ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ಆಗಮನ: ಸಿದ್ಧತೆ ಸಭೆ ನಡೆಸಿದ ಸಿಎಂ


Team Udayavani, Jun 7, 2022, 6:57 PM IST

Untitled-1

ಬೆಂಗಳೂರು: ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಮೈಸೂರಿನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದು, ಮೈಸೂರು ಅರಮನೆ ಎದುರು 15 ಸಾವಿರ ಜನರು ಯೋಗ ಮಾಡಲಿದ್ದಾರೆ.

ಈ ಕುರಿತು ಕೈಗೊಂಡಿರುವ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ 15 ಸಾವಿರ ಯೋಗಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಜೂನ್ 13 ರೊಳಗೆ ಪೂರ್ಣಗೊಳಿಸುವಂತೆ ಮೈಸೂರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಈ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಧಾನ ಮಂತ್ರಿಗಳ ಕಚೇರಿ ಸೂಚಿಸಿದಂತೆ ಸಮಾಜದ ಎಲ್ಲ ವರ್ಗಗಳ ಜನರನ್ನೂ ಸೇರ್ಪಡೆಗೊಳಿಸುವಂತೆ ತಿಳಿಸಿದರು.

ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಸಾರಿಗೆ ಸೌಲಭ್ಯ, ಲಘು ಉಪಾಹಾರ ಕುಡಿಯುವ ನೀರು ಮತ್ತಿತರ ವ್ಯವಸ್ಥೆಗಳನ್ನು ಯಾವುದೇ ಲೋಪವಿಲ್ಲದಂತೆ ನಿರ್ವಹಿಸಬೇಕು. ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಸಮನ್ವಯ ವಹಿಸುವಂತೆ ಸೂಚಿಸಿದರು.

ಇದರೊಂದಿಗೆ ಕೇಂದ್ರ ಆಯುಷ್ ಸಚಿವಾಲಯವು ಯೋಗಕ್ಕೆ ಸಂಬಂಧಿಸಿದಂತೆ ವಸ್ತುಪ್ರದರ್ಶನವನ್ನು ಸಹ ಏರ್ಪಡಿಸಿದೆ. ಇದಕ್ಕೆ ಅಗತ್ಯ ಸಹಕಾರವನ್ನು ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಇದನ್ನೂ ಓದಿ: ತಸ್ತೀಕ್‌ ಮತ್ತು ವರ್ಷಾಸನ ಅನುದಾನದ ಬಳಕೆ ಸರಳೀಕರಣಗೊಳಿಸಲು ಮುಜರಾಯಿ ಇಲಾಖೆ ಅಧಿಕೃತ ಆದೇಶ

ಈ ಕಾರ್ಯಕ್ರಮದ ಯಶಸ್ಸಿಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯ ಕೋರ್ ಕಮಿಟಿ ಸೇರಿದಂತೆ ಒಟ್ಟು 14 ಸಮಿತಿಗಳನ್ನು ರಚಿಸಲಾಗಿದ್ದು, ಈ ಸಮಿತಿಗಳು ತಮ್ಮ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಸೂಚಿಸಿದರು.

ಪ್ರಧಾನಿಯವರ ಭೇಟಿ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆಯಲ್ಲಿ ಲೋಪವಾಗದಂತೆ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದ 75 ಪಾರಂಪರಿಕ ತಾಣಗಳಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯದ 5 ತಾಣಗಳಾದ ಮೈಸೂರು, ಹಳೇಬೀಡು, ಹಂಪಿ, ಪಟ್ಟದಕಲ್ ಹಾಗೂ ವಿಜಯಪುರದ ಗೋಲಗುಂಬಜ್ ಈ  ಕಾರ್ಯಕ್ರಮಕ್ಕೆ ಆಯ್ಕೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿನಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಹಳೇಬೀಡಿನಲ್ಲಿ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆ, ಹಂಪಿಯಲ್ಲಿ ಕಲ್ಲಿದ್ದಲು ಖಾತೆ ಸಚಿವ ಪ್ರಲ್ಹಾದ ಜೋಷಿ, ಪಟ್ಟದಕಲ್ಲಿನಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹಾಗೂ ವಿಜಯಪುರದ ಗೋಲಗುಂಬಜ್ ನಲ್ಲಿ ನವೀಕರಿಸಬಹುದಾದ ಇಂಧನ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಪಾಲ್ಗೊಳ್ಳಲಿದ್ದಾರೆ.

ಇದಲ್ಲದೆ ರಾಜ್ಯ ಮಟ್ಟದಲ್ಲಿ ರಾಜ್ಯದ 75 ಐತಿಹಾಸಿಕ ಸ್ಥಳಗಳಲ್ಲಿ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗುವುದು ಎಂದರು.

ಸಭೆಯಲ್ಲಿ ಸಚಿವರಾದ ಡಾ. ಕೆ. ಸುಧಾಕರ್, ಎಸ್.ಟಿ. ಸೋಮಶೇಖರ್, ರೇಷ್ಮೆ, ಯುವಸಬಲೀಕರಣ ಹಾಗೂ ಕ್ರೀಡಾ ಸಚಿವ ನಾರಾಯಣಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಯೋಜನೆ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Udupi Gang war; Did the failure of the beat system lead to the incident?

Udupi Gang war; ಬೀಟ್‌ ವ್ಯವಸ್ಥೆ ಲೋಪವೇ ಘಟನೆಗೆ ಕಾರಣವಾಯಿತೇ?

SUNಕನ್ನಡ ಜಾನಪದ ಚಿತ್ರಕ್ಕೆ ಲಾ ಸಿನೆಫ್ ಗೌರವ

ಕನ್ನಡ ಜಾನಪದ ಚಿತ್ರಕ್ಕೆ ಲಾ ಸಿನೆಫ್ ಗೌರವ

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

Pune-Bangalore ಹೊಸ ಹೆದ್ದಾರಿಗೆ ಚಾಲನೆ ನೀಡಲು ಸಿದ್ಧತೆ

Pune-Bangalore ಹೊಸ ಹೆದ್ದಾರಿಗೆ ಚಾಲನೆ ನೀಡಲು ಸಿದ್ಧತೆ

bjp-jdsವಿಧಾನಪರಿಷತ್‌ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ

ವಿಧಾನಪರಿಷತ್‌ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ

ಎಲ್ಲ ಠಾಣೆಗಳಲ್ಲಿಯೂ ಸೈಬರ್‌ ಪ್ರಕರಣ ದಾಖಲು

ಎಲ್ಲ ಠಾಣೆಗಳಲ್ಲಿಯೂ ಸೈಬರ್‌ ಪ್ರಕರಣ ದಾಖಲು

1-24-sunday

Daily Horoscope: ವ್ಯವಹಾರಸ್ಥರಿಗೆ ಅನಿರೀಕ್ಷಿತ ಮೂಲದಿಂದ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Gang war; Did the failure of the beat system lead to the incident?

Udupi Gang war; ಬೀಟ್‌ ವ್ಯವಸ್ಥೆ ಲೋಪವೇ ಘಟನೆಗೆ ಕಾರಣವಾಯಿತೇ?

bjp-jdsವಿಧಾನಪರಿಷತ್‌ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ

ವಿಧಾನಪರಿಷತ್‌ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ

ಸಿನೆಮಾ ತಾರೆಯರಿಗೆ ಒತ್ತಡ ಹೇರಬೇಡಿ: ರವಿಚಂದ್ರನ್‌

ಸಿನೆಮಾ ತಾರೆಯರಿಗೆ ಒತ್ತಡ ಹೇರಬೇಡಿ: ರವಿಚಂದ್ರನ್‌

41

MLC Election: ಮೇಲ್ಮನೆಯಲ್ಲಿ ಏಳು ಸ್ಥಾನಗಳು ಕಾಂಗ್ರೆಸ್‌ನಲ್ಲಿ 70 ಆಕಾಂಕ್ಷಿಗಳು

Ultrasound room: ಅಲ್ಟ್ರಾಸೌಂಡ್‌ ಕೊಠಡಿಗೆ ಗರ್ಭಿಣಿ ಹೊರತು ಅನ್ಯರಿಗೆ ಪ್ರವೇಶವಿಲ್ಲ

Ultrasound room: ಅಲ್ಟ್ರಾಸೌಂಡ್‌ ಕೊಠಡಿಗೆ ಗರ್ಭಿಣಿ ಹೊರತು ಅನ್ಯರಿಗೆ ಪ್ರವೇಶವಿಲ್ಲ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Udupi Gang war; Did the failure of the beat system lead to the incident?

Udupi Gang war; ಬೀಟ್‌ ವ್ಯವಸ್ಥೆ ಲೋಪವೇ ಘಟನೆಗೆ ಕಾರಣವಾಯಿತೇ?

SUNಕನ್ನಡ ಜಾನಪದ ಚಿತ್ರಕ್ಕೆ ಲಾ ಸಿನೆಫ್ ಗೌರವ

ಕನ್ನಡ ಜಾನಪದ ಚಿತ್ರಕ್ಕೆ ಲಾ ಸಿನೆಫ್ ಗೌರವ

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

Pune-Bangalore ಹೊಸ ಹೆದ್ದಾರಿಗೆ ಚಾಲನೆ ನೀಡಲು ಸಿದ್ಧತೆ

Pune-Bangalore ಹೊಸ ಹೆದ್ದಾರಿಗೆ ಚಾಲನೆ ನೀಡಲು ಸಿದ್ಧತೆ

bjp-jdsವಿಧಾನಪರಿಷತ್‌ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ

ವಿಧಾನಪರಿಷತ್‌ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.