ನೇಕಾರರ ವಿದ್ಯುತ್‌ ರಿಯಾಯ್ತಿ ರದ್ದು ನಿಜ: ಕಲಬುರ್ಗಿ

ನೇಕಾರರ ವಿಷಯದಲ್ಲಿ ರಾಜಕಾರಣ ಮಾಡಿಲ್ಲ ಹೆಸ್ಕಾಂ ಕಚೇರಿಯ ದಾಖಲಾತಿ ಪರಿಶೀಲಿಸಿ

Team Udayavani, Jun 7, 2022, 3:45 PM IST

21

ಅಮೀನಗಡ: ಹೆಸ್ಕಾಂನಿಂದ ನೇಕಾರರಿಗೆ ನೀಡಲಾಗುತ್ತಿದ್ದ ರಿಯಾಯ್ತಿ ವಿದ್ಯುತ್‌ ರದ್ದು ಪಡಿಸಿರುವುದು ನಿಜ. ಈ ವಿಷಯದಲ್ಲಿ ನಾನು ರಾಜಕೀಯದ ದುರುದ್ದೇಶದಿಂದ ಹೇಳಿಕೆ ನೀಡಿಲ್ಲ. ಅನುಮಾನ ಇದ್ದವರು ಹೆಸ್ಕಾಂ ಕಚೇರಿಯ ದಾಖಲಾತಿ ಪರಿಶೀಲಿಸಬಹುದು ಎಂದು ಕೆಎಚ್‌ಡಿಸಿ ನಿಗಮ ಮಂಡಳಿ ಮಾಜಿ ಅಧ್ಯಕ್ಷ ರವೀಂದ್ರ ಕಲಬುರ್ಗಿ ಹೇಳಿದರು.

ಸೂಳೇಭಾವಿ ಗ್ರಾಮದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನೇಕಾರರ ವಿದ್ಯುತ್‌ ರಿಯಾಯಿತಿ ರದ್ದು ಮಾಡಿರುವ ಕುರಿತು ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿಯ ಕಂದಾಯ ಮತ್ತು ಲೆಕ್ಕ ನಿಯಂತ್ರಣಾಧಿಕಾರಿ ಅವರು ಜೂ.1 ರಂದು ಹೊರಡಿಸಿರುವ ಆಂತರಿಕ ಕಚೇರಿ ಟಿಪ್ಪಣಿ ಆದೇಶದ ಅನುಸಾರವಾಗಿ ದಾಖಲಾತಿ ಇಟ್ಟುಕೊಂಡು ಹೇಳಿಕೆ ನೀಡಿದ್ದೇನೆ. ನೇಕಾರರ ವಿದ್ಯುತ್‌ ರಿಯಾಯತಿ ರದ್ದು ಮಾಡದೆ ಇದ್ದರೇ ಸಂತೋಷದ ವಿಷಯ. ರದ್ದು ಮಾಡದೇ ಇರುವ ಕುರಿತು ದಾಖಲಾತಿ ಬಿಡುಗಡೆ ಮಾಡಲಿ ಎಂದರು.

ಸರ್ಕಾರದ ಮೇಲೆ ಗೂಬೆ ಕೂರಿಸುವ ಉದ್ದೇಶದಿಂದ ಯಾವುದೇ ದಾಖಲಾತಿ ಇಲ್ಲದೇ ರವೀಂದ್ರ ಕಲಬುರ್ಗಿ ಅವರು ಹೇಳಿಕೆ ನೀಡಿದ್ದಾರೆ ಎಂದು ನೇಕಾರ ಮುಖಂಡರಾದ ಜಿ.ಎಸ್‌. ಗೊಂಬಿ ಮತ್ತು ಮನೋಹರ ಶಿರೋಳ ಅವರ ಹೇಳಿಕೆ ನನಗೆ ನೋವಾಗಿದೆ. ನೇಕಾರರ ಅಭಿವೃದ್ಧಿಗಾಗಿ ನಾನು ಜಿ.ಎಸ್‌. ಗೊಂಬಿ ಮತ್ತು ಮನೋಹರ ಶಿರೋಳ ಅವರು ಪಕ್ಷಾತೀತವಾಗಿ ಎಲ್ಲ ಸರ್ಕಾರ ಇದ್ದಾಗಲು ಜತೆ-ಜತೆಯಾಗಿ ಹಲವಾರು ಹೋರಾಟ ಮಾಡಿದ್ದೇವೆ. ಈಗ ಅವರಿಗೆ ಗೊಂದಲವಿದ್ದರೆ ಹೆಸ್ಕಾಂ ಕಚೇರಿಯ ದಾಖಲಾತಿ ಪರಿಶೀಲಿಸಬಹುದು. ಅದನ್ನು ಬಿಟ್ಟು ಏಕಾಏಕಿ ನೀಡಿರುವ ಹೇಳಿಕೆ ನನಗೆ ಬೇಸರವಾಗಿದೆ ಎಂದರು.

ಕೈಮಗ್ಗ ನೇಕಾರರ ಸಹಕಾರ ಸಂಘಗಳ ಮಹಾಮಂಡಳ ಜಿಲ್ಲಾಧ್ಯಕ್ಷ ವಿಷ್ಣು ಗೌಡರ ಮಾತನಾಡಿ, ನೇಕಾರರ ವಿಷಯದಲ್ಲಿ ರವೀಂದ್ರ ಕಲಬುರ್ಗಿ ಅವರು ಎಂದು ರಾಜಕಾರಣ ಮಾಡಿಲ್ಲ, ಪಕ್ಷಾತೀತವಾಗಿ ನೇಕಾರರ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಕೆಎಚ್‌ಡಿಸಿ ನಿಗಮ ಮಂಡಳಿ ಅಧ್ಯಕ್ಷರಾಗಿದ್ದಾಗ ಪ್ರತಿ ಹಳ್ಳಿ-ಹಳ್ಳಿಗೆ ಭೇಟಿ ನೀಡಿ ನೇಕಾರರ ಪರವಾಗಿ ಕೆಲಸ ಮಾಡಿದ್ದಾರೆ. ಅವರ ಬಗ್ಗೆ ನೇಕಾರ ಮುಖಂಡರಾದ ಜಿ.ಎಸ್‌. ಗೊಂಬಿ ಮತ್ತು ಮನೋಹರ ಶಿರೋಳ ಟೀಕೆ ಮಾಡಿದ್ದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದರು.

ನೇಕಾರರ ಮುಖಂಡರಾದ ರವೀಂದ್ರ ರಾಮದುರ್ಗ,ಶಂಕ್ರಣ್ಣ ಜನಿವಾರದ, ಜಗನ್ನಾಥ ಗಾಡಿ ಸೇರಿದಂತೆ ಇನ್ನಿತರರು ಇದ್ದರು.

ಟಾಪ್ ನ್ಯೂಸ್

15

Crime: ರಾಡ್‌ನಿಂದ ಹಲ್ಲೆ ಮಾಡಿ ಪತ್ನಿಯ ಬರ್ಬರ ಹತ್ಯೆ; ಆರೋಪಿ ಪತಿ ಪರಾರಿ

8-gangavathi

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

1-wqeqewqe

I.N.D.I.A ವಿಶ್ವಾಸಕ್ಕೆ ಪಡೆದು ಜಾರಿ ಗೊಳಿಸುತ್ತೇವೆ: 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

14

ಡ್ರೈವಿಂಗ್‌ ಸೀಟ್‌ನಲ್ಲಿ ಕೂತು ಎಕ್ಸಿಲೇಟರ್‌ ತುಳಿದ ಬಾಲಕ: ಕಾರು ಹರಿದು 5ರ ಮಗು ಮೃತ್ಯು

6-health

Health: ಗೌಟ್‌: ಹಾಗೆಂದರೇನು? ಕಾರಣ ಏನು? ನಿಯಂತ್ರಣ ಹೇಗೆ?

1-asasass

Bengal ನಲ್ಲಿ ಹಿಂದೂಗಳು ಎರಡನೇ ದರ್ಜೆಯ ಪ್ರಜೆಗಳಾಗಿದ್ದಾರೆ: ಪ್ರಧಾನಿ ಮೋದಿ ವಾಗ್ದಾಳಿ

Parameshwar

SIT ಪ್ರಜ್ವಲ್ ಕರೆತರಲು ವಿದೇಶಕ್ಕೆ ಹೋಗುವುದಿಲ್ಲ: ಡಾ.ಜಿ.ಪರಮೇಶ್ವರ್ ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwewqeqw

Bagalkote; ಕಾರಿಗೆ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ!

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

IFS ಪರೀಕ್ಷೆಯಲ್ಲಿ ದೇಶಕ್ಕೆ 42 ನೇ ರ‍್ಯಾಂಕ್ ಪಡೆದ ಅಕ್ಕಿಮರಡಿಯ ಪಾಂಡುರಂಗ ಸದಾಶಿವ ಕಂಬಳಿ

IFS ಪರೀಕ್ಷೆಯಲ್ಲಿ ದೇಶಕ್ಕೆ 42 ನೇ ರ‍್ಯಾಂಕ್ ಪಡೆದ ಅಕ್ಕಿಮರಡಿಯ ಪಾಂಡುರಂಗ ಸದಾಶಿವ ಕಂಬಳಿ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

15

Crime: ರಾಡ್‌ನಿಂದ ಹಲ್ಲೆ ಮಾಡಿ ಪತ್ನಿಯ ಬರ್ಬರ ಹತ್ಯೆ; ಆರೋಪಿ ಪತಿ ಪರಾರಿ

10-rain

Chikkamagaluru: ಗುಡುಗು ಸಹಿತ ಭಾರೀ ಗಾಳಿ-ಮಳೆ

9-sagara

Sagara: ಅಪಘಾತಕ್ಕೆ ಒಳಗಾದ ಅಂಬ್ಯುಲೆನ್ಸ್!

8-gangavathi

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

7-hand-hygien-day

World Hand Hygiene Day: ಸ್ವಚ್ಛ ಕೈಗಳ ಶಕ್ತಿ: ಕೈಗಳ ನೈರ್ಮಲ್ಯಕ್ಕೆ ಮಾರ್ಗದರ್ಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.