಶಾಖ್‌ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ. ಕೀಪರ್‌ ಶರತ್‌ ಗೋಲ್ಡನ್‌ ಡಕ್‌ ಸಂಕಟಕ್ಕೆ ಸಿಲುಕಿದರು. ಪಾಂಡೆ ಮತ್ತು ಶರತ್‌ ಅವರನ್ನು ಸೌರಭ್‌ ಸತತ ಎಸೆತಗಳಲ್ಲಿ ಕೆಡವಿದರು.

ಸಮರ್ಥ್ ಹೊರತುಪಡಿಸಿ ಉಳಿದ ವರೆಲ್ಲ ತೀರಾ ನಿಧಾನ ಗತಿಯಲ್ಲಿ ಆಡಿದರು. ಟ್ರ್ಯಾಕ್‌ ಹೆಚ್ಚಿನ ತಿರುವು ಪಡೆಯುತ್ತಿದ್ದುದೂ ಇದಕ್ಕೊಂದು ಕಾರಣವಾಗಿತ್ತು. ಸಮರ್ಥ್ ಅವರ 57 ರನ್‌ 81 ಎಸೆತಗಳಿಂದ ಬಂತು. ಸಿಡಿಸಿದ್ದು 10 ಬೌಂಡರಿ. ಆದರೆ ಮಾಯಾಂಕ್‌ ಅಗರ್ವಾಲ್‌ 10 ರನ್ನಿಗೆ 41 ಎಸೆತ, ಕರುಣ್‌ ನಾಯರ್‌ 29 ರನ್ನಿಗೆ 74 ಎಸೆತ ತೆಗೆದುಕೊಂಡರು.

ಸಂಕ್ಷಿಪ್ತ ಸ್ಕೋರ್‌
ಕರ್ನಾಟಕ-7 ವಿಕೆಟಿಗೆ 213 (ಸಮರ್ಥ್ 57, ಸಿದ್ಧಾರ್ಥ್ 37, ಪಾಂಡೆ 27, ನಾಯರ್‌ 29, ಶ್ರೇಯಸ್‌ ಗೋಪಾಲ್‌ ಬ್ಯಾಟಿಂಗ್‌ 26, ಸೌರಭ್‌ ಕುಮಾರ್‌ 67ಕ್ಕೆ 4, ಶಿವಂ ಮಾವಿ 40ಕ್ಕೆ 3).

ಪಾರ್ಕರ್‌ ಶತಕ; ಮುಂಬಯಿ ಬೃಹತ್‌ ಮೊತ್ತ
ಉತ್ತರಾಖಂಡ ವಿರುದ್ಧದ ಕ್ವಾರ್ಟರ್‌ ಫೈನಲ್‌ನಲ್ಲಿ ಮುಂಬಯಿ 3 ವಿಕೆಟಿಗೆ 304 ರನ್ನುಗಳ ಬೃಹತ್‌ ಸ್ಕೋರ್‌ ದಾಖಲಿಸಿದೆ. ಸುವೇದ್‌ ಪಾರ್ಕರ್‌ ಪದಾರ್ಪಣ ಪಂದ್ಯದಲ್ಲೇ ಶತಕ ಬಾರಿಸಿ ಮಿಂಚಿದರು.

ನಾಯಕ ಪೃಥ್ವಿ ಶಾ (21), ಯಶಸ್ವಿ ಜೈಸ್ವಾಲ್‌ (35) ಮತ್ತು ಅರ್ಮಾನ್‌ ಜಾಫ‌ರ್‌ (60) ಪೆವಿಲಿಯನ್‌ ಸೇರಿಕೊಂಡ ಬಳಿಕ ಸುವೇದ್‌ ಪಾರ್ಕರ್‌ ಮತ್ತು ಸರ್ಫರಾಜ್ ಖಾನ್ ಉತ್ತರಾಖಂಡ ಬೌಲರ್‌ಗಳಿಗೆ ಒಗಟಾಗಿಯೇ ಉಳಿದರು. ಪಾರ್ಕರ್‌ 218 ಎಸೆತಗಳಿಂದ 104 ರನ್‌ ಮಾಡಿ ಆಡುತ್ತಿದ್ದಾರೆ (8 ಬೌಂಡರಿ, 2 ಸಿಕ್ಸರ್‌). ಇವರೊಂದಿಗೆ 69 ರನ್‌ ಮಾಡಿರುವ ಸರ್ಫರಾಜ್ ಖಾನ್ ಕ್ರೀಸ್‌ನಲ್ಲಿದ್ದಾರೆ (104 ಎಸೆತ, 8 ಬೌಂಡರಿ, 1 ಸಿಕ್ಸರ್‌). ಈ ಜೋಡಿ 204 ಎಸೆತಗಳಿಂದ 128 ರನ್‌ ಒಟ್ಟುಗೂಡಿಸಿದೆ. ಉರುಳಿದ ಮೂರೂ ವಿಕೆಟ್‌ ದೀಪಕ್‌ ಧಪೋಲ ಪಾಲಾಗಿದೆ.

21 ವರ್ಷದ ಬಲಗೈ ಬ್ಯಾಟರ್‌, ಭಾರತದ ಅಂಡರ್‌-19 ತಂಡದಲ್ಲಿ ಆಡಿದ ಸುವೇದ್‌ ಪಾರ್ಕರ್‌ ಕೋಚ್‌ ಅಮೋಲ್‌ ಮಜುಮಾªರ್‌ ಗರಡಿಯಲ್ಲಿ ಬೆಳೆದ ಆಟಗಾರ. ಮಜುಮಾªರ್‌ ಕೂಡ ಚೊಚ್ಚಲ ರಣಜಿ ಪಂದ್ಯದಲ್ಲೇ ಶತಕ ಬಾರಿಸಿದ್ದರು.

ಸುದೀಪ್‌ ಸೆಂಚುರಿ; ಬಂಗಾಲ ಒಂದಕ್ಕೆ 301
ಜಾರ್ಖಂಡ್‌ ಎದುರಿನ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಬಂಗಾಲ ಒಂದೇ ವಿಕೆಟಿಗೆ 301 ರನ್‌ ಪೇರಿಸಿದೆ. ಸುದೀಪ್‌ ಕುಮಾರ್‌ ಘರಾಮಿ 106 ರನ್‌ ಮಾಡಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ. ನಾಯಕ ಅಭಿಮನ್ಯು ಈಶ್ವರನ್‌ 65 ರನ್‌ ಮಾಡಿದರೆ, ಇವರ ಜತೆಗಾರ ಅಭಿಷೇಕ್‌ ರಮಣ್‌ 41 ರನ್‌ ಗಳಿಸಿದ ವೇಳೆ ಗಾಯಾಳಾದರು. ಅನುಸ್ತೂಪ್‌ ಮಜುಮಾªರ್‌ 85 ರನ್‌ ಗಳಿಸಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

219ಕ್ಕೆ ಕುಸಿದ ಪಂಜಾಬ್‌: ಮಧ್ಯಪ್ರದೇಶ ವಿರುದ್ಧದ ಮುಖಾಮುಖಿಯಲ್ಲಿ ಪಂಜಾಬ್‌ 219 ರನ್ನುಗಳ ಸಣ್ಣ ಮೊತ್ತಕ್ಕೆ ಕುಸಿದಿದೆ. ನಾಯಕ ಅಭಿಷೇಕ್‌ ಶರ್ಮ ಮತ್ತು ಅನ್ಮೋಲ್‌ಪ್ರೀತ್‌ ಸಿಂಗ್‌ ತಲಾ 47 ರನ್‌, ಸನ್ವೀರ್‌ ಸಿಂಗ್‌ 41 ರನ್‌ ಮಾಡಿದರು. ಮಧ್ಯಪ್ರದೇಶ ವಿಕೆಟ್‌ ನಷ್ಟವಿಲ್ಲದೆ 5 ರನ್‌ ಮಾಡಿದೆ.

ಟಾಪ್ ನ್ಯೂಸ್

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

T20 World Cup; Dwayne Bravo is the Afghanistan bowling consultant

T20 World Cup; ಡ್ವೇನ್‌ಬ್ರಾವೊ ಅಫ್ಘಾನ್‌ ಬೌಲಿಂಗ್‌ ಸಲಹೆಗಾರ

Molakalmuru ಆಸ್ಪತ್ರೆಯಲ್ಲಿ ಮೊಂಬತ್ತಿಯಲ್ಲಿ ಚಿಕಿತ್ಸೆ!

Molakalmuru ಆಸ್ಪತ್ರೆಯಲ್ಲಿ ಮೊಂಬತ್ತಿಯಲ್ಲಿ ಚಿಕಿತ್ಸೆ!

ಕಾಂಗ್ರೆಸ್‌ಗೆ 5 ಸ್ಥಾನದಲ್ಲಿ ಗೆಲುವು: ರಾಮಲಿಂಗಾ ರೆಡ್ಡಿ

ಕಾಂಗ್ರೆಸ್‌ಗೆ 5 ಸ್ಥಾನದಲ್ಲಿ ಗೆಲುವು: ರಾಮಲಿಂಗಾ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

T20 World Cup: McGurk is Australia’s reserve player

T20 World Cup: ಮೆಕ್‌ಗರ್ಕ್‌ ಆಸ್ಟ್ರೇಲಿಯದ ಮೀಸಲು ಆಟಗಾರ

T20 World Cup; Dwayne Bravo is the Afghanistan bowling consultant

T20 World Cup; ಡ್ವೇನ್‌ಬ್ರಾವೊ ಅಫ್ಘಾನ್‌ ಬೌಲಿಂಗ್‌ ಸಲಹೆಗಾರ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

T20 World Cup: McGurk is Australia’s reserve player

T20 World Cup: ಮೆಕ್‌ಗರ್ಕ್‌ ಆಸ್ಟ್ರೇಲಿಯದ ಮೀಸಲು ಆಟಗಾರ

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.