ಬೆಳ್ತಂಗಡಿ: ಕಚೇರಿಯಲ್ಲೇ ಹೃದಯಾಘಾತ; ಕರ್ತವ್ಯನಿರತ ಗ್ರಾಮ ಸಹಾಯಕ ನಿಧನ
Team Udayavani, Jun 7, 2022, 3:14 PM IST
ಬೆಳ್ತಂಗಡಿ: ತಾಲೂಕಿನ ಮೇಲಂತಬೆಟ್ಟು ಗ್ರಾಮ ಪಂಚಾಯತ್ನ ಗ್ರಾಮ ಸಹಾಯಕರೊಬ್ಬರು ಕರ್ತವ್ಯದಲ್ಲಿದ್ದಾಗ ಕಚೇರಿಯಲ್ಲೇ ಹೃದಯಾಘಾತಗೊಂಡು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಮೇಲಂತಬೆಟ್ಟು ಗ್ರಾಮದ ಗ್ರಾಮ ಸಹಾಯನಾಗಿದ್ದ ಉರುವಾಲು ಗ್ರಾಮದ ಬೇಂಗಾಯಿ ನಿವಾಸಿ ಸುಂದರ್ ಗೌಡ (45) ಮೃತಪಟ್ಟ ವ್ಯಕ್ತಿ.
ಮಂಗಳವಾರ ಮೇಲಂತಬೆಟ್ಟು ಗ್ರಾಮಲೆಕ್ಕಿಗ ಕಚೇರಿಯಲ್ಲಿ ಗ್ರಾಮ ಸಹಾಯಕರಾಗಿ, ಸುಂದರಗೌಡ ಕರ್ತವ್ಯದಲ್ಲಿದ್ದರು. ಮಧ್ಯಾಹ್ನ ವೇಳೆ ಮತ್ತೋರ್ವ ಗ್ರಾಮಲೆಕ್ಕಿಗ ಶಿವಕುಮಾರ್ ಅವರು ಹಾಗೂ ಮುಂಡೂರು ಗ್ರಾ.ಪಂ. ಸದಸ್ಯ ಸಂತೋಷ್ ಮುಂಡೂರು ಅವರೊಂದಿಗೆ ಚಹಾ ಸೇವಿಸಿ ಕಚೇರಿಗೆ ತೆರಳಿದ್ದರು. ಈ ವೇಳೆಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ. ಈ ವೇಳೆ ಅವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ:ಉಡುಪಿಯಲ್ಲಿ ಭಾರಿ ಮಳೆ ಸಾಧ್ಯತೆ: ಸಮುದ್ರಕ್ಕೆ ಇಳಿಯದಂತೆ ಸೂಚನೆ
ಆಸ್ಪತ್ರೆಗೆ ಬೆಳ್ತಂಗಡಿ ತಾಲೂಕು ಕಚೇರಿ ಸಿಬಂದಿ, ಗ್ರಾಮಲೆಕ್ಕಿಗರು, ಗ್ರಾಮಸಹಾಯಕರು, ಸ್ನೇಹಿತರು ಬಂದು ಮೃತರ ಅಂತಿಮ ದರ್ಶನ ಪಡೆದರು. ಮೃತ ಸುಂದರ ಗೌಡ ಬೇಂಗಾಯಿ ತಾಯಿ, ಪತ್ನಿ ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ
Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ
Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ
Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ
ʼಸಲಾರ್ʼನ ʼಶಿವ್ ಮನ್ನಾರ್ʼಗೂ ʼಕೆಜಿಎಫ್ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್