ನೀಟ್‌ ಕೌನ್ಸೆಲಿಂಗ್‌: ಸುಪ್ರೀಂ ತರಾಟೆ : 1,456 ಸೀಟು ಖಾಲಿ ಇರುವುದಕ್ಕೆ ಆಕ್ಷೇಪ


Team Udayavani, Jun 9, 2022, 6:35 AM IST

thumb 6

ಹೊಸದಿಲ್ಲಿ: 2021ನೇ ಸಾಲಿನ ನೀಟ್‌ ಪಿಜಿ ಕೌನ್ಸೆಲಿಂಗ್‌ನಲ್ಲಿ 1,456 ಸೀಟುಗಳನ್ನು ಖಾಲಿ ಬಿಟ್ಟ ವಿಚಾರದಲ್ಲಿ ವೈದ್ಯಕೀಯ ಕೌನ್ಸೆಲಿಂಗ್‌ ಸಮಿತಿ (ಎಂಸಿಸಿ)ಯನ್ನು ಸುಪ್ರೀಂ ಕೋರ್ಟ್‌ ಬುಧವಾರ ತರಾಟೆಗೆ ತೆಗೆದುಕೊಂಡಿದೆ.

ಖಾಲಿ ಇರುವ ಸೀಟುಗಳನ್ನು ಸ್ಟ್ರೇ ಸುತ್ತಿನಲ್ಲಿ ಹಂಚಿಕೆ ಮಾಡಬೇಕೆಂದು ಕೋರಿ ಕೆಲವು ನೀಟ್‌ ಅಭ್ಯರ್ಥಿಗಳು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ರಜಾಕಾಲದ ನ್ಯಾಯಪೀಠ ದಲ್ಲಿರುವ ನ್ಯಾ| ಎಂ.ಆರ್‌. ಶಾ, ನ್ಯಾ| ಅನಿರುದ್ಧ್ ಬೋಸ್‌ ಅವರುಳ್ಳ ನ್ಯಾಯಪೀಠ ವಿಚಾರಣೆ ನಡೆಸಿ, ಸರಕಾರದ ನಡೆಗೆ ಆಕ್ಷೇಪ ವ್ಯಕ್ತಪಡಿಸಿದೆ.

“ಎಂಸಿಸಿಯ ಈ ಕ್ರಮದಿಂದಾಗಿ ಅಭ್ಯರ್ಥಿಗಳಿಗೆ ತೊಂದರೆಯಾಗುವುದಷ್ಟೆ ಅಲ್ಲದೆ, ದೇಶದಲ್ಲಿ ವೈದ್ಯರ ಕೊರತೆ ಉಂಟಾಗಲಿದೆ. ಒಂದೇ ಒಂದು ಸೀಟನ್ನು ಖಾಲಿ ಉಳಿಯದಂತೆ ನೋಡಿಕೊಳ್ಳುವುದು ಎಂಸಿಸಿ ಜವಾಬ್ದಾರಿ. ಆದರೆ ಪ್ರತೀ ಸುತ್ತಿನ ಕೌನ್ಸೆಲಿಂಗ್‌ನಲ್ಲೂ ಇದೇ ರೀತಿಯಾಗುತ್ತಿದೆ’ ಎಂದು ನ್ಯಾಯಾಲಯ ಬೇಸರ ವ್ಯಕ್ತಪಡಿ ಸಿದೆ. ಹಾಗೆಯೇ 24 ಗಂಟೆಗಳೊಳಗಾಗಿ ಖಾಲಿ ಇರುವ ಸೀಟುಗಳ ಸಂಪೂರ್ಣ ಮಾಹಿತಿ ನೀಡಬೇಕು ಹಾಗೂ ಸೀಟುಗಳನ್ನು ಭರ್ತಿ ಮಾಡದೇ ಇರುವುದಕ್ಕೆ ಇರುವ ಸೂಕ್ತ ಕಾರಣಗಳನ್ನು ಪಟ್ಟಿ ಮಾಡಿ ಕೊಡಬೇಕು ಎಂದು ಕೇಂದ್ರ ಸರಕಾರ ಹಾಗೂ ಎಂಸಿಸಿಗೆ ನ್ಯಾಯಪೀಠ ಸೂಚನೆ ನೀಡಿದೆ.

ಸೀಟು ಹಂಚಿಕೆಯ ಎಲ್ಲಾ ಸುತ್ತುಗಳು ಮುಗಿದು, ಅನಂತರ ಉಳಿಯುವ ಸೀಟು ಗಳಿಗೆ ಮಾಪ್‌-ಅಪ್‌ ಸುತ್ತಿನ ಕೌನ್ಸೆಲಿಂಗ್‌ ಮೂಲಕ ಸೀಟು ವಿತರಣೆ ಮಾಡಲಾಗು ತ್ತದೆ. ಅದರಲ್ಲಿಯೂ ಮಿಕ್ಕುವ ಸೀಟು ಗಳನ್ನು ಸ್ಟ್ರೇ ಸುತ್ತಿನ ಕೌನ್ಸೆಲಿಂಗ್‌ ಮೂಲಕ ನೀಡ ಬೇಕೆಂದು ಅಭ್ಯರ್ಥಿಗಳ ಆಗ್ರಹವಾಗಿದೆ.

ಪರಿಹಾರಕ್ಕೆ ಆದೇಶಿಸುತ್ತೇವೆ ಹುಷಾರ್‌: ವಿದ್ಯಾರ್ಥಿಗಳಿಗೆ ಬಾಕಿ ಉಳಿದಿರುವ ಸೀಟನ್ನು ಹಂಚಿಕೆ ಮಾಡದಿದ್ದರೆ, ಸೀಟುಗ ಳನ್ನು ಹಂಚಿಕೆ ಕಡ್ಡಾಯವಾಗಿ ಮಾಡ ಲೇಬೇಕು ಹಾಗೂ ವಿದ್ಯಾರ್ಥಿಗಳಿಗೆ ಆರ್ಥಿಕ ಪರಿಹಾರ ನೀಡಬೇಕೆಂದು ತಾನೇ ಆದೇಶ ನೀಡುವುದಾಗಿ ನ್ಯಾಯಪೀಠ ತಿಳಿಸಿದೆ. “ಒಂದೇ ಒಂದು ಸೀಟು ಖಾಲಿ ಬಿಡಕೂ ಡದು. ಹಾಗೆ ಖಾಲಿ ಬಿಡದಂತೆ ನೋಡಿಕೊ ಳ್ಳುವುದು ನಿಮ್ಮ ಜವಾಬ್ದಾರಿ’ ಎಂದಿದೆ.

ಟಾಪ್ ನ್ಯೂಸ್

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

kejriwal

AAP ವಿದೇಶಿ ದೇಣಿಗೆ: ED ದೂರು ಪಿತೂರಿ ಎಂದ ಕೇಜ್ರಿವಾಲ್‌ ಪಕ್ಷ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.