ಮೊಬೈಲ್ ಗೇಮ್ ಜಟಾಪಟಿ; ತಾಯಿಯನ್ನೇ ಗುಂಡಿಟ್ಟು ಕೊಂದು, ಶವ ಅಡಗಿಸಿಟ್ಟ ಮಗ!

ತಾಯಿಯ ಶವವನ್ನು ಕೋಣೆಯೊಂದರಲ್ಲಿ ಅಡಗಿಸಿಟ್ಟು ಎರಡು ದಿನಗಳ ಕಾಲ ತನ್ನ 9 ವರ್ಷದ ಸಹೋದರಿ ಜತೆ ಕಳೆದಿದ್ದ.

Team Udayavani, Jun 8, 2022, 1:06 PM IST

ಮೊಬೈಲ್ ಗೇಮ್ ಜಟಾಪಟಿ; ತಾಯಿಯನ್ನೇ ಗುಂಡಿಟ್ಟು ಕೊಂದು, ಶವ ಅಡಗಿಸಿಟ್ಟ ಮಗ!

ಲಕ್ನೋ: ಮೊಬೈಲ್ ನಲ್ಲಿ ಗೇಮ್ ಆಡುತ್ತಿದ್ದುದನ್ನು ನಿಲ್ಲಿಸಿದ್ದಕ್ಕೆ ಕೋಪಗೊಂಡ 16 ವರ್ಷದ ಬಾಲಕ ತನ್ನ ತಾಯಿಯನ್ನೇ ಗುಂಡಿಟ್ಟು ಕೊಂದು, ಆಕೆಯ ಶವವನ್ನು ಮನೆಯಲ್ಲೇ ಎರಡು ದಿನಗಳ ಕಾಲ ಅಡಗಿಸಿಟ್ಟ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಟ್ವಿಸ್ಟ್:CM ಪಿಣರಾಯಿ, ಪತ್ನಿ,ಪುತ್ರಿಯೂ ಶಾಮೀಲು; ಸ್ವಪ್ನಾ

ಪೊಲೀಸರ ಮಾಹಿತಿ ಪ್ರಕಾರ, ಈ ಬಾಲಕ ಭಾನುವಾರ ಬೆಳಗ್ಗೆ ತಂದೆಯ ಪರವಾನಿಗೆ ಹೊಂದಿದ್ದ ಪಿಸ್ತೂಲ್ ನಲ್ಲಿ ತಾಯಿಯ ಹಣೆಗೆ ಗುಂಡಿಟ್ಟು ಹತ್ಯೆಗೈದಿರುವುದಾಗಿ ತಿಳಿಸಿದ್ದಾರೆ. ತಾಯಿಯ ಶವವನ್ನು ಕೋಣೆಯೊಂದರಲ್ಲಿ ಅಡಗಿಸಿಟ್ಟು ಎರಡು ದಿನಗಳ ಕಾಲ ತನ್ನ 9 ವರ್ಷದ ಸಹೋದರಿ ಜತೆ ಕಳೆದಿದ್ದ. ಅಷ್ಟೇ ಅಲ್ಲ ಕೊಳೆತ ವಾಸನೆ ಬರದಿರುವಂತೆ ರೂಮ್ ಫ್ರೆಶ್ನರ್ ಅನ್ನು ಬಳಸಿದ್ದ ಎಂದು ಪೊಲೀಸರು ವಿವರಿಸಿದ್ದಾರೆ.

ಘಟನೆ ಬಗ್ಗೆ ಯಾರಿಗಾದರೂ ಹೇಳಿದಲ್ಲಿ ಕೊಲ್ಲುವುದಾಗಿ ಸಹೋದರ ಬೆದರಿಕೆ ಹಾಕಿರುವುದಾಗಿ ಸಹೋದರಿ ಪೊಲೀಸರಿಗೆ ವಿಚಾರಣೆ ವೇಳೆ ತಿಳಿಸಿದ್ದಾಳೆ. ಮಂಗಳವಾರ ಶವ ಕೊಳೆತ ವಾಸನೆ ಬರಲಾರಂಭಿಸಿದ ನಂತರ ಬಾಲಕ ತನ್ನ ತಂದೆಗೆ ಕೊಲೆಯಾದ ಘಟನೆ ಬಗ್ಗೆ ತಿಳಿಸಿದ್ದ. ನಂತರ ಆತನ ತಂದೆ ಸ್ಥಳೀಯರಿಗೆ ಕರೆ ತಿಳಿಸಿದ್ದು, ಅವರು ಪೊಲೀಸರಿಗೆ ಮಾಹಿತಿ ನೀಡಿರುವುದಾಗಿ ಹೆಚ್ಚುವರಿ ಡೆಪ್ಯುಟಿ ಕಮಿಷನರ್ ಎಸ್ ಎಂ ಖ್ವಾಸಿಂ ಅಬ್ದಿ ತಿಳಿಸಿದ್ದಾರೆ.

ಬಾಲಕನ ತಂದೆ ಯೋಧರಾಗಿದ್ದು, ಅವರು ಪ್ರಸ್ತುತ ಪಶ್ಚಿಮಬಂಗಾಳದಲ್ಲಿ ಕರ್ತವ್ಯದಲ್ಲಿದ್ದಾರೆ. ಆರಂಭದಲ್ಲಿ ಮಗ ಘಟನೆ ಬಗ್ಗೆ ತಂದೆಗೆ ಕಟ್ಟುಕಥೆ ಹೇಳಿದ್ದ. ಮನೆಗೆ ಬಂದಿದ್ದ ಎಲೆಕ್ಟ್ರಿಷಿಯನ್ ತಾಯಿಯನ್ನು ಗುಂಡಿಟ್ಟು ಕೊಂದಿರುವುದಾಗಿ ತಿಳಿಸಿದ್ದ.

ಪೊಲೀಸರಿಗೂ ಕೂಡಾ ಇದೇ ಕಥೆಯನ್ನು ಹೇಳಿದ್ದ. ಆದರೆ ತೀವ್ರ ವಿಚಾರಣೆ ನಡೆಸಿದಾಗ ಬಾಲಕನ ಕಟ್ಟುಕಥೆ ಬಯಲಾಗಿದ್ದು, ತಾನೇ ತಾಯಿಯನ್ನು ಗುಂಡಿಟ್ಟು ಹತ್ಯೆಗೈದಿರುವುದನ್ನು ಒಪ್ಪಿಕೊಂಡಿರುವುದಾಗಿ ಖ್ವಾಸಿಂ ತಿಳಿಸಿದ್ದಾರೆ.

ಟಾಪ್ ನ್ಯೂಸ್

“ಅನ್ಯ ರಾಜ್ಯಕ್ಕೆ ಹೂಡಿಕೆ: ಕಾಂಗ್ರೆಸ್‌ ದುರಾಡಳಿತ’; ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

“ಅನ್ಯ ರಾಜ್ಯಕ್ಕೆ ಹೂಡಿಕೆ: ಕಾಂಗ್ರೆಸ್‌ ದುರಾಡಳಿತ’; ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

1-qweqwewqe

Cyclone ; ಪಶ್ಚಿಮ ಬಂಗಾಳದಲ್ಲಿ ರೆಡ್ ಅಲರ್ಟ್: ಭಾನುವಾರ ರಾತ್ರಿ ಅಪ್ಪಳಿಸಲಿರುವ ಚಂಡಮಾರುತ

`ಹವಾ ಮೆಂಟೇನ್’ಗೆ ನಕಲಿ ಐಬಿ ವೇಷ ; ಪೊಲೀಸರ ಅತಿಥಿಯಾದ ಯುವಕ

Fake ID Card; `ಹವಾ ಮೆಂಟೇನ್’ಗೆ ನಕಲಿ ಐಬಿ ವೇಷ ; ಪೊಲೀಸರ ಅತಿಥಿಯಾದ ಯುವಕ

Elephant Survey ನಾಗರಹೊಳೆ ಉದ್ಯಾನವನದಲ್ಲಿ 2ನೇ ದಿನದ ಆನೆ ಗಣತಿ ಯಶಸ್ವಿ

Elephant Survey ನಾಗರಹೊಳೆ ಉದ್ಯಾನವನದಲ್ಲಿ 2ನೇ ದಿನದ ಆನೆ ಗಣತಿ ಯಶಸ್ವಿ

D. K. Shivakumar ಅಪಪ್ರಚಾರ ಮಾಡುವವರಿಗೆ ನಾಚಿಕೆಯಾಗಬೇಕು

D. K. Shivakumar ಅಪಪ್ರಚಾರ ಮಾಡುವವರಿಗೆ ನಾಚಿಕೆಯಾಗಬೇಕು

ISREL

Rafah ಕಾರ್ಯಾಚರಣೆ ಅಂತ್ಯಗೊಳಿಸಲು ಇಸ್ರೇಲ್‌ಗೆ ಯುಎನ್ ನ್ಯಾಯಾಲಯದ ಆದೇಶ

Vatal Nagaraj ಕರ್ನಾಟಕ-ತಮಿಳುನಾಡು ಸರ್ಕಾರ ಬೀಗರು

Vatal Nagaraj ಕರ್ನಾಟಕ-ತಮಿಳುನಾಡು ಸರ್ಕಾರ ಬೀಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewqe

Cyclone ; ಪಶ್ಚಿಮ ಬಂಗಾಳದಲ್ಲಿ ರೆಡ್ ಅಲರ್ಟ್: ಭಾನುವಾರ ರಾತ್ರಿ ಅಪ್ಪಳಿಸಲಿರುವ ಚಂಡಮಾರುತ

1-medha-Patkar

V K Saxena ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಕೇಸ್: ಮೇಧಾ ಪಾಟ್ಕರ್ ದೋಷಿ

Prajwal Revanna

MEA action; ಪ್ರಜ್ವಲ್ ಗೆ ಶೋಕಾಸ್ ನೋಟಿಸ್ ಕಳುಹಿಸಿದ ವಿದೇಶಾಂಗ ಸಚಿವಾಲಯ

Anwarul Azim Anwar; ಹನಿ ಟ್ರ್ಯಾಪ್ ಮಾಡಿ ಬಾಂಗ್ಲಾ ಸಂಸದನ ಹತ್ಯೆ; ಢಾಕಾದಲ್ಲಿ ಮಹಿಳೆ ಬಂಧನ

Anwarul Azim Anwar; ಹನಿ ಟ್ರ್ಯಾಪ್ ಮಾಡಿ ಬಾಂಗ್ಲಾ ಸಂಸದನ ಹತ್ಯೆ; ಢಾಕಾದಲ್ಲಿ ಮಹಿಳೆ ಬಂಧನ

10km ದೂರದಲ್ಲಿರುವ ಪ್ರವಾಸಿತಾಣಕ್ಕೆ ಕರೆದೊಯ್ಯಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಬಾಲಕಿ

10km ದೂರದಲ್ಲಿರುವ ಪ್ರವಾಸಿತಾಣಕ್ಕೆ ಕರೆದೊಯ್ಯಲಿಲ್ಲವೆಂದು ನೇಣಿಗೆ ಶರಣಾದ 10 ವರ್ಷದ ಬಾಲಕಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

“ಅನ್ಯ ರಾಜ್ಯಕ್ಕೆ ಹೂಡಿಕೆ: ಕಾಂಗ್ರೆಸ್‌ ದುರಾಡಳಿತ’; ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

“ಅನ್ಯ ರಾಜ್ಯಕ್ಕೆ ಹೂಡಿಕೆ: ಕಾಂಗ್ರೆಸ್‌ ದುರಾಡಳಿತ’; ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

1-qweqwewqe

Cyclone ; ಪಶ್ಚಿಮ ಬಂಗಾಳದಲ್ಲಿ ರೆಡ್ ಅಲರ್ಟ್: ಭಾನುವಾರ ರಾತ್ರಿ ಅಪ್ಪಳಿಸಲಿರುವ ಚಂಡಮಾರುತ

`ಹವಾ ಮೆಂಟೇನ್’ಗೆ ನಕಲಿ ಐಬಿ ವೇಷ ; ಪೊಲೀಸರ ಅತಿಥಿಯಾದ ಯುವಕ

Fake ID Card; `ಹವಾ ಮೆಂಟೇನ್’ಗೆ ನಕಲಿ ಐಬಿ ವೇಷ ; ಪೊಲೀಸರ ಅತಿಥಿಯಾದ ಯುವಕ

Elephant Survey ನಾಗರಹೊಳೆ ಉದ್ಯಾನವನದಲ್ಲಿ 2ನೇ ದಿನದ ಆನೆ ಗಣತಿ ಯಶಸ್ವಿ

Elephant Survey ನಾಗರಹೊಳೆ ಉದ್ಯಾನವನದಲ್ಲಿ 2ನೇ ದಿನದ ಆನೆ ಗಣತಿ ಯಶಸ್ವಿ

D. K. Shivakumar ಅಪಪ್ರಚಾರ ಮಾಡುವವರಿಗೆ ನಾಚಿಕೆಯಾಗಬೇಕು

D. K. Shivakumar ಅಪಪ್ರಚಾರ ಮಾಡುವವರಿಗೆ ನಾಚಿಕೆಯಾಗಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.