ವಿಪ ಚುನಾವಣೆ: ಮತಯಾಚನೆ ಜೋರು

ಶಿಕ್ಷಕರ-ಪದವೀಧರರ ಅಭಿವೃದ್ಧಿಗೆ ಕಾಂಗ್ರೆಸ್‌ ಬೆಂಬಲಿಸಿ: ಎಸ್ಸಾರ್ಪಿ

Team Udayavani, Jun 10, 2022, 10:26 AM IST

3

ರಬಕವಿ-ಬನಹಟ್ಟಿ: ರಾಜ್ಯದ ಶಿಕ್ಷಕರ ಮತ್ತು ಪದವೀಧರರ ಅಭಿವೃದ್ಧಿ ಕಾಂಗ್ರೆಸ್‌ ಪಕ್ಷದಿಂದ ಮಾತ್ರ ಸಾಧ್ಯ. ಆದ್ದರಿಂದ ಮುಂಬರುವ ವಿಧಾನ ಪರಿಷತ್‌ ಚುನಾವಣೆಯಲ್ಲಿ ಶಿಕ್ಷಕರ ಮತಕ್ಷೇತ್ರದ ಪ್ರಕಾಶ ಹುಕ್ಕೇರಿ ಮತ್ತು ಪದವೀಧರ ಕ್ಷೇತ್ರದ ಸುನೀಲ ಸಂಕ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಬೇಕು ಎಂದು ಮಾಜಿ ಸಚಿವ ಎಸ್‌.ಆರ್‌.ಪಾಟೀಲ ತಿಳಿಸಿದರು.

ಬುಧವಾರ ದಾನೇಶ್ವರಿ ಕಲ್ಯಾಣ ಮಂಟಪದಲ್ಲಿ ನಡೆದ ವಿಧಾನ ಪರಿಷತ್‌ ಚುನಾವಣೆಯ ಕಾಂಗ್ರೆಸ್‌ ಪರ ಅಭ್ಯರ್ಥಿಗಳ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಪ್ರಕಾಶ ಹುಕ್ಕೇರಿ ರೈತರ ಸಲುವಾಗಿ ಹಲವಾರು ಹೋರಾಟ ಮಾಡಿದ್ದಾರೆ. ಅವರ ಹೋರಾಟದಿಂದ ರಾಜ್ಯದ ಕಬ್ಬು ಬೆಳೆಗಾರರಿಗೆ ಮತ್ತು ಸರ್ಕಾರಕ್ಕೆ ಅನುಕೂಲವಾಗಿದೆ. ಮುಂದಿನ ದಿನಗಳಲ್ಲಿ ಅವರು ಶಿಕ್ಷಕರ ಅಭಿವೃದ್ಧಿಗಾಗಿ ಶ್ರಮಿಸುತ್ತಾರೆ. ಶಿಕ್ಷಣ ಕ್ಷೇತ್ರದ ಅಸಮಾನತೆ ಹೋಗಲಾಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಾರೆ ಎಂದು ಎಸ್‌.ಆರ್‌ .ಪಾಟೀಲ ತಿಳಿಸಿದರು.

ಇದೇ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮಾತನಾಡಿ, ಕಾಂಗ್ರೆಸ್‌ ಪಕ್ಷ ಎಲ್ಲ ವರ್ಗದ ಜನರ ಅಭಿವೃದ್ಧಿಗಾಗಿ ಶ್ರಮಿಸಿದೆ. ದೇಶ ಮತ್ತು ರಾಜ್ಯದ ಸವಾಂìಗೀಣ ಅಭಿವೃದ್ಧಿಯಲ್ಲಿ ಕಾಂಗ್ರೆಸ್‌ ಕೊಡುಗೆ ಅಪಾರ. ಬಿಜೆಪಿ ಸರಕಾರ ಕಳೆದ ಮೂರುವರೆ ವರ್ಷದಲ್ಲಿ ಜಾತಿ, ಜಾತಿ ಧರ್ಮದಲ್ಲಿ ಹೊಡೆದಾಟ ನಡೆಸಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಕರ್ನಾಟಕದಲ್ಲಿ ಬದಲಾವಣೆ ತರುವುದು ಅವಶ್ಯವಾಗಿದೆ. ಆ ನಿಟ್ಟಿನಲ್ಲಿ ಕಾಂಗ್ರೆಸ್‌ ಬೆಂಬಲಿಸಿ. ಪ್ರಕಾಶ ಹುಕ್ಕೇರಿ ಜನಪರ ಕಳಕಳಿಯ ನಾಯಕರಾಗಿದ್ದಾರೆ ಎಂದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಶರ್ಮಾ ಮಾತನಾಡಿ, ಪ್ರಕಾಶ ಹುಕ್ಕೇರಿ ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದಾರೆ. ಅವರಿಗೂ ಕೂಡಾ ಶಿಕ್ಷಕರ ಸಮಸ್ಯೆಗಳು ಗೊತ್ತಿವೆ. ಮುಂದಿನ ದಿನಗಳಲ್ಲಿ ಅವುಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವೆ ಉಮಾಶ್ರೀ, ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಜಿ.ನಂಜಯ್ಯನಮಠ, ಗಣೇಶ ಹುಕ್ಕೇರಿ ಮಾತನಾಡಿದರು.

ರಾಜೇಂದ್ರ ಭದ್ರನ್ನವರ, ಬಸವರಾಜ ಕುಮಸಗಿ, ದಯಾನಂದ ಪಾಟೀಲ, ಸತ್ಯಪ್ಪ ಮಗದುಮ, ಬಸವರಾಜ ಕೊಣ್ಣೂರ, ಶಂಕರ ಜಾಲಿಗಿಡದ, ರಾಜು ಭದ್ರನವರ, ಡಾ| ಎ.ಆರ್‌.ಬೆಳಗಲಿ, ಪ್ರವೀಣ ನಾಡಗೌಡ, ನಂದು ಪಾಟೀಲ, ಸಿದ್ದಪ್ಪ ಮೇಣಿ, ಮಲ್ಲಪ್ಪ ಸಿಂಗಾಡಿ. ಲಕ್ಷ್ಮಣ ದೇಸಾರಟ್ಟಿ, ಸಿದ್ದು ಕೊಣ್ಣೂರ, ಬಸವರಾಜ ಗುಡೋಡಗಿ, ರಾಹುಲ ಕಲಾಲ ಇದ್ದರು.

ಟಾಪ್ ನ್ಯೂಸ್

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

3-mahalingapur

Mahalingpur: ತೆರಬಂಡಿ ಸ್ಪರ್ಧೆಯ ಹೋರಿ ದಾಖಲೆಯ 10.10 ಲಕ್ಷಕ್ಕೆ ಖರೀದಿಸಿದ ರೈತ

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

47 Lakhs collected for Kanhaiya Campaign!

Kanhaiya Kumar ಕ್ಯಾಂಪೇನ್‌ಗೆ 47 ಲಕ್ಷ ರೂ. ದೇಣಿಗೆ ಸಂಗ್ರಹ!

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Balagopal

Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.