ಮುಂದಿನ ಸಿಎಂ ಘೋಷಣೆಗೆ ಸಮ್ಮತಿಯಿಲ್ಲ: ವಿಜಯೇಂದ್ರ
Team Udayavani, Jun 8, 2022, 11:38 PM IST
ಹಾಸನ: ರಾಜಕಾರಣದಲ್ಲಿ ನಾನಿನ್ನೂ ಅಂಬೆಗಾಲಿಡುತ್ತಿದ್ದೇನೆ. ನಾನು ಮುಂದಿನ ಮುಖ್ಯಮಂತ್ರಿ ಎಂಬ ಘೋಷಣೆಗಳಿಗೆ ನನ್ನ ಸಮ್ಮತಿ ಇಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದರು.
ನಗರದ ಹೊಸಕೊಪ್ಪಲಿನಲ್ಲಿರುವ ಎಚ್ಎಂಟಿ ಕಲ್ಯಾಣ ಮಂಟಪದಲ್ಲಿ ಬುಧವಾರ ಏರ್ಪಡಿಸಿದ್ದ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಪರ ನಡೆದ ಪ್ರಚಾರ ಸಭೆಯಲ್ಲೂ ಕೆಲವು ಕಾರ್ಯಕರ್ತರು “ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ’ ಎಂದು ಘೋಷಣೆ ಕೂಗಿದರು.
ನಾನು ಇನ್ನೂ ಶಾಸಕನೇ ಆಗಿಲ್ಲ. ಮುಖ್ಯಮಂತ್ರಿಯಾಗುವೆ ಎನ್ನುವು ದರಲ್ಲಿ ಅರ್ಥವಿಲ್ಲ. ಅಂತಹ ಆಸೆ ಯನ್ನೂ ಇಟ್ಟುಕೊಂಡಿಲ್ಲ. ಈಗ ಪಕ್ಷದ ಆದೇಶದಂತೆ ಸಂಘಟನೆಗೆ ಹೆಚ್ಚು ಒತ್ತು ಕೊಟ್ಟು ದುಡಿಯುತ್ತೇನೆ. ಪಕ್ಷದ ನಾಯಕರ ತೀರ್ಮಾ ನದಂತೆ ಹುದ್ದೆಗಳು ದೊರೆಯಲಿವೆ.
ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ನಾನು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂಬುದನ್ನೂ ಪಕ್ಷ ತೀರ್ಮಾನ ಮಾಡಲಿದೆ. ಅದನ್ನು ಪಾಲಿಸುವುದಷ್ಟೆ ನನ್ನ ಕೆಲಸ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holenarasipura Case: ಅತ್ಯಾಚಾರ ಕೇಸ್ನಲ್ಲಿ ದೇವರಾಜೇಗೌಡ ಬಂಧನ
Hasana: “ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ
Prajwal Revanna Case ಕಾರ್ತಿಕ್ ನಿರೀಕ್ಷಣ ಜಾಮೀನು ಅರ್ಜಿ ವಜಾ
Prajwal Revanna Case; ಪೆನ್ಡ್ರೈವ್ ಆರೋಪಿಗಳ ಜತೆ ಶ್ರೇಯಸ್: ಫೋಟೊ ವೈರಲ್
KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್