ತೆಲಂಗಾಣ ಮೇಲೆ ಬಿಜೆಪಿ ಕಣ್ಣು : ಮುಂದಿನ ವರ್ಷದ ಚುನಾವಣೆಗೆ ಈಗಲೇ ನಡೆಯುತ್ತಿದೆ ಸಿದ್ಧತೆ
Team Udayavani, Jun 10, 2022, 6:15 AM IST
ಹೊಸದಿಲ್ಲಿ: ಮುಂದಿನ ವರ್ಷ ನಡೆಯಲಿರುವ ತೆಲಂಗಾಣ ಚುನಾವಣೆಗೆ ಬಿಜೆಪಿ ಈಗಾಗಲೇ ಭರದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಅದಕ್ಕಾಗಿ, ಜು. 2 ಹಾಗೂ 3ರಂದು ತೆಲಂಗಾಣದ ರಾಜಧಾನಿಯಾದ ಹೈದರಾಬಾದ್ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯನ್ನು ನಡೆಸಲು ಉದ್ದೇಶಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಪಕ್ಷದ ಧುರೀಣರೆಲ್ಲರೂ ಭಾಗಿಯಾಗಲಿದ್ದಾರೆ.
ಕಾರ್ಯಕಾರಿಣಿಗೆ ಹೈದರಾಬಾದ್ ಮಹಾನಗರ ಪಾಲಿಕೆಯಲ್ಲಿರುವ ಎಲ್ಲ ಬಿಜೆಪಿ ಕಾರ್ಪೊರೇಟರ್ಗಳನ್ನೂ ಆಹ್ವಾನಿಸಲಾಗಿದೆ. ಪಕ್ಷವು ಜನರ ಮೆಚ್ಚುಗೆ ಗಳಿಸಲು ಅಳವಡಿಸಿಕೊಳ್ಳಬೇಕಾದ ಕಾರ್ಯಕ್ರಮಗಳು, ಚುನಾವಣೆಯಲ್ಲಿ ಪಕ್ಷಕ್ಕೆ ಹೆಚ್ಚಿನ ಸ್ಥಾನಗಳು ಬರುವಂತೆ ಮಾಡಲು ಅನುಷ್ಠಾನಗೊಳಿಸ ಬಹುದಾದ ಯೋಜನೆಗಳ ಬಗ್ಗೆ ಚರ್ಚೆಗಳು ನಡೆಯಲಿವೆ ಎನ್ನಲಾಗಿದೆ.
ಇದನ್ನೂ ಓದಿ : ಮುಂದಿನ ಎಲೆಕ್ಷನ್ನಲ್ಲೂ ಸ್ಪರ್ಧಿಸುವೆ: ನಟ ಕಮಲ್ ಹಾಸನ್