30ರೊಳಗೆ ಸಾವಿರ ಚಾರ್ಜಿಂಗ್‌ ಕೇಂದ್ರ ಸ್ಥಾಪನೆ; ಸಚಿವ ಸುನೀಲ್‌ ಕುಮಾರ್‌

ಯುವಕರಲ್ಲಿ ಜಾಗೃತಿ ಮೂಡಿಸಲು ರಾಜ್ಯದ ನಾಲ್ಕು ಕಡೆ ಗಳಿಂದ ರಥ ಯಾತ್ರೆ ಹೊರಡಿಸಲಾಗುತ್ತಿದೆ

Team Udayavani, Jun 9, 2022, 5:54 PM IST

30ರೊಳಗೆ ಸಾವಿರ ಚಾರ್ಜಿಂಗ್‌ ಕೇಂದ್ರ ಸ್ಥಾಪನೆ; ಸಚಿವ ಸುನೀಲ್‌ ಕುಮಾರ್‌

ಹಾಸನ: ಎಲೆಕ್ಟ್ರಿಕ್‌ ವಾಹನಗಳಿಗೆ ಉತ್ತೇಜನ ಕೊಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಜೂ.24 ರಿಂದ 30ರವರೆಗೆ ಎಲೆಕ್ಟ್ರಿಕ್‌ ವಾಹನಗಳ ಚಾರ್ಜಿಂಗ್‌ ಕೇಂದ್ರ ತೆರೆಯುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಒಂದು ಸಾವಿರ ಚಾರ್ಜಿಂಗ್‌ ಕೇಂದ್ರ ತೆರೆಯಲಾಗುವುದು ಎಂದು ಇಂಧನ ಸಚಿವ ಸುನೀಲ್‌ ಕುಮಾರ್‌ ಅವರು ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲೆಕ್ಟ್ರಿಕ್‌ ವಾಹನಗಳ ಬಳಕೆ ಉತ್ತೇಜಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್‌ ವಾಹನಗಳ ಹೆಚ್ಚು ಚಾರ್ಜಿಂಗ್‌ ಸೆಂಟರ್‌ ತೆರೆಯಲು ಪ್ರೋತ್ಸಾಹಿಸ ಬೇಕು. ಈ ನಿಟ್ಟಿನಲ್ಲಿ ಇಂಧನ ಇಲಾಖೆ ವತಿಯಿಂ ದ ಜೂ.24 ರಿಂದ 30ರ ವರೆಗೂ ಒಂದು ಸಾವಿ ರಕ್ಕೂ ಹೆಚ್ಚು ಎಲೆಕ್ಟ್ರಿಕ್‌ ಚಾರ್ಜಿಂಗ್‌ ಸೆಂಟರ್‌ಗಳ ಪ್ರಾರಂಭಿಸಿ, ಮೂರುವರೆ ಸಾವಿರ ಎಲೆಕ್ಟ್ರಿಕ್‌ ಪ್ಲಗ್‌ ಗಳನ್ನು ಒದಗಿಸಲಾಗುವುದು.

ದಿನೆ-ದಿನೇ ಎಲೆಕ್ಟ್ರಿಕ್‌ ವಾಹನಗಳ ಬಳಕೆ ಹೆಚ್ಚಾಗುತ್ತಿರುವ ಇಂದಿನ ಸಂದರ್ಭದಲ್ಲಿ ಇವಿಗಳಿಗೆ ಬೇಕಾಗಿರುವ ಮೂಲಭೂತ ಸೌಕರ್ಯವನ್ನು ಇಂಧನ ಇಲಾಖೆಯಿಂದ ಒದಗಿಸಿಕೊಡುವ ಹಿನ್ನೆಲೆ ರಾಜ್ಯಾ ದ್ಯಂತ ಚಾರ್ಜಿಂಗ್‌ ಸೆಂಟರ್‌ಗಳ ಆರಂಭದ ಅಭಿಯಾನ ಆರಂಭವಾಗಲಿದೆ ಎಂದರು.

3200 ಚಾರ್ಜಿಂಗ್‌ ಕೇಂದ್ರ ಸ್ಥಾಪನೆ: ಈ ಅಭಿಯಾನದ ಮೊದಲ ಹಂತದಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಎಲೆಕ್ಟ್ರಿಕ್‌ ಚಾರ್ಜಿಂಗ್‌ ಕೇಂದ್ರಗಳನ್ನು ಆರಂಭಿಸುವುದು. ಎರಡನೇ ಹಂತದಲ್ಲಿ ಪ್ರವಾಸೋದ್ಯಮದ ಸ್ಥಳ ಗಳಲ್ಲಿ ಕೇಂದ್ರ ಗಳಲ್ಲಿ , ಮೂರನೇ ಹಂತದಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಅವಶ್ಯಕತೆಯಿರುವ ಸ್ಥಳಗಳಲ್ಲಿ ಚಾರ್ಜಿಂಗ್‌ ಸೆಂಟರ್‌ ನಿರ್ಮಿಸಲಾಗುವುದು. ಜುಲೈ 30ರೊಳಗೆ 3200ಕ್ಕೂ ಹೆಚ್ಚು ಚಾರ್ಜಿಂಗ್‌ ಪ್ಲಗ್‌ಗಳನ್ನು ಇಡೀ ರಾಜ್ಯಾದ್ಯಂತ ಮಾಡಿ, ದೇಶದಲ್ಲಿ ಕರ್ನಾಟಕವೇ ಹೆಚ್ಚಿನ ಚಾರ್ಜಿಂಗ್‌ ಕೇಂದ್ರಗಳನ್ನು ಹೊಂದಿರುವ ರಾಜ್ಯವಾಗಬೇಕೆಂಬ ನಿಟ್ಟಿನಲ್ಲಿ ಅವಶ್ಯಕ ತಯಾರಿ ಮಾಡಿಕೊಳ್ಳ ಲಾಗುತ್ತಿದೆ ಎಂದು ಇಂಧನ ಸಚಿವರು ಹೇಳಿದರು.

ಹಸಿರು ಇಂಧನ ಉತ್ಪಾದನೆಗೆ ಒತ್ತು: ಪ್ರಸ್ತುತ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನಗಳು ದೊಡ್ಡ ಪ್ರಮಾಣದಲ್ಲಿ ಮಾರುಕಟ್ಟೆಗೆ ಬರುತ್ತಿದ್ದು, ಈ ವಾಹನಗಳಿಗೆ ಇನ್ನಷ್ಟು ಉತ್ತೇ ಜನ ನೀಡಲು ಎಲೆಕ್ಟ್ರಿಕ್‌ ಪ್ಲಗ್‌ಗಳ ಸಂಖ್ಯೆಯಲ್ಲಿ ಏರಿಕೆ ಆಗಬೇಕಾ ಗಿದೆ. ಹಸಿರು ಇಂಧನ ಉತ್ಪಾದನೆಗೆ ವಿಶೇಷವಾದ ಒತ್ತನ್ನು ಕೊಡಲಾಗುತ್ತಿದೆ. ಆ ಪ್ರಯುಕ್ತ ಒಂದು ಸಾವಿರ ಮೆಗಾವ್ಯಾಟ್‌ ಹಸಿರು ವಿದ್ಯುತ್‌ ಉತ್ಪಾದನೆ ಆಗಬೇಕು. ಈಗಾಗಲೇ 9 ಜಿಲ್ಲೆಗಳಲ್ಲಿ ಸರ್ವೆ ಕಾರ್ಯಗಳ ಪ್ರಾರಂಭಿಸಲಾಗಿದೆ. ಸೌರ ಮತ್ತು ಗಾಳಿ ವಿದ್ಯುತ್‌ ಉತ್ಪಾದನೆಗೆ ಸರ್ವೆ ಮಾಡಲಾಗುತ್ತಿದೆ.

ಡಿಪಿಆರ್‌ ಸಿದ್ಧವಾದ ನಂತರ ಒಂದು ಸಾವಿರ ವೆಗಾವ್ಯಾಟ್‌ ಹಸಿರು ವಿದ್ಯುತ್‌ ಉತ್ಪಾದನೆ ಮಾಡುವ ಗುರಿಯನ್ನು ರಾಜ್ಯ ಸರ್ಕಾರ ಈ ವರ್ಷ ಕೈಗೆತ್ತಿಕೊಳ್ಳಲಿದೆ. ಈ ನಿಟ್ಟಿನಲ್ಲಿ ಎಲ್ಲ ಪೂರ್ವ ಸಿದ್ಧತೆ ತಯಾರು ಮಾಡಿಕೊಳ್ಳಲಾಗಿದೆ ಎಂದರು.

35 ಕಡೆ ಅಮೃತ ಮಹೋತ್ಸವ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಅಮೃತ ಭಾರತಿಗೆ ಕನ್ನಡ ಆರತಿ ಕಾರ್ಯಕ್ರಮ ರಾಜಾದ್ಯಂತ ನಡೆಯುತ್ತಿದೆ. ಜೂ.25ರಂದು ರಾಜ್ಯದ 35 ಕಡೆಗಳಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ. ಆ.1ರಿಂದ ವಿದ್ಯಾರ್ಥಿಗಳಲ್ಲಿ ಮತ್ತು ಯುವಕರಲ್ಲಿ ಜಾಗೃತಿ ಮೂಡಿಸಲು ರಾಜ್ಯದ ನಾಲ್ಕು ಕಡೆ ಗಳಿಂದ ರಥ ಯಾತ್ರೆ ಹೊರಡಿಸಲಾಗುತ್ತಿದೆ. ಆ.9 ರಂದು ಬೆಂಗಳೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಸಿದ್ದುಗೆ ಬುದ್ಧಿ ಹೇಳುವಷ್ಟು ದೊಡ್ಡವನಲ್ಲ: ಚಡ್ಡಿ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು , ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಬುದ್ಧಿ ಹೇಳುವಷ್ಟು ನಾನು ದೊಡ್ಡ ವನಲ್ಲ. ಆದರೇ, ವಿವಾದವನ್ನು ಹುಟ್ಟು ಹಾಕುತ್ತಿರುವ ಅವರ ವಿಕೃತ ಮನಸ್ಸನ್ನು ಸುಟ್ಟು ಹಾಕಬೇಕು. ಜಾತಿ – ಜಾತಿಗಳ ನಡುವೆ ವಿಷ ಬೀಜವನ್ನು ಬಿತ್ತುವ ಸಿದ್ದರಾಮಯ್ಯನವರ ಮನಸ್ಥಿತಿ ಸುಟ್ಟುಹಾಕಬೇಕಾಗಿದೆ ಎಂದರು.

ಕೀಳು ಮಟ್ಟದ ಹೇಳಿಕೆಗೆ ಕಿಡಿ: ಟಿಪ್ಪು ಸುಲ್ತಾನನ ವೈಭವೀಕರಣ ಮಾಡಿ ಹಿಂದೂಗಳ ಅವಹೇಳನ ಮಾಡುವ ಭಾವನೆಗಳನ್ನು ಸುಡಬೇಕು ಕಿರಿಯ ಶಾಸಕರು ಮತ್ತು ಕಿರಿಯ ಸಚಿವರಿಂದ ಬುದ್ಧಿಯನ್ನು ಹೇಳಿಸಿಕೊಳ್ಳುವ ಪರಿಸ್ಥಿತಿ ಸಿದ್ದರಾಮಯ್ಯ ಅವರಿಗೆ ಬರಬಾರದು. ಆರ್‌ಎಸ್‌ಎಸ್‌ ಪ್ರಸ್ತುತ ಇಡೀ ಜಗತ್ತನ್ನು ಮೆಚ್ಚಿಕೊಂಡಿರುವ ಸಂಸ್ಥೆಯಾಗಿದೆ. ಆರ್‌ ಎಸ್‌ಎಸ್‌ ಎಂದರೇ ತ್ಯಾಗ, ಬಲಿದಾನ, ಪ್ರಾಮಾಣಿಕತೆ ಹಾಗೂ ಸೇವೆಯಾಗಿದ್ದು, ಆ ಸಂಸ್ಥೆ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡುವುದು ಯಾವುದೇ ವ್ಯಕ್ತಿಗೆ ಶೋಭೆ ತರುವುದಿಲ್ಲ. ಈ ವಿಕೃತ ಮನಸ್ಸುಗಳನ್ನು ಸುಟ್ಟು ಹಾಕಬೇಕಾಗಿರುವುದು ಸಿದ್ದರಾಮಯ್ಯರವರ ಮೊದಲ ಆದ್ಯತೆ ಆಗಬೇಕು ಎಂದು ತಿರುಗೇಟು ನೀಡಿದರು.

ರಾಜ್ಯದಲ್ಲಿ ಒಂದು ಒಳ್ಳೆಯ ಸರ್ಕಾರ ಆಡಳಿತ ನಡೆಯುತ್ತಿರುವ ವೇಳೆ ಅಂತಹ ಆಡಳಿತದ ಕಡೆಗೆ ಜನರ ಮನಸ್ಸು ಹೋಗದಿರಲಿ ಎಂದು ವಿವಾದಗಳನ್ನು ಸೃಷ್ಟಿಸುವ ಮೂಲಕ ಕಾಂಗ್ರೆಸ್‌ ತನ್ನ ಅಸ್ತಿತ್ವ ತೋರಿಸುವ ಪ್ರಯತ್ನವನ್ನು ಮಾಡುತ್ತಿದೆ. ಆದರೇ ಅದು ಬಹಳ ದಿನ ನಡೆಯಲು ಸಾಧ್ಯವಿಲ್ಲ. ನಾವು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರಿ ಆದೇಶವಾಗಿ ಜನರನ್ನು ತಲಪುವ ಕೆಲಸ ಪ್ರಾರಂಭವಾಗಿದೆ. ಜನಮನದಲ್ಲಿ
ಇರುವ ಭಾವನೆ ದೂರ ಮಾಡಲು ಕಾಂಗ್ರೆಸ್‌ ಮುಂದಾಗಿದೆ. ಆದರೆ, ಬಿಜೆಪಿ ಕಾರ್ಯಕರ್ತರು ಬಜೆಟ್‌ ಘೋಷಣೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಮಾಡುತ್ತಿದೇವೆ ಎಂದರು.

ಕಾಂಗ್ರೆಸ್‌ನಿಂದ ವಿವಾದಗಳ ಸೃಷ್ಟಿ: ಸಚಿವ
ಪಠ್ಯಪುಸ್ತಕ ಪರಿಷ್ಕರಣೆ ವಿವಾದವನ್ನು ಕಾಂಗ್ರೆಸ್‌ನವರು ಹುಟ್ಟು ಹಾಕುತ್ತಿದ್ದಾರೆ. ಎಲ್ಲಿ ಲೋಪ ದೋಷಗಳಾಗಿವೆಯೋ ಅದನ್ನ ಸರಿಪಡಿಸಿಕೊಳ್ಳಲು ಮುಕ್ತ ಮನಸ್ಸನ್ನ ಹೊಂದಿರುವ ಬಗ್ಗೆ ಈಗಾಗಲೇ ಮುಖ್ಯಮಂತ್ರಿಯ ವರು ಸ್ಪಷ್ಟಪಡಿಸಿದ್ದಾರೆ. ಕೆಲ ಸತ್ಯಸಂಗತಿಗಳು ಕೆಲವರಿಗೆ ಕಹಿಯಾಗಿ ಕಾಣುತ್ತಿರುವುದಕ್ಕೆ ನಾವು ಏನೂ ಮಾಡುವುದಕ್ಕೆ ಆಗುವುದಿಲ್ಲ. ಹಾಗೆಯೇ ಸತ್ಯವನ್ನು ಮುಚ್ಚಿಡಲು ಕೂಡ ಸಾಧ್ಯವಿಲ್ಲ. ಇತಿಹಾಸದಲ್ಲಿ ಯಾವ ಸತ್ಯ ಸಂಗತಿಗಳನ್ನ ಮುಚ್ಚಿಡಲಾಗಿತ್ತೋ ಅದನ್ನು ತಿಳಿಸುವ ಪ್ರಯತ್ನ ಮಾಡಲಾಗಿದೆ. ಕೆಲ ಸಾಲುಗಳಲ್ಲಿ ಲೋಪ ದೋಷಗಳಾಗಿರಬಹುದು. ಆದರೇ ಅದನ್ನು ಸರಿಪಡಿಸುವುದಾಗಿ ಸ್ವತಃ ಮುಖ್ಯಮಂತ್ರಿಯವರೇ ಹೇಳಿದ್ದಾರೆ. ವಿವಾದಗಳು ಇಲ್ಲ ಎನ್ನುವ ಕಾರಣಕ್ಕೆ ವಿವಾದವನ್ನು ಹುಟ್ಟಿ ಹಾಕಲಾಗುತ್ತಿದೆ ಎಂದು ಇಂಧನ ಸಚಿವ ಸುನೀಲ್‌ ಕುಮಾರ್‌ ಲೇವಡಿ ಮಾಡಿದರು.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.