ಬೀದಿಗೆ ಬಂದರೆ ಕಚ್ಚುವ ನಾಯಿಗಳಿವೆ ಹುಷಾರ್!
Team Udayavani, Jun 7, 2022, 1:00 PM IST
ವಾಡಿ: ಸಿಮೆಂಟ್ ನಗರಿ ವಾಡಿ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಪಾದಚಾರಿಗಳು ರಸ್ತೆಗೆ ಬರಲು ಎದೆಗಾರಿಕೆ ಪ್ರದರ್ಶಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಮಳೆಗಾಲ ಶುರುವಾಗಿದ್ದು, ನಾಯಿಗಳ ಹಿಂಡು ಸಾರ್ವಜನಿಕರ ನೆಮ್ಮದಿ ಹಾಳು ಮಾಡಿವೆ. ಮಕ್ಕಳು, ಮಹಿಳೆಯರು, ಹಿರಿಯರು, ಯುವಕರೆನ್ನದೇ ಬೀದಿ ನಾಯಿಗಳ ಹೆದರಿಕೆಯಲ್ಲೇ ಹೆಜ್ಜೆಯಿಡುವ ಸಂದಿಗ್ಧ ಸ್ಥಿತಿ ನಿರ್ಮಾಣವಾಗಿದೆ.
ಎಸಿಸಿ ಕಾಲೋನಿ, ಮಲ್ಲಿಕಾರ್ಜುನ ದೇವಸ್ಥಾನ ಬಡಾವಣೆ, ಪಿಲಕಮ್ಮಾ ಬಡಾವಣೆ, ರಾಮ ಮಂದಿರ ಬಡಾವಣೆ, ಕಲಕಮ್ಕರ್ ಏರಿಯಾ, ಮಾಂಸ ಮಾರುಕಟ್ಟೆ, ವಿಜಯನಗರ, ಭೀಮನಗರ, ಸೋನಾಬಾಯಿ ಏರಿಯಾ, ರೆಸ್ಟ್ಕ್ಯಾಂಪ್ ತಾಂಡಾ, ಶಿವರಾಯ ಚೌಕಿ, ರೈಲ್ವೆ ಕಾಲೋನಿ, ಹನುಮಾನ ನಗರ ಸೇರಿದಂತೆ ಇನ್ನಿತರ ಬಡಾವಣೆಗಳಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಿದೆ. ಪುರಸಭೆಗೆ ದೂರು ಕೊಟ್ಟರೂ ಅಧಿಕಾರಿಗಳು ಕ್ರಮಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.
ಬೀದಿ ನಾಯಿಗಳ ಸಂಖ್ಯೆ ದಿನೇದಿನೆ ಬೆಳೆಯುತ್ತಿದೆ. ಈಗಾಗಲೇ ಕೆಲ ಬಡಾವಣೆಗಳಲ್ಲಿ ನಾಯಿ ಕಡಿತದ ವರದಿಗಳು ಬಂದಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ನಾಯಿ ಕಡಿತದಿಂದ ಚಿಕಿತ್ಸೆ ಪಡೆದವರು ಲೆಕ್ಕವಿಡಲಾಗುತ್ತಿದೆ. ಬೀದಿ ನಾಯಿ ಕಡಿತದ ಔಷಧ ಸಿದ್ಧವಿಡಲಾಗಿದ್ದು, ಗಾಯಾಳುಗಳ ಚಿಕಿತ್ಸೆಗಾಗಿ ವೈದ್ಯರು ಸಿದ್ಧರಾಗಿದ್ದಾರೆ. ಆದರೆ ವಿಪರ್ಯಾಸವೆಂದರೆ ಕಚ್ಚುವ ನಾಯಿಗಳನ್ನು ಹಿಡಿದು ಸ್ಥಳಾಂತರಿಸಬೇಕಾದ ಅಧಿಕಾರಿಗಳು ಮಾತ್ರ ಎಚ್ಚೆತ್ತುಕೊಂಡಿಲ್ಲ. ಪಾದಚಾರಿಗಳನ್ನು ಹಿಂಬಾಲಿಸಿಕೊಂಡು ಓಡುವ ನಾಯಿಗಳಿಂದ ಆತಂಕದ ವಾತಾವರಣ ಮೂಡಿಸಿದೆ.
ಬೆಳಗ್ಗೆ ವಾಕಿಂಗ್ ಹೋಗುವವರಂತೂ ನಾಯಿಗಳನ್ನು ಕಂಡು ಹೆದರುವಂತಾಗಿದೆ. ಶಾಲೆಗೆ ಹೋಗುವ ಮಕ್ಕಳು ಪಾದಚಾರಿಗಳ ಸಹಾಯ ಪಡೆಯಬೇಕಾಗಿದೆ. ಪೋಷಕರು ಮಕ್ಕಳನ್ನು ಹೊರಗಡೆ ಬಿಡಲು ಹೆದರುತ್ತಿದ್ದಾರೆ. ರಕ್ತದ ರುಚಿ ಕಂಡಿರುವ ನಾಯಿಗಳು ಹುಚ್ಚೆದ್ದು ದಾಳಿ ಕ್ರೌರ್ಯಕ್ಕೆ ಮುಂದಾಗುವ ಮುಂಚೆ ಪುರಸಭೆ ಆಡಳಿತ ಎಚ್ಚೆತ್ತುಕೊಂಡರೆ ಗಂಭೀರ ದಾಳಿಗಳನ್ನು ತಪ್ಪಿಸಬಹುದಾಗಿದೆ. ಪುರಸಭೆಯ ಚುನಾಯಿತ ಜನಪ್ರತಿನಿಧಿಗಳು ಈ ಕುರಿತು ಗಂಭೀರ ಚಿಂತನೆ ನಡೆಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ