ಅನಾಥವಾದ ಕಪ್ಪು ಶಿಲಾ ಶಾಸನ


Team Udayavani, Jun 8, 2022, 4:18 PM IST

17maski

ಮಾನ್ವಿ: ಸಾರ್ವಜನಿಕರು, ಪುರಾತತ್ವ ಇಲಾಖೆ ಹಾಗೂ ತಾಲೂಕು ಆಡಳಿತದ ಅವಕೃಪೆಯಿಂದ ಕಪ್ಪು ಶಾಸನವೊಂದು ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದಿದೆ.

ಈ ಶಾಸನವು 5 ಅಡಿ ಎತ್ತರ ಒಂದೂವರೆ ಅಡಿ ಅಗಲ ಇದ್ದು ಚೌಕಾಕೃತಿ ಹೊಂದಿದೆ. ಶಾಸನದ ಮೂರೂ ಕಡೆಯಲ್ಲಿ ಕನ್ನಡ ಲಿಪಿ ಬರೆಯಲಾಗಿದೆ.

ಈ ಶಾಸನವು ಅಪ್ರಕಟಿತ ಶಾಸನವಾಗಿದೆ. ಅಶುದ್ಧ ಕನ್ನಡ ಭಾಷೆಯಲ್ಲಿದ್ದು 64 ಸಾಲುಗಳಿಂದ ಕೂಡಿದೆ. ಆರಂಭದಲ್ಲಿ ಶಾಸನದ ಕಾಲ ತಿಳಿಸಲಾಗಿದ್ದು ಶಾಲ್ಪದಿನಾಮ ಸಂವತ್ಸರದ ಕಾರ್ತಿಕ ಬಹುಳ ಪಂಚಮಿಯ ಆದಿತ್ಯವಾರದಂದು ಕ್ರಿ.ಶ.1751ರಿಂದ 1761ರ ಕಾಲಘಟ್ಟದಲ್ಲಿ ಸಲಾಬತ್‌ ಖಾನನೆಂಬ ಆಸಫ್‌ಜಾಹಿ ವಂಶದ ಸುಲ್ತಾನನನ್ನು ಹೈದ್ರಾಬಾದ್‌ ಪ್ರಾಂತ್ಯವನ್ನು ಆಳ್ವಿಕೆ ಮಾಡುತ್ತಿರುವಾಗ ಮೊಸಗೆ (ಮಸ್ಕಿ) ಸೀಮೆಯ ಮಾನುವೆ (ಮಾನ್ವಿ) ಸ್ಥಳದಲ್ಲಿ ಕೆರೆ ನಿರ್ಮಾಣ ಸಮಯದಲ್ಲಿ ಈ ಶಾಸನ ಬರೆಸಲಾಗಿದೆ.

ಶಾಸನದ ಎರಡನೇ ಬದಿಯಲ್ಲಿ ಮಾನುವೆ(ಮಾನ್ವಿ) ಸ್ಥಳದ ಬೀದಿ ಮೆರವಣಿಗೆ ಸಂದರ್ಭದಲ್ಲಿ ಬೀದಿ ಮೆರವಣಿಗೆಗೆ ತೊಡಕು ಇದ್ದುದರಿಂದ ಮಸೀದಿ ಸ್ಥಳಕ್ಕೆ ಒಡಂಬಡಿಕೆ ಪ್ರಕಾರ ಸ್ಥಳ ಬಿಟ್ಟು ಬಂದಿದ್ದರಿಂದ ಸಾಲಗುಂದ ಮಹಾನಾಡಿನ ಹಟಗಾರ, ಗೌಡ ಪ್ರಜೆಗಳಲ್ಲಿ ವಿನಂತಿಸಿಕೊಂಡು ಸ್ಥಳವನ್ನು ಮಾನ್ಯ ಮಾಡಿಸಿಕೊಂಡಿದ್ದ ಬಗ್ಗೆ ತಿಳಿಸುತ್ತದೆ. ಇದು ಸೂರ್ಯ-ಚಂದ್ರ ಇರುವವರೆಗೆ ಚಾಲ್ತಿಯಲ್ಲಿರುತ್ತದೆ ಹಾಗೂ ತಪ್ಪಿದ್ದಲ್ಲಿ ದಂಡ ತೆರಬೇಕಾಗುತ್ತದೆ ಎಂದು ತಿಳಿಸುತ್ತದೆ. ಮೂರನೇ ಬದಿಯಲ್ಲಿ ಅಂದಿನ ದಿನಗಳಲ್ಲಿ ಇದ್ದ ಊರಿನ ಪ್ರಮುಖರ ಹೆಸರುಗಳು, ಸಾಕ್ಷಿಗಳ ಹೆಸರುಗಳನ್ನು ಬರೆಯಲಾಗಿದೆ ಎನ್ನುತ್ತಾರೆ ಸಂಶೋಧಕ ಚನ್ನಬಸಪ್ಪ ಮಲ್ಕಂದಿನ್ನಿ.

ಪ್ರಾಚೀನ ಇತಿಹಾಸ ತಿಳಿಸುವ ಅನೇಕ ಪುರಾತನ ಕಲ್ಯಾಣಿಗಳು, ಶಾಸನಗಳು, ವೀರಗಲ್ಲುಗಳು, ಮಾಸ್ತಿಗಲ್ಲುಗಳು ಇದ್ದು ಅವುಗಳನ್ನು ಸರಿಯಾದ ರೀತಿಯಲ್ಲಿ ಸಂರಕ್ಷಿಸಿ ಉಳಿಸಬೇಕಾಗಿದೆ.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.