ವಿಜಯಪುರ : ಉಪಹಾರ ಸೇವಿಸಿದ ವಸತಿ ಶಾಲೆಯ 25 ಬಾಲಕಿಯರು ಅಸ್ವಸ್ಥ : ಆಸ್ಪತ್ರೆಗೆ ದಾಖಲು
Team Udayavani, Jun 7, 2022, 10:31 PM IST
ವಿಜಯಪುರ : ಉಪಾಹಾರ ಸೇವಿಸಿದ ಸರ್ಕಾರಿ ವಸತಿ ಶಾಲೆಯ ಇಪ್ಪತ್ತೈದು ವಿದ್ಯಾರ್ಥಿನಿಯರು ವಾಂತಿ- ಬೇಧಿಯಿಂದ ಅಸ್ವಸ್ಥರಾದ ಘಟನೆ ವರದಿಯಾಗಿದೆ.
ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ತಡವಲಗಾ ಗ್ರಾಮದಲ್ಲಿ ಘಟನೆ ತಡವಲಗಾ ಗ್ರಾಮದ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ಶಾಲೆಯಲ್ಲಿ ಜರುಗಿದೆ. ಮಂಗಳವಾರ ಬೆಳಿಗ್ಗೆ ಉಪಾಹಾರದಲ್ಲಿ ಅವಲಕ್ಕಿ ಸೇವಿಸಿದ ಬಳಿಕ ಅಸ್ವಸ್ಥರಾಗಿದ್ದಾರೆ. ವಿದ್ಯಾರ್ಥಿನಿಯರು ಸೇವಿಸಿದ ಆಹಾರದಲ್ಲಿ ವಿಷಯುಕ್ತ ಪದಾರ್ಥ ಸೇರಿರುವ ಸಾಧ್ಯತೆಯಿದ್ದು ಇದರಿಂದಲೇ ಸಮಸ್ಯೆಯಾಗಿದೆ ಎಂದು ಶಂಕಿಸಲಾಗಿದೆ.
ತಡವಲಗಾ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ಶಾಲೆಯ 25 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥ ಮಕ್ಕಳನ್ನು ಕೂಡಲೇ ತಡವಲಗಾ ಸಮುದಾಯದ ಆರೋಗ್ಯ ಕೇಂದ್ರಕ್ಕೆ ಸಾಗಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಚಿಕಿತ್ಸೆ ಪಡೆದಿರುವ ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ಅಪಾಯದಿಂದ ಪಾರಾಗಿದ್ದಾರೆ ವಿಷಯ ತಿಳಿದ ಇಂಡಿ ಬಿಇಒ ವಸಂತ ರಾಠೋಡ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ್ದಾರೆ.
ಮತ್ತೊಂದೆಡೆ ಮಕ್ಕಳ ಪಾಲಕರು ವಿಷಯ ತಿಳಿದು ಆತಂಕದಿಂದ ಆಸ್ಪತ್ರೆಯತ್ತ ಧಾವಿಸಿ, ಮಕ್ಕಳ ಆರೈಕೆಯಲ್ಲಿ ತೊಡಗಿದ್ದಾರೆ.
ಇದನ್ನೂ ಓದಿ : ರವನೀತ್ ಸಿಂಗ್ ಕಾಂಗ್ರೆಸ್ ಸಂಸದನಿಗೆ ಕೊಲೆ ಬೆದರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ