ಬೆಳೆ ವಿಮೆ ಪಾವತಿ ಸಮಸ್ಯೆಗೆ ಕೊನೆ ಎಂದು?

ಒಂದಕ್ಕಿಂತ ಹೆಚ್ಚು ಜಮೀನುಳ್ಳ ರೈತರ ಬೆಳೆ ವಿಮೆ ಪಾವತಿಗೆ ಪ್ರಾಬ್ಲಂ 

Team Udayavani, Jun 9, 2022, 11:57 AM IST

10

ತೆಲಸಂಗ: ಮುಂಗಾರು ಹಂಗಾಮಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ಆನ್‌ ಲೈನ್‌ ಅರ್ಜಿ ಹಾಕುವಾಗ ಉಂಟಾಗಿದ್ದ ಸಮಸ್ಯೆ ಪರಿಹಾರವಾಗಿದ್ದಕ್ಕೆ ರೈತರು ಸಂತಸ ವ್ಯಕ್ತಪಡಿಸಿದ್ದು, ಆದರೆ ಒಂದಕ್ಕಿಂತ ಹೆಚ್ಚು ಖಾತೆ ಹೊಂದಿದ ಬೆಳೆಗಾರರಿಗೆ ಮತ್ತೂಂದು ಸಮಸ್ಯೆ ಎದುರಾಗಿದೆ.

ಪ್ರಸಕ್ತ ವರ್ಷ ಮುಂಗಾರು ಹಂಗಾಮಿಗೆ ಬೆಳೆ ವಿಮೆ ಯೋಜನೆಯ ಆನ್‌ಲೈನ್‌ ಅರ್ಜಿ ಆ್ಯಪ್‌ ಮರುವಿನ್ಯಾಸಗೊಳಿಸಿದ್ದರಿಂದ ರೈತರು ವಿಮೆ ಭರಿಸಲು ಪರದಾಡುವಂತಾಗಿತ್ತು. ಪಹಣಿ ಪತ್ರದಲ್ಲಿನ ಹೆಸರು, ಆಧಾರ ಕಾರ್ಡ್‌ಲ್ಲಿನ ಹೆಸರು ತಿರುವು ಮುರುವಾಗಿದ್ದರೂ ವಿಮೆ ಅರ್ಜಿ ತಿರಸ್ಕಾರಗೊಳ್ಳುತ್ತಿತ್ತು. ಬುಧವಾರ ಮಧ್ಯಾಹ್ನದ ಹೊತ್ತಿಗೆ ಅಧಿಕಾರಿಗಳು ಸಮಸ್ಯೆ ಪರಿಹರಿಸಿದ್ದು, ಎಲ್ಲ ರೈತರು ವಿಮೆ ಪಾವತಿಸಬಹುದಾಗಿದೆ. ಆದರೆ ಇದೀಗ ಅದೇ ಆ್ಯಪ್‌ಲ್ಲಿ ಮತ್ತೂಂದು ಸಮಸ್ಯೆ ಎದುರಾಗಿದೆ.

ಏನದು ಸಮಸ್ಯೆ: ಒಬ್ಬ ರೈತ ಬೇರೆ ಬೇರೆ ಸರ್ವೇ ನಂ. ನ ಒಂದಕ್ಕಿಂತ ಹೆಚ್ಚು ಭೂಮಿ ಹೊಂದಿದ್ದರೆ ಒಂದು ಜಮೀನಿನ ಬೆಳೆ ವಿಮೆ ಪಾವತಿಸಿದ ಬಳಿಕ ಇನ್ನೊಂದು ಸರ್ವೇ ಸಂಖ್ಯೆಯ ಬೆಳೆಗೆ ವಿಮೆ ಪಾವತಿಸಲು ಸಾಧ್ಯವಾಗುತ್ತಿಲ್ಲ. ಆನ್‌ಲೈನ್‌ ಅರ್ಜಿ ಹಣ ಪಾವತಿ ಮಾಡುವಾಗ ರಿಜೆಕ್ಟ್ ಮಾಡುತ್ತಿದೆ. ಇದರಿಂದ ಒಂದಕ್ಕಿಂತ ಹೆಚ್ಚು ಜಮೀನು ಹೊಂದಿದ ರೈತರು ವಿಮೆ ಭರಿಸಲು ಸಾಧ್ಯವಾಗುತ್ತಿಲ್ಲ. ಈ ಕಾರಣದಿಂದ ಅನೇಕ ರೈತರು ಈ ಯೋಜನೆಯಿಂದ ವಂಚಿತರಾಗುತ್ತಿದ್ದು, ಸಮಸ್ಯೆ ಸರಿಪಡಿಸಲು ಆಗ್ರಹಿಸಿದ್ದಾರೆ.

ಹೆಸರು ಮ್ಯಾಚ್‌ ಆಗದ್ದನ್ನು ಸರಿಪಡಿಸಲಾಗಿದೆ. ರೈತರು ಇವತ್ತಿನಿಂದ ಈ ಯೋಜನೆಯ ಸದುಪಯೋಗಪಡೆದುಕೊಳ್ಳಬೇಕು. ಸದ್ಯ ಇವತ್ತಿಂದ ಒಂದೇ ಭೂಮಿಯ ಬೆಳೆಗೆ ಮಾತ್ರ ವಿಮೆ ಪಾವತಿ ಆಗುತ್ತಿರುವುದು ಗಮನಕ್ಕೆ ಬಂದಿದ್ದು, ಅದನ್ನೂ ಸರಿಪಡಿಸುವ ಕೆಲಸ ಮಾಡುತ್ತೇವೆ. – ಶ್ವೇತಾ ಹಾಡಕರ್‌, ತೋಟಗಾರಿಕಾ ನಿರ್ದೇಶಕರು, ಅಥಣಿ.

ನಮ್ಮದು ಮೂರು ದ್ರಾಕ್ಷಿ ತೋಟಗಳಿವೆ. ಸದ್ಯ ಒಂದಕ್ಕೆ ವಿಮೆ ಪಾವತಿಸಿದ್ದೇನೆ. ಇನ್ನೂ ಎರಡು ದ್ರಾಕ್ಷಿ ತೋಟಗಳಿಗೂ ವಿಮೆ ಪಾವತಿಸಬೇಕಿದೆ. ಆನ್‌ಲೈನ್‌ ಅರ್ಜಿ ಸ್ವೀಕರಿಸುತ್ತಿಲ್ಲ. ಈ ಹಿಂದೆ ಹೀಗಿರಲಿಲ್ಲ. ಪ್ರಸಕ್ತ ವರ್ಷ ಈ ಸಮಸ್ಯೆ ಎದುರಾಗಿದ್ದು, ತಕ್ಷಣದಿಂದಲೇ ಸರಿಪಡಿಸಿದರೆ ಅನುಕೂಲವಾಗುತ್ತದೆ. – ಬಸೀರಹ್ಮದ ಮುಜಾವರ, ದ್ರಾಕ್ಷಿ ಬೆಳೆಗಾರ, ತೆಲಸಂಗ

ಟಾಪ್ ನ್ಯೂಸ್

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.